ಹಿಟ್ ಅಂಡ್ ರನ್ : ಇಬ್ಬರು ಅಮಾಯಕರು ಬಲಿ

ಯಲಹಂಕದ ಆಳ್ಳಾಲಸಂದ್ರ ಗೇಟ್ ಬಳಿ ಮಂಗಳವಾರ ರಾತ್ರಿ ಜಗದೀಶ್ (40) ಎಂಬುವವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಜಗದೀಶ್ ಶವವನ್ನು ರಸ್ತೆಯ ಪಕ್ಕದ ಪೊದೆಗೆ ಎಸೆದು ಹೋಗಿದ್ದಾರೆ.
ಕಮ್ಮನಹಳ್ಳಿ ಸಮೀಪ ನೆಹರು ರಸ್ತೆ ದಾಟುತ್ತಿದ್ದ ಶವರಣ (45) ಅವರಿಗೂ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ರಕಸ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೊಲೆ ಶಂಕೆ ವ್ಯಕ್ತವಾಗಿತ್ತು : ಯಲಹಂಕ ಬಳಿ ಹಿಟ್ ಅಂಡ್ ರನ್ ಪ್ರಕರಣಕ್ಕೆ ಬಲಿಯಾದ ಜಗದೀಶ್ ಶವವನ್ನು ಜನರು ಗುರುತು ಹಿಡಿದಿದ್ದರು. ಜಗದೀಶ್ ಕಟ್ಟಡಗಳಿಗೆ ಟೈಲ್ಸ್ ಕೂರಿಸುವ ಕೆಲಸ ಮಾಡುತ್ತಿದ್ದರು. ಇವರಿಗೆ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ತಲೆ ಮತ್ತು ಹೊಟ್ಟೆಯ ಭಾಗಕ್ಕೆ ತೀವ್ರವಾದ ಪೆಟ್ಟಾಗಿತ್ತು.
ಪೊಲೀಸರು ಇದು ಕೊಲೆ ಪ್ರಕರಣವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಯಿಂದ ಜಗದೀಶ್ ವಾಹನ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ವಾಹನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.
ಸ್ನೇಹಿತನ ನೋಡಲು ಹೊರಟಿದ್ದ : ಕಮ್ಮಹಳ್ಳಿ ಸಮೀಪ ವಾಹನ ಡಿಕ್ಕಿ ಹೊಡೆದು ಬಲಿಯಾದ ಶರವಣ ನೆಹರು ರಸ್ತೆಯಲ್ಲಿದ್ದ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಹೊರಟಿದ್ದ. ಮನೆಯ ಹತ್ತಿರವಿದ್ದೇನೆ ಎಂದು ಫೋನ್ ಮಾಡಿ ಮಾತನಾಡಿದ್ದ, ಆದರೆ ಮನೆ ತಲುಪುವ ಮೊದಲೆ ಮಸಣ ಸೇರಿದ್ದಾರೆ.
ಯಲಹಂಕ ಮತ್ತು ಬಾಣಸವಾಡಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ವಾಹನ ಸವಾರರಿಗಾಗಿ ಹುಡುಕಾಟ ಪ್ರಾರಂಭವಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications