ಮೈಸೂರು : ಮಗನನ್ನು ಕಟ್ಟಿಹಾಕಿದ ತಂದೆ-ತಾಯಿ

ನಗರದ ಮಂಡಿಮೊಹಲ್ಲಾದ ಕಬೀರ್ ರಸ್ತೆ ನಿವಾಸಿಯಾದ ರಮೇಶ್ (45) ಗೃಹ ಬಂಧನದಲ್ಲಿದ್ದ ವ್ಯಕ್ತಿ. ಕೂಲಿ ಕಾರ್ಮಿಕನಾದ ಈತ ಪದೇ ಪದೇ ಮನೆಬಿಟ್ಟು ಹೋಗುತ್ತಿದ್ದ ಎಂಬ ಕಾರಣಕ್ಕೆ ಮನೆಯವರು 12 ವರ್ಷಗಳಿಂದ ಕೂಡಿ ಹಾಕಿದ್ದರು.
ರಮೇಶ್ ಮನೆಯ ಸ್ಥಳೀಯರು ಒಡನಾಡಿ ಸಂಸ್ಥೆಯವರಿಗೆ ಈ ಕುರಿತು ಮಾಹಿತಿ ನೀಡಿದ್ದರು. ಅವರು ಪೊಲೀಸರ ಸಹಾಯದಿಂದ ಬುಧವಾರ ರಮೇಶ್ ಮನೆಗೆ ತೆರಳಿದಾಗ, ಆತನನ್ನು ಸರಪಳಿಗಳಿಂದ ಬಿಗಿದು ಗೃಹ ಬಂಧನದಲ್ಲಿಟ್ಟ ವಿಷಯ ಬೆಳಕಿಗೆ ಬಂದಿದೆ.
ಮದುವೆಯಾಗಿ ಮಕ್ಕಳಿವೆ : ರಮೇಶ್ ಅವರಿಗೆ ಲಕ್ಷ್ಮೀ ಎಂಬುವವರೊಂದಿಗೆ ವಿವಾಹವಾಗಿದ್ದು, ಈ ದಂಪತಿಗೆ ಮಗುವಿದೆ. ಆದರೆ, ರಮೇಶ್ ಪದೇ ಪದೇ ಮನೆಬಿಟ್ಟು ಹೊರಗೆ ಹೋಗುತ್ತಿದ್ದರು. ಒಮ್ಮೆ ಹೋದರೆ ಮೂರು-ನಾಲ್ಕು ತಿಂಗಳು ಮನೆಗೆ ಮರಳುತ್ತಿರಲಿಲ್ಲ. ಇದರಿಂದ ಕೋಪಗೊಂಡ ಕುಟುಂಬದವರು ಆತನಿಗೆ ಸರಪಳಿ ಬಿಗಿದು ಕಟ್ಟಿಹಾಕಿದ್ದರು.
ಪತ್ನಿ ಸಮರ್ಥನೆ : ವಿವಾಹವಾಗುವ ವೇಳೆ ಪತಿಯ ವರ್ತನೆ ಬಗ್ಗೆ ನನಗೆ ತಿಳಿದಿರಲಿಲ್ಲ. ನಂತರ ಅವರು ಮನೆಬಿಟ್ಟು ಹೋಗುವ ವಿಷಯ ತಿಳಿಯಿತು. ಆದ್ದರಿಂದ ಅತ್ತೆ-ಮಾವ ಕೂಡಿಹಾಕಲು ನಿರ್ಧರಿಸಿದಾಗ ನಾನು ಬೆಂಬಲ ನೀಡಿದೆ. ನಾವು ಅವರನ್ನು ಮಾನವೀಯ ದೃಷ್ಠಿಯಿಂದಲೇ ನೋಡಿಕೊಳ್ಳುತ್ತಿದ್ದೇವೆ ಎಂದು ಪತ್ನಿ ಲಕ್ಷ್ಮೀ ಮಾಧ್ಯಮಗಳಿಗೆ ಹೇಳಿದ್ದಾರೆ.
ಚಿಕಿತ್ಸೆ ಕೊಡಿಸುತ್ತಿದ್ದೇವೆ : ಮಗನಿಗೆ ವಿಚಿತ್ರವಾದ ಕಾಯಿಲೆ ಇದೆ. ಪ್ರತಿತಿಂಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೇವೆ. ನಂತರ ಮತ್ತೆ ಮನೆಯಲ್ಲಿ ಕೂಡಿ ಹಾಕುತ್ತೇವೆ ಎಂದು ರಮೇಶ್ ತಂದೆ-ತಾಯಿ ಹೇಳಿದ್ದಾರೆ.
ಆಸ್ಪತ್ರೆಗೆ ದಾಖಲು : ಒಡನಾಡಿ ಸಂಸ್ಥೆಯವರು ರಮೇಶ್ ಅವರನ್ನು ಬಂಧಮುಕ್ತಗೊಳಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ರಮೇಶ್ ಅವರ ಆರೋಗ್ಯ ತಪಾಸಣೆ ನಡೆಸಿ ವರದಿ ನೀಡಿದ ನಂತರ, ಅವರಿಗೆ ಯಾವುದಾದದರೂ ಕಾಯಿಲೆ ಇದೆಯೇ ಎಂದು ತಿಳಿಯಲಿದೆ.
ರಮೇಶ್ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದರೆ, ತಂದೆ-ತಾಯಿ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ. ರಾಜ್ಯದಲ್ಲಿ ಎರಡು ವಾರಗಳಿಂದ ಗೃಹಬಂಧನ ಪ್ರಕರಣಗಳು ವರದಿಯಾಗುತ್ತಲೇ ಇವೆ. (ಗೃಹಬಂಧನ ಪ್ರಕರಣಗಳು)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications