ಬೆಳಗಾವಿ : ಗಚ್ಚಿನಮಠದ ಸ್ವಾಮಿ ಅನುಮಾನಾಸ್ಪದ ಸಾವು

ಗುರುವಾರ ಬೆಳಗ್ಗೆ ಸ್ವಾಮೀಜಿಯವರು ಮೃತಪಟ್ಟಿದ್ದಾರೆ ಎಂದು ಮಠದ ಆಡಳಿತ ಮಂಡಳಿ ಹೇಳಿದೆ. ಚನ್ನಬಸವ ಸ್ವಾಮೀಜಿ (67) ಅವರನ್ನು ಕೆಲವು ದಿನಗಳ ಹಿಂದೆ, ಮಠದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪೀಠಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿತ್ತು. ಸದ್ಯ ಸ್ವಾಮೀಜಿ ಸಾವನ್ನಪ್ಪಿರುವುದರಿಂದ ಅನುಮಾನ ಹುಟ್ಟಿಕೊಂಡಿದೆ.
ಮೇ 16ರಂದು ಗಚ್ಚಿನ ಮಠದ ಆವರಣದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಚನ್ನಬಸವ ಸ್ವಾಮೀಜಿ, ಬಿಡದಿಯ ನಿತ್ಯಾನಂದ ಸ್ವಾಮಿಯನ್ನು ಭೇಟಿ ಮಾಡಿ, ಮಠವನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ. ಮಠಕ್ಕೆ ಬಂದ ಅನುದಾನಗಳನ್ನು ಸರಿಯಾಗಿ ವಿನಿಯೋಗಿಸುತ್ತಿಲ್ಲ ಎಂದು ಭಕ್ತರು ಆರೋಪಿಸಿದ್ದರು.
ಮಠದ ಪಾತ್ರೆ, ಆಹಾರ ಧಾನ್ಯ ಮುಂತಾದವುಗಳನ್ನು ಮಠದ ಆವರಣದಲ್ಲಿ ತಂದು ಸುರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದ ಹಲವಾರು ಮಠಾಧೀಶರ ಸಂಧಾನದ ನಂತರ ಮಠಕ್ಕೆ ನೂತನ ಉತ್ತರಾಧಿಕಾರಿ ಅವರನ್ನು ನೇಮಿಸಲಾಗಿತ್ತು.
ಸುಮಾರು 40 ವರ್ಷಗಳಿಂದ ಸ್ವಾಮೀಜಿ ಮಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮಠದಿಂದ ಹೊರ ಹಾಕಿದ್ದಕ್ಕೆ ಅವರು ಬೇಸರಗೊಂಡಿದ್ದರು. ಚನ್ನಬಸವ ಸ್ವಾಮೀಜಿ ಎದೆನೋವಿನಿಂದ ಬಳುತ್ತಿದ್ದರು. ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರ ಸಾವನ್ನಪ್ಪಿದ್ದಾರೆ ಎಂದು ಮಠದ ಭಕ್ತರಾದ ರಾಜೇಂದ್ರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಸಂಜೆ ಅಂತ್ಯಕ್ರಿಯೆ : ಗಚ್ಚಿನ ಮಠದ ಚನ್ನಬಸಚ ಸ್ವಾಮೀಜಿಗಳ ಅಂತ್ಯಸಂಸ್ಕಾರ ಗುರುವಾರ ಸಂಜೆ ನಡೆಯಲಿದೆ. ಸಂಜೆ 4 ಗಂಟೆಯವರೆಗೂ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. [ಚೌಳಿಮಠದ ಸ್ವಾಮೀಜಿ ಸಾವಿನ ಸುತ್ತ]
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications