ವಿದ್ಯುತ್ ಸದ್ಬಳಕೆ : ನಾಗರಿಕರಿಗೆ ತರಬೇತಿ ಅಗತ್ಯವಿದೆ
ಪ್ರಶ್ನೆ : ವಿದ್ಯುತ್ ಆಘಾತಗಳನ್ನು ತಡೆಗಟ್ಟಲು ನಾಗರಿಕರಿಗೆ ತರಬೇತಿ ನೀಡುವ ಅಗತ್ಯವಿದೆಯೆ? ಹೌದು ಎಂದಾದರೆ ನಿಮ್ಮ ಯೋಜನೆಗಳೇನು?
ಉತ್ತರ : ಖಂಡಿತ ಹೌದು. ವಿದ್ಯುತ್ ಶಾಕ್ನಿಂದ ದೂರವಿರಲು ನಾಗರಿಕರಲ್ಲಿ ಜಾಗೃತಿ ಮೂಡಿಸುವುದು ಅತೀ ಅಗತ್ಯ. ಕಂಪನಿಯ ಉದ್ಯೋಗಿಗಳ ಸುರಕ್ಷತೆಗಾಗಿ ಪ್ರತಿವರ್ಷ ಬೆಸ್ಕಾಂ 50 ಲಕ್ಷ ರು. ವಿನಿಯೋಗಿಸುತ್ತಿದೆ. ಇದನ್ನು 2013-14ರಲ್ಲಿ 92 ಲಕ್ಷ ರು.ಗೆ ಏರಿಸಲಾಗಿದೆ. ಇದರ ಜೊತೆಗೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಹೋರ್ಡಿಂಗ್, ವೃತ್ತಪತ್ರಿಕೆ, ಮ್ಯಾಗಜೀನ್ಗಳಲ್ಲಿ ಜಾಹೀರಾತು ನೀಡುವುದಕ್ಕಾಗಿ 60-70 ಲಕ್ಷ ರು.ಗಳನ್ನು ವಿನಿಯೋಗಿಸಲಾಗುತ್ತಿದೆ. ಈ ವರ್ಷ ಬೆಂಗಳೂರಿನಲ್ಲಿ 15 ಹೋರ್ಡಿಂಗ್ ಮೂಲಕ ಜಾಗೃತಿ ಮೂಡಿಸಲು 2 ಕೋಟಿ ರು. ವ್ಯಯಿಸುತ್ತಿದೆ.
ಬೆಸ್ಕಾಂ ಅಡಿಯಲ್ಲಿ ಬರುವ 8 ಸರ್ಕಲ್ಗಳಿಗೆ ಜನರ ಸುರಕ್ಷತೆಯಾಗಿ ಮುಕ್ತ ನಿರ್ಣಯ ತೆಗೆದುಕೊಳ್ಳಲು ಸಂಪೂರ್ಣ ಅಧಿಕಾರ ನೀಡಲಾಗಿದೆ. ಜೊತೆಗೆ ಎಲ್ಲ ಟ್ರಾನ್ಸ್ಫಾರ್ಮರ್, ಫೀಡರ್ ಬಾಕ್ಸ್ ಗಳ ಮೇಲೆ ಜನರ ಸುರಕ್ಷತೆಗಾಗಿ ಮತ್ತು ಅಪಘಾತದಿಂದ ದೂರವಿರಲು ಹಲವಾರು ಉಪಯುಕ್ತ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಸಾರ್ವಜನಿಕರು ಕೂಡ ಬೆಸ್ಕಾಂ ಜೊತೆ ಸಹಕರಿಸಬೇಕು.

ಪ್ರಶ್ನೆ : ಮುಂಗಾರಿನ ಸಮಯದಲ್ಲಿ ತೊಂದರೆಗಳನ್ನು ಎದುರಿಸಲು ಏನು ಯೋಜನೆ ಹೂಡಲಾಗಿದೆ?
ಉತ್ತರ : ಮೇ 22ರಂದು ಬೆಂಗಳೂರು ನಗರದಲ್ಲಿ ಸುರಿದ ದಾಖಲೆ ಮಳೆ ನಮಗೆ ಪರೀಕ್ಷೆಯ ಹಂತವಾಗಿತ್ತು. ಮರಗಳು ಬುಡಮೇಲಾಗುವುದು, ಪ್ರವಾಹ ಸಂಭವಿಸುವುದರಿಂದ ಕಂಡಕ್ಟರುಗಳು ಕೆಲಸ ಸ್ಥಗಿತಗೊಳಿಸುತ್ತವೆ, ಶಾರ್ಟ್ ಸರ್ಕಿಟ್ ಉಂಟಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಇಂಥ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ನಮ್ಮ ಸಹಾಯವಾಣಿ (080-22873333) ಬಲಪಡಿಸುವ ಉದ್ದೇಶದಿಂದ, ಪ್ರಸ್ತುತವಿರುವ 45 ಲೈನುಗಳಿಗೆ 15 ಲೈನುಗಳನ್ನು ಸೇರಿಸಲಾಗಿದೆ.
ಮುಂಗಾರನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಭಾರೀ ಮಳೆ ಸುರಿದಾಗ ಹಲವಾರು ಲೈನುಗಳು ಕಾರ್ಯನಿರತವಾಗಿರುವುದರಿಂದ ಹೆಚ್ಚಿನ ಅನುಕೂಲವಾಗಲೆಂದು ಲೈನುಗಳ ಸಂಖ್ಯೆಯನ್ನು 60ಕ್ಕೆ ಹೆಚ್ಚಿಸಲಾಗಿದೆ. ಸದ್ಯಕ್ಕಿರುವ 110 ತಂಡಗಳಿಗೆ ಇನ್ನೂ 50 ತಂಡಗಳನ್ನು ಸೇರಿಸಲಾಗಿದ್ದು, ವಾಹನ, ಸಲಕರಣೆಗಳೊಂದಿಗೆ ಪರಿಹಾರ ಕಾರ್ಯಕ್ಕೆ ನುಗ್ಗಲು ಸಜ್ಜಾಗಿರುತ್ತೇವೆ. ನಗರದಲ್ಲಿ 160 ವಾಹನಗಳಿದ್ದು, ಗ್ರಾಮಾಂತರ ಪ್ರದೇಶದಲ್ಲಿ 20 ವಾಹನಗಳಿರುತ್ತವೆ. ಅಗತ್ಯಬಿದ್ದರೆ ಒಂದಕ್ಕಿಂತ ಹೆಚ್ಚು ವಾಹನ ಮತ್ತು ಕ್ರೇನ್ಗಳನ್ನು ಬಳಸಲು ಅನುಮತಿ ನೀಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications