KRS ದಾಖಲೆ: ಪಾತಾಳ ಕಚ್ಚಿದ ಕಾವೇರಿ ನೀರು
ಮಂಡ್ಯ, ಜೂನ್ 13- ಈ ದಾಖಲೆ ಖಂಡಿತ ನಮಗೆ ಬೇಡ; ನಮ್ಮ ಕಾವೇರಿ ಮಾತೆಗೂ ಇದು ಶ್ರೇಯಸ್ಕರವಲ್ಲ. ಬುಧವಾರ ಬೆಳಗ್ಗೆ 6 ಗಂಟೆಯ ವೇಳೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ 62.92 ಅಡಿಗೆ ಕುಸಿದಿದೆ.
ಇದು ಕಳೆದ 68 ವರ್ಷಗಳಲ್ಲೇ ಕನಿಷ್ಠ ಮಟ್ಟದ ನೀರು ಶೇಖರಣೆಯಾಗಿದೆ. 1945ರಲ್ಲಿ 63.28 ಅಡಿ ನೀರಿತ್ತು. 2003ರ ಮೇ 10ರಂದು ನೀರಿನ ಪ್ರಮಾಣ 65 ಅಡಿಯಿತ್ತು. ಇನ್ನು 2005ರಲ್ಲಿ 71.54 ಅಡಿಯಿತ್ತು.
ಅಂದಹಾಗೆ ಕೆಆರ್ ಎಸ್ ಅಣೆಕಟ್ಟೆಯಲ್ಲಿ ನೀರು ಸಂಗ್ರಹ ಸಾಮರ್ಥ್ಯವಿರುವುದು 124.8 ಅಡಿ. ಕರ್ನಾಟಕದ ಮಟ್ಟಿಗೆ ಬೆಂಗಳೂರು, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಜನರಿಗೆ ನೀರು ಪೂರೈಸುವ ಕೆಆರ್ ಎಸ್ ಅಣೆಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಸೆಕೆಂಡಿಗೆ 227 ಚದರ ಅಡಿ ಪ್ರಮಾಣದಲ್ಲಿ ನೀರಿನ ಒಳಹರಿವು ಇತ್ತು. ಹೊರಹರಿವು 764 ಕ್ಯುಸೆಕ್ಸ್ ದಾಟಿತ್ತು.

ಆದರೆ, ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಅಗತ್ಯವಿರುವ ಕುಡಿಯುವ ನೀರು ಪ್ರಮಾಣ ದಿನವೊಂದಕ್ಕೆ 1,200 ಕ್ಯುಸೆಕ್ಸ್. ಈಗಿನ ಸಂಗ್ರಹಣೆಯಲ್ಲಿ ಇನ್ನು 10 ದಿನಗಳ ಕಾಲವಷ್ಟೇ ಕುಡಿಯುವ ನೀರು ಪೂರೈಸಬಹುದು.
ಪರಿಸ್ಥಿತಿ ಹೀಗೇ ಮುಂದುವರಿದರೆ ಜೂನ್ ಅಂತ್ಯಕ್ಕೆ ನೀರಿಗೆ ಆಹಾಕಾರ ಕಾಣಿಸಿಕೊಳ್ಳಲಿದೆ ಎಂದು Cauvery Neeravari Nigam Ltd (CNNL), Executive Engineer ವಿಜಯ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ಆದರೆ ಸಮಾಧಾನಕರ ಸಂಗತಿಯೆಂದರೆ ಮಡಿಕೇರಿಯಲ್ಲಿ ಕಾವೇರಿ ನದಿ ಪಾತ್ರಗಳಲ್ಲಿ ಒಂದೆರಡು ದಿನದಿಂದ ಉತ್ತಮ ಮಳೆಯಾಗುತ್ತಿದೆ.
2012ರ ಏಪ್ರಿಲ್ 9ರಂದು 93.63 ನೀರಿತ್ತು. 2012ರ ಜೂನ್ 1ರಂದು 110 ಅಡಿಯಿತ್ತು. ಆದರೆ ಸುಪ್ರೀಂಕೋರ್ಟಿನ ಹಂಸಕ್ಷೀರ ನ್ಯಾಯದಲ್ಲಿ ನಮಗೆ ನೀರು ಇಲ್ಲ ಕ್ಷೀರವೂ ಇಲ್ಲದಂತಾಗಿದೆ. ಒಂದೇ ಸಮನೆ ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮ KRS ಇಂದು ದಾಖಲೆಯ ಕುಸಿತ ಕಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications