ಹಿಟ್ ಅಂಡ್ ರನ್ : ಇಬ್ಬರು ಅಮಾಯಕರು ಬಲಿ

ಯಲಹಂಕದ ಆಳ್ಳಾಲಸಂದ್ರ ಗೇಟ್ ಬಳಿ ಮಂಗಳವಾರ ರಾತ್ರಿ ಜಗದೀಶ್ (40) ಎಂಬುವವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಜಗದೀಶ್ ಶವವನ್ನು ರಸ್ತೆಯ ಪಕ್ಕದ ಪೊದೆಗೆ ಎಸೆದು ಹೋಗಿದ್ದಾರೆ.
ಕಮ್ಮನಹಳ್ಳಿ ಸಮೀಪ ನೆಹರು ರಸ್ತೆ ದಾಟುತ್ತಿದ್ದ ಶವರಣ (45) ಅವರಿಗೂ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ರಕಸ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೊಲೆ ಶಂಕೆ ವ್ಯಕ್ತವಾಗಿತ್ತು : ಯಲಹಂಕ ಬಳಿ ಹಿಟ್ ಅಂಡ್ ರನ್ ಪ್ರಕರಣಕ್ಕೆ ಬಲಿಯಾದ ಜಗದೀಶ್ ಶವವನ್ನು ಜನರು ಗುರುತು ಹಿಡಿದಿದ್ದರು. ಜಗದೀಶ್ ಕಟ್ಟಡಗಳಿಗೆ ಟೈಲ್ಸ್ ಕೂರಿಸುವ ಕೆಲಸ ಮಾಡುತ್ತಿದ್ದರು. ಇವರಿಗೆ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ತಲೆ ಮತ್ತು ಹೊಟ್ಟೆಯ ಭಾಗಕ್ಕೆ ತೀವ್ರವಾದ ಪೆಟ್ಟಾಗಿತ್ತು.
ಪೊಲೀಸರು ಇದು ಕೊಲೆ ಪ್ರಕರಣವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಯಿಂದ ಜಗದೀಶ್ ವಾಹನ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ವಾಹನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.
ಸ್ನೇಹಿತನ ನೋಡಲು ಹೊರಟಿದ್ದ : ಕಮ್ಮಹಳ್ಳಿ ಸಮೀಪ ವಾಹನ ಡಿಕ್ಕಿ ಹೊಡೆದು ಬಲಿಯಾದ ಶರವಣ ನೆಹರು ರಸ್ತೆಯಲ್ಲಿದ್ದ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಹೊರಟಿದ್ದ. ಮನೆಯ ಹತ್ತಿರವಿದ್ದೇನೆ ಎಂದು ಫೋನ್ ಮಾಡಿ ಮಾತನಾಡಿದ್ದ, ಆದರೆ ಮನೆ ತಲುಪುವ ಮೊದಲೆ ಮಸಣ ಸೇರಿದ್ದಾರೆ.
ಯಲಹಂಕ ಮತ್ತು ಬಾಣಸವಾಡಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ವಾಹನ ಸವಾರರಿಗಾಗಿ ಹುಡುಕಾಟ ಪ್ರಾರಂಭವಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications