ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನದ ಬೆಲೆ 50 ಲಕ್ಷ!

ಕೇಂದ್ರ ಸರ್ಕಾರದ ನಿಗಮ, ಮಂಡಳಿಗಳ ಸದಸ್ಯತ್ವಕ್ಕೆ 50 ಲಕ್ಷ, ರಾಜ್ಯದ ಲಾಭದಾಯಕ ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗಳಿಗೆ 1 ಕೋಟಿ ಹಣ ನೀಡಿದರೆ, ನೀವು ಅಧ್ಯಕ್ಷ ಹುದ್ದೆ ಪಡೆಯಬಹುದು ಎಂದು ನಡೆಸಿದ ಭರ್ಜರಿ ಡೀಲಿಂಗ್ ಖಾಸಗಿ ವಾಹಿನಿಗಳ ರಹಸ್ಯ ಕಾರ್ಯಚರಣೆಯಲ್ಲಿ ಸೆರೆಯಾಗಿ, ಬಹಿರಂಗವಾಗಿದೆ.
ಆರ್ ಟಿಐ ಕಾರ್ಯಕರ್ತ ಸಾಯಿದತ್ತ ಎಂಬುವವರು ಈ ವಂಚಕರ ಜಾಲವನ್ನು ಪತ್ತೆಹಚ್ಚಿದ್ದಾರೆ. ನಿಗಮ ಮಂಡಳಿಗಳ ಹುದ್ದೆ ಕೊಡಿಸುತ್ತೇನೆ ಎಂದು ಆಕಾಂಕ್ಷಿಗಳಿಂದ ಹಣ ಪಡೆದು ವಂಚಿಸುವ ವ್ಯಕ್ತಿಗಳನ್ನು ಸಾಯಿದತ್ತ ಸಂಪರ್ಕಿಸಿ, ಡೀಲಿಂಗ್ ನ ರಹಸ್ಯಗಳನ್ನು ಬೆಳಕಿಗೆ ತಂದಿದ್ದಾರೆ.
ಆಡಳಿತ ಕೇಂದ್ರ ಟಾರ್ಗೆಟ್ : ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶದವೇ ವಂಚಕರ ಚಟುವಟಿಕೆಯ ಕೇಂದ್ರ ಸ್ಥಾನ. ಕಾಂಗ್ರೆಸ್ ನಾಯಕರ ಬೆಂಬಲಿಗರು ಇಲ್ಲಿಗೆ ಬಂದು, ತಮಗೆ ಅಧ್ಯಕ್ಷ ಹುದ್ದೆ, ಉಪಾಧ್ಯಕ್ಷ ಹುದ್ದೆ, ಸದಸ್ಯತ್ವ ನೀಡಿ ಎಂದು ಒತ್ತಡ ಹಾಕುತ್ತಿರುತ್ತಾರೆ.
ಇದನ್ನೇ ಬಂಡವಾಳ ಮಾಡಿಕೊಂಡು ಆಕಾಂಕ್ಷಿಗಳಿಂದ ಹಣ ದೋಚುವ ದೊಡ್ಡ ಜಾಲವೇ ಹುಟ್ಟಿಕೊಂಡಿದೆ. ರಹಸ್ಯ ಕಾರ್ಯಾಚರಣೆಯಲ್ಲಿ ಸಾಯಿದತ್ತ ಅವರು, ಪಡೆದ ಮಾಹಿತಿಯಂತೆ, ಬೆಂಗಳೂರು, ಮೈಸೂರು ಹಾಗೂ ಹುಬ್ಬಳಿಯಲ್ಲಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಗಳನ್ನು ಪತ್ತೆ ಹಚ್ಚಿ, ಅವರಿಂದ ಹಣ ಪಡೆದು ವಂಚಿಸುವುದು ಇವರ ಕಾಯಕ.
ಯಾವ ಸ್ಥಾನಗಳಿಗೆ ಎಷ್ಟು : ರಹಸ್ಯ ಕಾರ್ಯಾಚರಣೆ ಪ್ರಕಾರ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆಗೆ ಸಂಬಂಧಿಸಿದ ಸಮಿತಿಗಳು ಮತ್ತು ಮಂಡಳಿಗಳಿಗೆ ಭಾರೀ ಬೇಡಿಕೆ ಇದ್ದು, ಭರ್ಜರಿ ಬೆಲೆ ಕಟ್ಟಲಾಗುತ್ತದೆ.
ಕಾರ್ಮಿಕ ಸಂಘಟನೆಗಳು ಮತ್ತು ಸರ್ಕಾರ ನಡುವಿನ ವಿವಾದಗಳನ್ನು ನಿಗಮಗಳು ಇತ್ಯರ್ಥ ಪಡಿಸುವುದರಿಂದ ಕಾರ್ಮಿಕ ಇಲಾಖೆಗೆ ಸಂಬಂಧಿಸಿದ ಹುದ್ದೆಗಳಿಗೆ ಭಾರೀ ಬೇಡಿಕೆ ಇದೆ ಎಂದು ವಂಚಕರು ಸಾಯಿದತ್ತ ಅವರಿಗೆ ತಿಳಿಸಿರುವುದು ದಾಖಲಾಗಿದೆ.
ಹಾಗೆಯೇ ಮಂಡಳಿಗಳ ಸದಸ್ಯರಿಗೆ ದೊರೆಯುವ ಭತ್ಯೆಗಳು, ಸರ್ಕಾರ ನೀಡುವ ಸೌಕರ್ಯ ಮುಂತಾದವುಗಳ ಮೇಲೂ ಹುದ್ದೆಯ ದರವನ್ನು ನಿಗದಿಗೊಳಿಸುವುದು ಬೆಳಕಿಗೆ ಬಂದಿದೆ. ಆದ್ದರಿಂದ ಸದಸ್ಯತ್ವಕ್ಕೆ 50ಲಕ್ಷ ಮತ್ತು ಅಧ್ಯಕ್ಷ ಹುದ್ದೆಗೆ 1 ಕೋಟಿ ದರವನ್ನು ನಿಗದಿ ಮಾಡಿರುವುದು ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications