ಕೊಪ್ಪಳ : ತಮ್ಮನನ್ನು ಮನೆಯಲ್ಲಿ ಕೂಡಿಹಾಕಿದ ಪೇದೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳು ಗ್ರಾಮದಲ್ಲಿ ಯಮುನಪ್ಪ ಎಂಬುವವನು ತನ್ನ ಒಡಹುಟ್ಟಿದ ತಮ್ಮ ಹನುಮಂತಪ್ಪನಿಗೆ, ಹುಚ್ಚು ಹಿಡಿದಿದೆ ಎಂದು ಕೈ, ಕಾಲುಗಳಿಗೆ ಬೇಡಿ ಹಾಕಿ ಸುಮಾರು ಎರಡು ವರ್ಷಗಳಿಂದ ಮನೆಯ ಕೊಠಡಿಯಲ್ಲಿ ಕೂಡಿಹಾಕಿದ್ದ.
ಮಂಗಳವಾರ ಬೆಳಗ್ಗೆ ಸ್ಥಳೀಯರು ಈ ಮಾಹಿತಿಯನ್ನು ಮಾಧ್ಯಮದವರಿಗೆ ನೀಡಿದ್ದಾರೆ. ಮಾಧ್ಯಮದವರು ಮನೆಗೆ ತಲುಪಿದಾಗ ಹನುಮಂತಪ್ಪನ ಕೈ ಮತ್ತು ಕಾಲನ್ನು ಸರಪಳಿಯಿಂದ ಬಂಧಿಸಿ, ಮನೆಯಲ್ಲಿ ಕೂಡಿಹಾಕಿರುವುದು ತಿಳಿದುಬಂದಿದೆ.
ಮಾನವೀಯತೆ ಮರೆತ ಪೊಲೀಸ್ : ತಮ್ಮನನ್ನು ಬೇಡಿ ಹಾಕಿ ಕೂಡಿಹಾಕಿರುವ ಯಮುನಪ್ಪ ಜಿಲ್ಲಾ ಪೊಲೀಸ್ ಮೀಸಲು ಪಡೆಯ ಪೇದೆಯಾಗಿದ್ದಾನೆ. ತಮ್ಮ ಮನೆಯವರಿಗೆ ಮತ್ತು ಸ್ಥಳೀಯ ಜನರಿಗೆ ಹೊಡೆಯುತ್ತಾನೆ ಎಂದು ಹೀಗೆ ಕೂಡಿ ಹಾಕಿದ್ದಾನೆ.
ಎರಡೂ ಕೈಗಳಿಗೆ ಬೇಡಿ ಹಾಕಿರುವುದರಿಂದ ಹನುಮಂತಪ್ಪ ಊಟ ಮಾಡಲು ಪರದಾಡಬೇಕಾಗಿದೆ. ಮಾನಸಿಕ ಅಸ್ವಸ್ಥನಾದ ಅವನಿಗೆ ಯಾವುದೇ ಚಿಕಿತ್ಸೆ ಕೊಡಿಸದೆ ಕೂಡಿ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳೀಯರ ಪ್ರಕಾರ ಹನುಮಂತಪ್ಪ ಜನರೊಂದಿಗೆ ಚೆನ್ನಾಗಿ ಮಾತನಾಡುತ್ತಾನೆ. ಯಾರಿಗೂ ಹೊಡೆಯುವುದಿಲ್ಲ. ಆದರೆ, ಅಣ್ಣ, ತಮ್ಮನೊಟ್ಟಿಗೆ ಜಗಳವಾಡಿ ನಂತರ ಹೀಗೆ ಕೂಡಿಹಾಕಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ.
ಅಕ್ಕ-ತಂಗಿಯರಿಗೆ ಹೊಡೆಯುತ್ತಾನೆ : ಗೃಹ ಬಂಧನದಲ್ಲಿರುವ ಹನುಮಂತಪ್ಪ ಅವರ ತಾಯಿ ಕಾಳಮ್ಮ ಅವರ ಪ್ರಕಾರ, ಈತ ಮನೆಯವರಿಗೆ ಹೊಡೆಯುತ್ತಾನೆ. ಅಕ್ಕ-ತಂಗಿ ಮನೆಗೆ ಬಂದಾಗ ಅವರಿಗೆ ಹೊಡೆದು ಮನೆಯಿಂದ ಹೊರಹಾಕಿದ್ದಾನೆ.
ಹಲವಾರು ಬಾರಿ ಹನುಮಂತಪ್ಪನಿಗೆ ನಾವು ಚಿಕಿತ್ಸೆ ಕೊಡಿಸಿದ್ದೇವೆ ಆದರೆ, ಆತನ ಪರಿಸ್ಥಿತಿ ಸುಧಾರಿಸಿಲ್ಲ. ಆತನನ್ನು ನಿಯಂತ್ರಿಸುವುದು ಕಷ್ಟವಾದ್ದರಿಂದ ಕೂಡಿ ಹಾಕಿದ್ದೇವೆ ಎಂದು ಕಾಳಮ್ಮ ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಚಿಕಿತ್ಸೆ ಕೊಡಿಸುತ್ತೇವೆ : ಹನುಮಂತಪ್ಪನಿಗೆ ಸರಿಯಾದ ಚಿಕಿತ್ಸೆ ಕೊಡಿಸಿಸುತ್ತೇವೆ ಎಂದು ಕಾಳಮ್ಮ ಭರವಸೆ ನೀಡಿದ್ದಾರೆ. ಕೊಳಗಳನ್ನು ಬಿಚ್ಚಿ, ಆತನನ್ನು ಮಾನವೀಯ ದೃಷ್ಟಿಯಿಂದ ನೋಡಿಕೊಳ್ಳುತ್ತೇವೆ ಎಂದು ಹನುಮಂತಪ್ಪನ ಕುಟುಂಬದವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಎರಡು ಮತ್ತು ಹಾವೇರಿಯಲ್ಲಿ ಒಂದು ಗೃಹ ಬಂಧನ ಪ್ರಕರಣಗಳು ಕಳೆದವಾರ ವರದಿಯಾಗಿದ್ದವು. ಇವುಗಳ ನೆನಪು ಮಾಸುವ ಮುನ್ನವೇ ಮತ್ತೊಂದು ಗೃಹ ಬಂಧನ ಪ್ರಕರಣ ಪತ್ತೆಯಾಗಿದೆ. (ಗೃಹಬಂಧನದ ಕಥೆಗಳು)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications