ನೀರಿನ ತೊಟ್ಟಿಗೆ ಬಿದ್ದು ಮಗು ದಾರುಣ ಸಾವು

ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿ.ಚನ್ನಸಂದ್ರದ ನಿವಾಸಿಗಳಾದ ಸುಬ್ರಮಣಿ ಮತ್ತು ಅನಿತಾ ಅವರ ಪುತ್ರ ನಿತಿನ್ (6) ಸೋಮವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ. ಆಗ ಆಕಸ್ಮಿವಾಗಿ ಮನೆಯ ಪಕ್ಕದಲ್ಲಿದ್ದ ದೊಡ್ಡ ನೀರಿನ ತೊಟ್ಟಿಗೆ ಬಿದ್ದು, ಮೃತಪಟ್ಟಿದ್ದಾನೆ.
ಪೋಷಕರು ಮನೆಯ ಕೆಲಸಗಳಲ್ಲಿ ನಿರತರಾಗಿದ್ದರು. ಕೆಲ ಸಮಯದ ನಂತರ ಮಗನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ಈ ವೇಳೆ ನೀರಿನ ತೊಟ್ಟಿಯಲ್ಲಿ ನಿತಿನ್ ಮೃತದೇಹ ಪತ್ತೆಯಾಗಿದೆ.
ಉಪಕಾರದಿಂದ ಜೀವ ಹೋಯಿತು : ಮೂಲತಃ ಆಂಧ್ರ ಪ್ರದೇಶದವರಾದ ಸುಬ್ರಮಣಿ ದಂಪತಿ ಸುಮಾರು ಮೂರು ವರ್ಷಗಳಿಂದ ಚನ್ನಸಂದ್ರದಲ್ಲಿ ನೆಲೆಸಿದ್ದಾರೆ. ಇವರ ಮನೆಯಲ್ಲಿ ಬೋರ್ ವೆಲ್ ಇದ್ದು, ಉತ್ತಮವಾದ ನೀರು ದೊರೆಯುತ್ತದೆ. ಅಕ್ಕಪಕ್ಕದ ಮನೆಗಳ ಜನರು ಇವರ ಮನೆಯಿಂದ ನೀರು ತೆಗೆದುಕೊಂಡು ಹೋಗುತ್ತಾರೆ.
ಆದ್ದರಿಂದ, ಮನೆಯ ಪಕ್ಕದಲ್ಲಿ ದೊಡ್ಡ ನೀರಿನ ತೊಟ್ಟಿ ನಿರ್ಮಿಸಿದ್ದಾರೆ. ಸೋಮವಾರವೂ ಅಕ್ಕಪಕ್ಕದ ಮನೆಯವರು ನೀರು ತೆಗೆದುಕೊಂಡು ಹೋಗಲು ಆಗಮಿಸಿದಾಗ, ಅದರಲ್ಲಿ ನಿತಿನ್ ಶವ ತೇಲುತ್ತಿತ್ತು. ತಕ್ಷಣ ಅವರು ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ರಾಮಮೂರ್ತಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳಿಂದ ನಗರದಲ್ಲಿ ನೀರಿನ ತೊಟ್ಟಿಗೆ ಬಿದ್ದು, ಮಕ್ಕಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ ಆದರೂ, ಪೋಷಕರು ಮಾತ್ರ ಜಾಗೃತರಾಗಿಲ್ಲ.
2013ರ ಪ್ರಕರಣಗಳು
ಜ.22 ಅಲ್ಮಾಸ್ (3) ಉಪ್ಪಾರಪೇಟೆ
ಮಾ 6, ಗೌತಮ್ (4) ಬಾಣಸವಾಡಿ
ಮಾ 22, ಭರತ್ (7), ಗಗನ್ (5) ಜೆ.ಜೆ.ನಗರ
ಏ. 25, ಸುವರ್ಣಾ (8),ಬಾಲಾಜಿ (7)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications