ಮೊಬೈಲ್ ಕಳೆದುಕೊಂಡು ಸಾವಿಗೆ ಶರಣಾದ ಗೃಹಿಣಿ

ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜಯಮಾರುತಿ ನಗರದ ನಿವಾಸಿಯಾಗಿದ್ದ ಮಂಜುಳಾ (30) ಮೃತ ಗೃಹಿಣಿ. ಗುರುವಾರ ಸಂಜೆ ದಾಸರಹಳ್ಳಿಯಲ್ಲಿರುವ ತನ್ನ ತವರು ಮನೆಗೆ ಮಂಜುಳಾ ತೆರಳಿದ್ದರು. ಆಗ 20 ಸಾವಿರ ಬೆಲೆಯ ಮೊಬೈಲ್ ಮತ್ತು 15 ಸಾವಿರ ಹಣ ಕಳೆದುಕೊಂಡಿದ್ದರು.
ಶುಕ್ರವಾರ ಮನೆಗೆ ಆಗಮಿಸಿದ ಅವರು ಹಣ ಮತ್ತು ಮೊಬೈಲ್ ಕಳೆದುಕೊಂಡ ವಿಷಯ ಗಂಡನಿಗೆ ತಿಳಿದರೆ ಬೈಯುತ್ತಾರೆ ಎಂದು ಹೆದರಿ, ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದಾರೆ. ನಂತರ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಪತ್ನಿಯ ಮಾತು ಕೇಳಿ ಪತಿ ರಾಮಚಂದ್ರ ತಕ್ಷಣ ಮನೆಗೆ ಧಾವಿಸಿದ್ದಾರೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುಳಾ ಮೃತಪಟ್ಟಿದ್ದಾರೆ.
ಹಿಂದೆ ಹಣ, ಮೊಬೈಲ್ ಕಳೆದುಕೊಂಡಿದ್ದರು : ರಾಮಚಂದ್ರ ಮತ್ತು ಮಂಜುಳಾ ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ರಾಮಚಂದ್ರ ಬೆಂಗಳೂರಿನಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದಾರೆ. ಗುರುವಾರ ಮಗಳೊಂದಿಗೆ ಮಂಜುಳಾ ದಾಸರಹಳ್ಳಿಯಲ್ಲಿರು ತವರು ಮನೆಗೆ ಹೋಗಿದ್ದರು.
ಮಂಜುಳಾ ಕೆಲವು ದಿನಗಳ ಹಿಂದೆಯೂ 5 ಸಾವಿರ ಬೆಲೆಯ ಮೊಬೈಲ್ ಮತ್ತು ಹಣವನ್ನು ಕಳೆದುಕೊಂಡಿದ್ದರು. ಗುರುವಾರ ಮತ್ತೆ ಮೊಬೈಲ್ ಮತ್ತು ಹಣ ಕಳೆದುಹೋಗಿದ್ದರಿಂದ ಭಯಗೊಂಡು ಮಂಜುಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಂದಿನಿ ಲೇಜೌಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಪತಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications