ದಕ್ಷಿಣ ರಾಜ್ಯಗಳಲ್ಲಿ ವಿದ್ಯುತ್ ಕೊರತೆ ಕಾಡಲಿದೆ

ಕರ್ನಾಟಕ ಸೇರಿದಂತೆ ದೇಶದ 17 ರಾಜ್ಯಗಳು 2013-14ನೇ ಅವಧಿಯಲ್ಲಿ ಭಾರಿ ವಿದ್ಯುತ್ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಸಿಇಎ (ಕೇಂದ್ರ ವಿದ್ಯುತ್ ಪ್ರಾಧಿಕಾರಿ) ಲೆಕ್ಕಾಚಾರ ನಡೆಸಿದೆ. ಹದಿನೇಳು ರಾಜ್ಯಗಳಲ್ಲಿ ಶೇ 19.1ರಷ್ಟು ವಿದ್ಯುತ್ ಕೊರತೆ ಉಂಟಾಗಬಹುದು ಎಂದು ಅಂದಾಜು ನಡೆಸಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಈ ಬಾರಿ ವಿದ್ಯುತ್ ಸಮಸ್ಯೆಯನ್ನು ತೀವ್ರವಾಗಿ ಎದುರಿಸಬೇಕಾಗುತ್ತದೆ. 2012-13ನೇ ವರ್ಷದಲ್ಲಿ ಈ ರಾಜ್ಯಗಳಲ್ಲಿ ಶೇ 15ರಷ್ಟು ವಿದ್ಯುತ್ ಕೊರತೆ ಉಂಟಾಗಿತ್ತು. ಈ ಬಾರಿ ಆ ಪ್ರಮಾಣ ಶೇ 19ರಷ್ಟು ಹೆಚ್ಚಾಗಲಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಕಾರಣವೇನು : ಇಂಧನ ಕೊರತೆ, ಡಿಸ್ಕಾಂ(ವಿದ್ಯುತ್ ವಿತರಣ ಕಂಪನಿಗಳು)ಗಳ ಹಣಕಾಸು ಪರಿಸ್ಥಿತಿ ದುರ್ಬಲ ಮತ್ತು ಪ್ರಸರಣ ಸಮಸ್ಯೆ, ಕಲ್ಲಿದ್ದಲು ಕೊರತೆ ಮುಂತಾದ ಸಮಸ್ಯೆಗಳಿಂದಾಗಿ ದೇಶಾದ್ಯಂತ ವಿದ್ಯುತ್ ಕೊರತೆ ಉಂಟಾಗಲಿದೆ ಎಂದು ವರದಿ ಹೇಳಿದೆ.
ಅವುಗಳಲ್ಲಿ ಕೆಲವು ರಾಜ್ಯಗಳಿಗೆ ವಿದ್ಯುತ್ ಕೊರತೆಯ ಪ್ರಮಾಣ ಹೆಚ್ಚಾಗಲಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ಅಂದರೆ, ಶೇ. 26.5ರಷ್ಟು, ಕೇರಳದಲ್ಲಿ ಶೇ.24.8, ಕರ್ನಾಟಕದಲ್ಲಿ ಶೇ.23.2, ಆಂಧ್ರದಲ್ಲಿ ಶೇ.9.1 ಹಾಗೂ ಪುದುಚೇರಿಯಲ್ಲಿ ಶೇ.9.9ರಷ್ಟು ಕೊರತೆ ಉಂಟಾಗಲಿದೆ.
ಆದರೆ, ಪಶ್ಚಿಮ ಬಂಗಾಳ ಮತ್ತು ಬಿಹಾರ ಸೇರಿದಂತೆ ದೇಶದ ಪೂರ್ವಭಾಗದಲ್ಲಿ ಶೇ.10.2ರಷ್ಟು ಹೆಚ್ಚು ವಿದ್ಯುತ್ ಪೂರೈಕೆಯಾಗಲಿದೆ ಎಂದು ಸಿಇಎ ವರದಿಯಲ್ಲಿ ಉಲ್ಲೇಖಿಸಲಾಗಿದೆ. ದೇಶದ ದಕ್ಷಿಣ ವಲಯದ ರಾಜ್ಯಗಳಿಗೆ ವಿದ್ಯುತ್ ಕೊರತೆಯ ಬಿಸಿ ಹೆಚ್ಚಾಗಿ ತಟ್ಟಲಿದೆ.
9 ಸಾವಿರ ಮೆಗಾವ್ಯಾಟ್ ಕೊರತೆ : ಏಪ್ರಿಲ್ ತಿಂಗಳಿನಲ್ಲಿ ದೇಶದಲ್ಲಿ ಸುಮಾರು 9 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಕೊರತೆ ಉಂಟಾಗಿತ್ತು. ಕಲ್ಲಿದ್ದಲು ಅಭಾವ ವಿದ್ಯುತ್ ಉತ್ಪಾದನೆ ಮೇಲೆ ನೇರವಾಗಿ ಪರಿಣಾಮ ಬೀರಿದೆ ಎಂದು ಸಿಇಎ ವಿಶ್ಲೇಷಣೆ ನಡೆಸಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications