ಮೋಕಾ ಪಕಡ್ ಬಂಧಿ ಬಿಗಿ: ಶ್ರೀಶಾಂತ್ ಕಥೆ ಫಿನಿಶ್
ನವದೆಹಲಿ, ಜೂನ್ 5: ಕಳ್ಳಾಟದ ಬೆನ್ನುಹತ್ತಿರುವ ಪೊಲೀಸರು ನಿನ್ನೆ ಸಖತ್ ಧೈರ್ಯ/ಬುದ್ಧಿಮತ್ತೆ ತೋರಿದ್ದಾರೆ. ಕಳ್ಳಾಟಕ್ಕೆ ಸಾಧ್ಯವಾದಷ್ಟು ಮಟ್ಟಿಗೆ ಅಂತ್ಯಹಾಡಿ ಸಭ್ಯ ಆಟಕ್ಕೆ ಅಂಟಿರುವ ಕಳಂಕವನ್ನು ಹೋಗಲಾಡಿಸಲು ಮುಂದಾಗಿರುವ ಪೊಲೀಸರು ಕಳ್ಳಾಟದ A1 ಧೂರ್ತ ಶ್ರೀಶಾಂತನ ವಿರುದ್ಧ ಮೋಕಾ (MCOCA) ಕೇಸು ಜಡಿದಿದ್ದಾರೆ.
A1 ಧೂರ್ತ ಶ್ರೀಶಾಂತ ಈಗ ಒಂದಿನಿತೂ ಅನುಮಾನಕ್ಕೆ ಎಡೆಮಾಡಿಕೊಡದಂತೆ ತಾನು ತಪ್ಪಿತಸ್ಥನಲ್ಲ ಎಂದು ನಿರೂಪಿಸುವುದು ಅತ್ಯಗತ್ಯವಾಗಿದೆ. ಇಲ್ಲವಾದಲ್ಲಿ Maharashtra Control of Organised Crime Act ಅನ್ವಯ ಸೆಕ್ಷನ್ 3ರಲ್ಲಿ ದೆಹಲಿ ಪೊಲೀಸರು ಕೇಸು ದಾಖಲಿಸಿರುವುದರಿಂದ ಶ್ರೀಶಾಂತ ತಾನು ಬಳಸುತ್ತಿದ್ದ ಕುಖ್ಯಾತ ಬಿಳಿ ಟರ್ಕಿ ಟವಲಿನಲ್ಲಿ ಜೀವಾವಧಿ ಕಣ್ಣೀರು ಒರಿಸಿಕೊಳ್ಳುವ ದುರ್ಗತಿ ಒದಗಲಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಈ ತ್ರಿಮೂರ್ತಿಗಳ ವಿರುದ್ಧ ಬಲಾಢ್ಯ ಸಾಕ್ಷ್ಯವಿದೆ. ಹಾಗಾಗಿ ಅವರ ವಿರುದ್ಧ ಮೋಕಾ ಜಾರಿಗೊಳಿಸಿರುವುದಾಗಿ ಪೊಲೀಸರು ನಿನ್ನೆ ಕೋರ್ಟಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಪ್ರಕರಣದಲ್ಲಿ ಇನ್ನೂ 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದೇವೆ ಎಂದೂ ಪೊಲೀಸರು ಹೇಳಿದ್ದಾರೆ.
ಶ್ರೀಶಾಂತನ ವಿರುದ್ಧ ಆರೋಪ ದೃಢಪಟ್ಟರೆ ಜೀವಾವಧಿ ಶಿಕ್ಷೆ (ಇತ್ತೀಚೆಗೆ ಜೀವಾವಧಿ ಶಿಕ್ಷೆ ಅಂದರೆ ಜೀವನದುದ್ದಕ್ಕೂ ಜೈಲು ಶಿಕ್ಷೆ ಅನುಭವಿಸುವುದು ಎಂದು ಮಾರ್ಪಟ್ಟಿದೆ) ಜತೆಗೆ 5 ಲಕ್ಷ ರೂ ದಂಡ ತೆರಬೇಕಾಗುತ್ತದೆ. ಜತೆಗೆ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು. ಶ್ರೀಶಾಂತನೇನೋ ಸರಿ ಈಗಾಗಲೇ ತಮ್ಮ ಸುಪರ್ದಿಯಲ್ಲಿದ್ದಾನೆ. ಆದರೆ ಆ ಜೋಡಿಯೆಲ್ಲಿ? ದಾವೂದ್ ಇಬ್ರಾಹಿಂ ಮತ್ತು ಛೋಟಾ ಶಕೀಲರು? ಇವರನ್ನು ಯಾವಾಗ ಹೆಡೆಮುರಿಗೆ ಕಟ್ಟಿ ಭಾರತಕ್ಕೆ ತರುವುದು?
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications