ಚಿತ್ರ: ಕಹಿ ನೆನಪಿನೊಂದಿಗೆ ಕೇರಳ ತಲುಪಿದ ಶ್ರೀಶಾಂತ್
ಕೊಚ್ಚಿ, ಜೂ.12: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿಯಾಗಿ ಸುಮಾರು 27 ದಿನಗಳ ಕಾಲ ಜೈಲಿನಲ್ಲಿದ್ದ ಶ್ರೀಶಾಂತ್ ತನ್ನ ಹುಟ್ಟೂರು ಕೇರಳ ತಲುಪಿದ್ದಾರೆ. ತಿಹಾರ್ ಜೈಲಿನಿಂದ ಮುಕ್ತನಾದ ರಾಜಸ್ಥಾನ್ ರಾಯಲ್ಸ್ ತಂಡ ಹಾಗೂ ಟೀಂ ಇಂಡಿಯಾದ ವೇಗಿ ಶ್ರೀಶಾಂತ್ ಗೆ ಮತ್ತೆ ಕ್ರಿಕೆಟ್ ಆಡುವ ಕನಸು ಹುಟ್ಟಿಕೊಂಡಿದೆ ಆದರೆ, ಕಹಿ ನೆನಪುಗಳು ಇನ್ನೂ ಕಾಡುತ್ತಲೇ ಇದೆ.
ಸ್ಪಾಟ್ ಫಿಕ್ಸಿಂಗ್ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕ್ರಿಕೆಟ್ ಆಟಗಾರ ಶ್ರೀಶಾಂತ್ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದು, ಬುಧವಾರ ಬೆಳಗ್ಗೆ ಕೇರಳದ ಕೊಚ್ಚಿಗೆ ಆಗಮಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಶ್ರೀಶಾಂತ್ ಸೇರಿದಂತೆ ಪ್ರಕರಣದ ಎಲ್ಲ 21 ಆರೋಪಿಗಳಿಗೆ ನಿನ್ನೆ ಜಾಮೀನು ಮಂಜೂರು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಮಂಗಳವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದ ಶ್ರೀಶಾಂತ್, ಬುಧವಾರ ಬೆಳಗ್ಗೆ ತಮ್ಮ ತವರು ಮನೆ ಕೇರಳಕ್ಕೆ ಆಗಮಿಸಿದರು.
ಶ್ರೀಶಾಂತ್ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ನೂರಾರು ಅಭಿಮಾನಿಗಳು ಅವರನ್ನು ಮುತ್ತಿಕೊಂಡರು. ಅಲ್ಲದೆ ಕೆಲವರು ಶ್ರೀಶಾಂತ್ ಗೆ ಶಾಲು ಹೊದಿಸಿ, ಅದ್ಧೂರಿಯಾಗಿ ಬರಮಾಡಿಕೊಂಡರು. ಶ್ರೀಶಾಂತ್ ಶಾಂತಕುಮಾರ್ ಮನೆಗೆ ಮರಳಿದ ಚಿತ್ರಗಳು ಇಲ್ಲಿದೆ.

ವೇಗಿ ಶ್ರೀಶಾಂತ್ ಹೇಳಿದ್ದೇನು?
ನಾನು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯದ ವಿಚಾರಣೆಯಿಂದ ತಾವು ನಿರ್ದೋಷಿಯಾಗಿ ಹೊರಬರುತ್ತೇನೆ ಮತ್ತು ಶೀಘ್ರದಲ್ಲಿಯೇ ಭಾರತ ಕ್ರಿಕೆಟ್ ತಂಡವನ್ನು ಸೇರಿಕೊಳ್ಳುತ್ತೇನೆ

ಶ್ರೀಶಾಂತ್ ಗೆ ಜಾಮೀನು
ಮೇ 16ರಂದು ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಶ್ರೀಶಾಂತ್ ಸತತ 27 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದ ಶ್ರೀಶಾಂತ್ ಗೆ ದೆಹಲಿ ನ್ಯಾಯಾಲಯ ಹೆಚ್ಚುವರಿ ಸೆಷನ್ಸ್ ನ್ಯಾ. ವಿನಯ್ ಕುಮಾರ್ ಆವರು ಜಾಮೀನು ಮಂಜೂರು ಮಾಡಿದ್ದರು. 50 ಸಾವಿರ ರು ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಸಹಿ ಹಾಕಿಸಿಕೊಳ್ಳಲಾಗಿತ್ತು.
ಶ್ರೀಶಾಂತ್ ಅವರು ಪಾಸ್ ಪೋರ್ಟ್ ಪೊಲೀಸರ ವಶದಲ್ಲಿದ್ದು, ದೇಶ ಬಿಟ್ಟು ಹೊರಗೆ ತೆರಳುವಂತಿಲ್ಲ. ದೇಶದ ಇತರೆಡೆ ಓಡಾಟ ನಡೆಸಲು ಅನುಮತಿ ಪಡೆಯಬೇಕು

ಕುಟುಂಬ ಸದಸ್ಯರ ಜೊತೆ ಶ್ರೀ
ಶ್ರೀಶಾಂತ್ ಸೇರಿದಂತೆ ಇತರೆ ಕೆಲವು ಆರೋಪಿಗಳ ಮೇಲೆ MCOCA ಕಾಯ್ದೆ ಯಡಿ ಪ್ರಕರಣ ದಾಖಲಿಸಿ ಸಾಕ್ಷಿ ಒದಗಿಸಲು ಹೆಣಗಾಡಿದ ದೆಹಲಿ ಪೊಲೀಸರಿಗೆ ನ್ಯಾ. ವಿನಯ್ ಕುಮಾರ್ ಛೀಮಾರಿ ಹಾಕಿದ್ದಾರೆ.

ಅಮ್ಮನ ಅಪ್ಪುಗೆ
ನನ್ನ ಮಗ ಯಾವುದೆ ತಪ್ಪು ಮಾಡಿಲ್ಲ. ದೇವರ ಬಳಿ ಬೇಡಿಕೊಂಡಿದ್ದು ಫಲನೀಡಿದೆ. ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ನಂಬಿಕೆ ಇದೆ ಎಂದು ಶ್ರೀಶಾಂತ್ ಪೋಷಕರು ಹೇಳಿದ್ದಾರೆ.

ಯಾವ ಕೇಸು ಹಾಕಲಾಗಿತ್ತು
ಶ್ರೀಶಾಂತ್, ಅಜಿತ್ ಚಂಡಿಲ ಹಾಗೂ ಅಂಕಿತ್ ಚೌವಾಣ್ ಅವರ ಮೇಲೆ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ ಆಗಿರುವ ಆರೋಪ ಹೊರೆಸಿ ದೆಹಲಿ ಹಾಗೂ ಮುಂಬೈ ಪೊಲೀಸರು ಭಾರತೀಯ ದಂಡ ಸಂಹಿತೆ 420 ಹಾಗೂ 120 ಬಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಸೂಕ್ತ ಸಾಕ್ಷಿ ಆಧಾರಗಳನ್ನು ಒದಗಿಸುವಲ್ಲಿ ವಿಫಲರಾದರು.
ನಾನು ಬಿಡುಗಡೆಯಾಗಿರುವುದು ಖುಷಿಕೊಟ್ಟಿದೆ ಆದರೆ, ತಿಹಾರ್ ಜೈಲಿನಲ್ಲಿ ಕಳೆದ ದಿನಗಳು ನನ್ನನ್ನು ಕಾಡುತ್ತದೆ ಎಂದು ಶ್ರೀಶಾಂತ್ ಹೇಳಿದ್ದಾರೆ.
-
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications