ಬಂಗೇರಗೆ ಅಪಮಾನ ತುಳುನಾಡ್ ಒಕ್ಕೂಟ ಕಿಡಿ
ಬೆಳ್ತಂಗಡಿ, ಜೂ.5: ಸುಮಾರು 9 ವರ್ಷಗಳ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಹೊಸತುಗಳಿಗೆ ವಿಧಾನಸಭೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಶಾಸಕರಷ್ಟೇ ಅಲ್ಲದೆ ಇತರೆ ಪಕ್ಷದ ಶಾಸಕರು ತಮ್ಮಿಷ್ಟದಂತೆ ಪ್ರಮಾಣ ವಚನ ಸ್ವೀಕರಿಸಿದ್ದು ಗೊತ್ತೇ ಇದೆ. ಈಗ ಇದೇ ವಿಷಯ ತುಳುನಾಡಿನಲ್ಲಿ ಭಾರಿ ಚರ್ಚೆಗೊಳಗಾಗಿದೆ.
ವಿಧಾನಸಭೆಯಲ್ಲಿ ಮೇ 30ರಂದು ಬೆಳ್ತಂಗಡಿ ಶಾಸಕ ವಸಂತ ಬಂಗೇರ ಅವರು ತಮ್ಮ ಮಾತೃಭಾಷೆ ತುಳುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದರೆ, ಆ ಸಂದರ್ಭದಲ್ಲಿ ಹಂಗಾಮಿ ಸ್ಪೀಕರ್ ಆಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ತುಳುಭಾಷೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಲ್ಲ. ನೀವು ತುಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಅದು ಅಸಿಂಧುವಾಗಲಿದೆ ಎಂದಿದ್ದರು.
ಈ ವಿಷಯ ಬೆಳ್ತಂಗಡಿಯ ತುಳುನಾಡ್ ಒಕ್ಕೂಟವನ್ನು ಕೆರಳಿಸಿದೆ. ಶಾಸಕ ವಸಂತ ಬಂಗೇರ ಅವರು ತುಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷೆಯ ಅಸ್ತಿತ್ವ ಹಾಗೂ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ.

ಇದು ತುಳುವರ ಸ್ವಾಭಿಮಾನಕ್ಕೆ ಸಿಕ್ಕ ಗೌರವವಾಗಿದೆ. ಕಾನೂನು ಪ್ರಕಾರ ಬಂಗೇರ ಅವರು ತಪ್ಪ್ಪು ಎಸಗಿದ್ದಾರೆ ಎಂದು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಲ್ಲ ಎಂದು ಸ್ಪೀಕರ್ ಹೇಳಿರುವುದು ತುಳುವರ ಭಾಷಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ತುಳುನಾಡ್ ಒಕ್ಕೂಟ ಕಿಡಿಕಾರಿದೆ.
ವ್ಯಾಪಕ ಖಂಡನೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ಅವರು ಬಂಗೇರ ಅವರ ಕ್ರಮವನ್ನು ಸಮರ್ಥಿಸಿದ್ದರು. ಮೂರು ಜಿಲ್ಲೆಗಳ 75 ಲಕ್ಷ ಮಂದಿಯ ಮಾತೃಭಾಷೆ. ಮರಾಠಿ ಭಾಷೆಯ ಪ್ರತಿಜ್ಞೆಗೆ ಅವರು ಆಕ್ಷೇಪ ವ್ಯಕ್ತಪಡಿಸಬೇಕಿತ್ತು. ತುಳುವಿಗೆ ಸಾಂವಿಧಾನಿಕ ಮಾನ್ಯತೆ ಸಿಕ್ಕಿಲ್ಲ ಎಂದಾದರೆ, ಅದು ಆಡಳಿತದ ವಿಳಂಬ ಎಂದು ಪ್ರತಿಕ್ರಿಯಿಸಿದ್ದರು. ಸಂಸದ ನಳೀನ್ ಕುಮಾರ್ ಕಟೀಲ್ ಕೂಡಾ ಇದಕ್ಕೆ ದನಿಗೂಡಿಸಿದ್ದಾರೆ.
ಹಿಸ್ಟರಿ ರಿಪೀಟ್ಸ್ : ಈ ಹಿಂದೆ ಡಿ.ವಿ. ಸದಾನಂದ ಗೌಡರು ಸಂಸತ್ತಿನಲ್ಲಿ ತುಳುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ಮುಂದಾದಾಗಲೂ ಇದೇ ಸಮಸ್ಯೆ ಉಂಟಾಗಿತ್ತು.
ಆದರೆ, ಕೇರಳ ವಿಧಾನಸಭೆಯಲ್ಲಿ ಮಂಜೇಶ್ವರ ಶಾಸಕರು ತುಳುವಿನಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ ಹಾಗೂ ಅದು ಸಿಂಧುವಾಗಿದೆ ಎಂಬುದು ಗಮನಾರ್ಹ.
ಚಾರಿತ್ರಿಕ, ಸಾಂಸ್ಕೃತಿಕ, ಸಾಹಿತ್ಯಿಕ ಹಿನ್ನೆಲೆ ಇರುವ ತುಳುವಿಗೆ ಸಾಂವಿಧಾನಿಕ ಮಾನ್ಯತೆ ಸಿಗಲೇಬೇಕಾದ ಅನಿವಾರ್ಯತೆ ಈಗ ಎದುರಾಗಿದೆ.
ಬಂಗೇರ ಏನು ಹೇಳುತ್ತಾರೆ? : ವಿಧಾನಸಭೆ ಕಲಾಪ ಆರಂಭವಾಗುವ ಅರ್ಧ ಗಂಟೆ ಮೊದಲೇ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಮನವಿ ಪತ್ರವನ್ನು ನಾನು ಸ್ಪೀಕರ್ ಅವರಿಗೆ ಕಳುಹಿಸಿಕೊಟ್ಟಿದ್ದೆ.
ಬಳಿಕ ತುಳುವಿನಲ್ಲೇ ಪ್ರಮಾಣವಚನ ಓದಿದೆ. ಆಕ್ಷೇಪ ಬಂದ ಕಾರಣ ಇನ್ನೇನು ಮಾಡಬೇಕೆಂದು ಕೇಳಿದೆ. ಮತ್ತೊಮ್ಮೆ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವಂತೆ ಸೂಚಿಸಿದರು. ಅದರ ಪ್ರಕಾರ ನಡೆದುಕೊಂಡೆ. ನಾನು ತುಳುನಾಡಿನವನಾದ ಕಾರಣ ತುಳುವಿನಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದೆ.
ಹಿಂದೆ 1983ರಲ್ಲಿ ಮೊದಲ ಬಾರಿ ಶಾಸಕಾಗಿದ್ದಾಗಲೂ ತುಳುವಿನಲ್ಲೇ ಪ್ರಮಾಣವಚನ ಸ್ವೀಕರಿಸಿದ್ದೆ. ಆಗ ಬಾರದ ಆಕ್ಷೇಪ ಈಗೇಕೆ ಎಂದು ಕೇಳಿದೆ. ಆದರೆ ನಿಯಮ ಪ್ರಕಾರ ಸಾಧ್ಯವಿಲ್ಲ ಎಂದು ಸ್ಪೀಕರ್ ಉತ್ತರಿಸಿದರು
ಭರವಸೆ?: ತುಳುವರು ಬಹುಕಾಲದಿಂದ ಕಾಯುತ್ತಿರುವ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆ ಬೇಡಿಕೆ ಶೀಘ್ರದಲ್ಲಿ ಈಡೇರುವ ಕಾಲ ಸನ್ನಿಹಿತವಾಗಿದೆ. ಸದ್ಯದಲ್ಲೇ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ತುಳು ಭಾಷೆ ಸೇರ್ಪಡೆಯಾಗಲಿದೆ ಎಂದು ಕೇಂದ್ರ ಸಚಿವ ಎಂ ವೀರಪ್ಪ ಮೊಯ್ಲಿ ಭರವಸೆ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications