ಬಾಣಸವಾಡಿ : ನಕಲಿ ಪೊಲೀಸ್ ಅಂದರ್!

ಬಿಹಾರ ಮೂಲದ ಪ್ರದೀಪ್ ಕುಮಾರ್ (28) ಬಂಧಿತ ವ್ಯಕ್ತಿ. ಪಿಯುಸಿ ಫೇಲ್ ಆಗಿರುವ ಈತ, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ. ಪೊಲೀಸ್ ಆಗಬೇಕು ಎಂಬ ಕನಸು ಕಂಡಿದ್ದ. ಆದರೆ, ಪಿಯುಸಿ ಫೇಲ್ ಆದ ಕಾರಣ ಅವನ ಕನಸು ಹಾಗೆ ಉಳಿದಿತ್ತು.
ಕೆಲವು ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ ಈತ, ನಂತರ ಪೊಲೀಸರ ವೇಷ ಧರಿಸಿ, ಜನರನ್ನು ವಂಚಿಸಲು ಪ್ರಾರಂಭಿಸಿದ್ದ. ಬಾಣಸವಾಡಿ ಪೊಲೀಸರು, ಈತನನ್ನು ಬಂಧಿಸಿ, ಪೊಲೀಸ್ ಎಂದರೆ ಏನು ಎಂದು ತೋರಿಸಿದ್ದಾರೆ. (ನಾಲ್ಕು ಕಡೆ ನಕಲಿ ಪೊಲೀಸರ ಕೈಚಳಕ)
ಯುವತಿಗೂ ಮೋಸ : ಪೊಲೀಸ್ ಇನ್ಸ್ ಪೆಕ್ಟರ್ ಬಟ್ಟೆತೊಟ್ಟು ಅಂಗಡಿಗಳಿಂದ ಈತ ಹಫ್ತಾ ವಸೂಲಿ ಮಾಡುತ್ತಿದ್ದ. ನಕಲಿ ಗನ್ ಹಿಡಿದು, ಇಸ್ತ್ರೀ ಮಾಡಿದ ಗರಿ-ಗರಿ ಖಾಕಿ ಹಾಕಿ ವಿವಿಧ ಬಡಾವಣೆಗಳಲ್ಲಿ ಅನೇಕ ಜನರಿಗೆ ವಂಚಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಖಾಸಗಿ ಕಂಪನಿಯ ರಿಸೆಪ್ಷನಿಸ್ಟ್ ಳನ್ನು ಪರಿಚಯ ಮಾಡಿಕೊಂಡ ಈತ, ಆಕೆಗೆ ತಾನು ಪೊಲೀಸ್ ಎಂದು ಹೇಳಿಕೊಂಡು ಅವಳನ್ನು ಪ್ರೀತಿಸುವ ನಾಟಕವಾಡಿದ್ದ. ಪ್ರದೀಪ್ ನನ್ನು ನಂಬಿದ್ದ ಯುವತಿ ಆತನೊಂದಿಗೆ ಮದುವೆಯಾಗಲು ಹಂಬಲಿಸಿದ್ದಳು.
ಮದುವೆಯಾಗಿ ಬೇರೆ ಜಿಲ್ಲೆಯಲ್ಲಿ ನೆಲೆಸೋಣ ವರ್ಗಾವಣೆ ಮಾಡಿಸಿಕೊಳ್ಳಲು ಹಣ ಕೇಳುತ್ತಾರೆ. ನೀನು 7 ಲಕ್ಷ ರೂಪಾಯಿ ಕೊಡು ಎಂದು ಪ್ರದೀಪ್ ಬೇಡಿಕೆ ಇಟ್ಟಿದ್ದ. ಪ್ರದೀಪ್ ನನ್ನು ನಂಬಿ ಯುವತಿ ಹಣ ನೀಡಿದ್ದಳು. ಹಣ ದೊರಕಿದ ನಂತರ ಪ್ರದೀಪ್ ಕಾಣೆಯಾಗಿದ್ದ. (ಬಾಣಸವಾಡಿ ಹಿಟ್ ಅಂಡ್ ರನ್ ಕೇಸ್)
ಇದರಿಂದ ಅನುಮಾನಗೊಂಡ ಯವತಿ ಬಾಣಸವಾಡಿ ಠಾಣೆಗೆ ದೂರು ನೀಡಿದ್ದಳು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಕಲಿ ಪೊಲೀಸನನ್ನು ಬಂಧಿಸಿದ್ದಾರೆ. ಹಲವಾರು ಜನರಿಗೆ ಈತ ನಕಲಿ ಪೊಲೀಸ್ ವೇಷದಲ್ಲಿ ವಂಚಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications