ಮಂತ್ರಿ ಸ್ಥಾನ ತಪ್ಪಲು ಸ್ವಾತಂತ್ರ್ಯ ಹೋರಾಟಗಾರರ ಸಂಚು

ಅದೇ ಅತ್ತ ಭಾಜಪದಲ್ಲಿ ವಯೋವೃದ್ಧ ನಾಯಕರೊಬ್ಬರು ಕಿರಿಯ ವಯಸ್ಸಿನ ಶಿಷ್ಯಕೋಟಿ ಪಟ್ಟಕ್ಕೇರಿದ್ದನ್ನು ಸಹಿಸದೆ ಚಿಕ್ಕಮಕ್ಕಳಂತೆ ಮುನಿಸಿಕೊಂಡಿದ್ದ ದೃಷ್ಟಾಂತ ನಮ್ಮ ಕಣ್ಣೇದುರಿಗೇ ಇರುವಾಗ ಕಾಂಗ್ರೆಸ್ ನಾಯಕನ ವರ್ತನೆ ಮೆಚ್ಚುಗೆಗೆ ಪಾತ್ರವಾಗಿದೆ.
ಸದನಕ್ಕೆ ಎಂಟ್ರಿ ಕೊಡದೆ, ಮಂತ್ರಿ ಪಟ್ಟ ಬೇಕೇಬೇಕು ಎಂದು ರಚ್ಚೆ ಹಿಡಿದಿದ್ದ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರ ಸದಾಶಿವನಗರ ಮನೆಗೇ ತೆರಳಿದ್ದ ಡಾ ಪರಮೇಶ್ವರ್, ಹಾಗೆಲ್ಲ ಹಠ ಹಿಡಿಯಬಾರದು ಎಂದು ಡಿಕೆಶಿಗೆ ತಿಳಿಯಹೇಳಿ ಬಂದಿದ್ದರು.
ಅಂದು ಇಂದು ಫಲ ನೀಡಿದೆ. ಹಿರಿಯರ ಮಾತಿಗೆ ಮಣೆ ಹಾಕಿದ ಕಾಂಗ್ರೆಸ್ಸಿನ ಹಿರಿಯ ನಾಯಕ, ವರ್ಚಸ್ವೀ ಶಿವಕುಮಾರ್ ಕೊನೆಗೂ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಬಹಿರಂಗವಾಗಿ ಸದನದಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ವಾರಿಗೆಯವರು ಮೂದಲಿಸಿಯಾರು ಎಂದು ಸ್ಪೀಕರ್ ಕಚೇರಿಯಲ್ಲಿ ಗೌಪ್ಯವಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸ್ತ್ರ ಮುಗಿಸಿದ್ದಾರೆ.
ಗಮನಾರ್ಹವೆಂದರೆ 14ನೇ ವಿಧಾನಸಭೆಯ ಮೊದಲ ಅವಧಿಯ ಅಧಿವೇಶನಕ್ಕೆ ಗೈರುಹಾಜರಾಗುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದರು. 'ನನ್ನ ಆ ನಡುವಳಿಕೆಯಿಂದ ಯಾರಿಗೆ ಏನನ್ನು ಹೇಗೆ ಅರ್ಥ ಮಾಡಿಸಬೇಕು ಎಂಬುದರಲ್ಲಿ ನಾನು ಯಶಸ್ವಿಯಾಗಿದ್ದೇನೆ. ಇನ್ನು ಅದರ ಗೊಡವೆ ಬೇಡ. ಹಾಗಾಗಿ ಪ್ರಮಾನ ವಚನ ಸ್ವೀಕರಿಸಿದ್ದು ಶಾಸಕನಾಗಿ ನನ್ನ ಜವಾಬ್ದಾರಿಯನ್ನು ಪೂರೈಸುವೆ ಎಂದು ಡಿಕೆಶಿ ಹೇಳಿರುವುದು ಗಮನಾರ್ಹ.
224ನೇ ಶಾಸಕರಾಗಿ ಪ್ರಮಾಣವಚನ:
ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರು ಪೂರ್ವನಿಗದಿಯಂತೆ ಗುರುವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಹಾಲಿ ವಿಧಾನಸಭೆಯ 224ನೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಪ್ರಮಾಣವಚನ ಬೋಧಿಸಿದರು.
ತತ್ಸಂಬಂಧ ನಿನ್ನೆ ಬುಧವಾರ ಸ್ಪೀಕರ್ ಜತೆ ಚರ್ಚಿಸಲು ಅವರು ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭಧಲ್ಲಿ ವಿಧಾನಸಭೆಯ ಪ್ರತಿಪಕ್ಷಗಳ ಮೊಗಸಾಲೆಯಲ್ಲಿ ಕಾಣಿಸಿಕೊಂಡಿದ್ದ ಡಿಕೆಶಿ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ, 'ನನ್ನ ಮೇಲೆ ಸವಾರಿ ಮಾಡಲು ಅವಕಾಶ ನೀಡುವುದಿಲ್ಲ. ಯಾರಿಗೆ ಸಂದೇಶ ರವಾನೆ ಮಾಡಬೇಕಿತ್ತೋ ಅದು ಅವರಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ' ಎಂದು ಮಾರ್ಮಿಕವಾಗಿ ಹೇಳಿದ್ದರು.
'ನನ್ನ ಮೇಲಿರುವ ಆರೋಪಗಳು ಸಾಬೀತಾಗದೆ ನಾನು ಕಳಂಕಿತನಾಗಲು ಹೇಗೆ ಸಾಧ್ಯ? ಕಾಂಗ್ರೆಸ್ ಕಟ್ಟಲು ಮೂರು ದಶಕಗಳಿಂದ ಹಗಲಿರುಳು ಶ್ರಮ ಹಾಕಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತರಲು ನನ್ನದೇ ಆದ ಕೊಡುಗೆ ನೀಡಿದ್ದೇನೆ. ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲಿದೆ. ನಾನು ಕಳಂಕಿತನಾಗಿದ್ದರೆ ಕ್ಷೇತ್ರದ ಜನ ಸತತ ಆರು ಬಾರಿ ವಿಧಾನಸಭೆಗೆ ಆರಿಸಿ ಕಳುಹಿಸಲು ಹೇಗೆ ಸಾಧ್ಯವಿತ್ತು ? ಕೆಲವರ ಕುತಂತ್ರದಿಂದ ಮೂಲೆಗುಂಪು ಮಾಡಲು ಸಾಧ್ಯವಿಲ್ಲ. ಹೈಕಮಾಂಡ್ ಶ್ರೀರಕ್ಷೆ ನನ್ನ ಮೇಲಿದೆ' ಎಂದು ಗುಡುಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications