ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ ಬಂಧನ

ಬುಗ್ತಿ ಹತ್ಯೆ ಪ್ರರಣದ ವಿಚಾರಣೆ ನಡೆಸಿದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಆರೋಪಿ ಮುಷರಫ್ ಅವರಿಗೆ ಎರಡು ವಾರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
2006ರಲ್ಲಿ ನಡೆದ ಸೇನಾ ಕಾರ್ಯಚರಣೆಯಲ್ಲಿ ಬಲೂಚಿಸ್ತಾನದ ಮುಖಂಡ ನವಾಬ್ ಅಕ್ಬರ್ ಬುಗ್ತಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಪಾಕಿಸ್ತಾನದ ಮಿಲಿಟರಿ ಮುಖ್ಯಸ್ಥನಾಗಿದ್ದ ಮುಷರಫ್ ಅವರು ಹತ್ಯೆ ಪ್ರಕರಣದ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬಲೂಚಿಸ್ತಾನದಪೊಲೀಸರು ತನಿಖೆ ನಡೆಸಿದ್ದರು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದಿನ ಮುಷರಫ್ ಅವರ ಫಾರ್ಮ್ ಹೌಸ್ ನಲ್ಲಿ ಪೊಲೀಸರು ಬಂಧಿಸಿದ್ದು, ಮುಷರಫ್ ಅವರ ಫಾರ್ಮ್ ಹೌಸ್ ನ್ನು ಸಬ್ ಜೈಲಾಗಿ ಪರಿವರ್ತನೆ ಮಾಡಿ ಪ್ರಕರಣದ ವಿಚಾರಣೆಯನ್ನು ಅಲ್ಲೇ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಸಬ್ ಜೈಲಾಗಿ ಪರಿವರ್ತಿಸಲಾಗಿರುವ ಫಾರ್ಮ್ ಹೌಸ್ ಇಸ್ಲಾಮಾಬಾದಿನ ಚಕ್ ಶಹಾಜಾದ್ ಗ್ರಾಮದಲ್ಲಿದೆ. ಆಗಸ್ಟ್ 26,2006ರಲ್ಲಿ ಬಲೂಚಿಸ್ತಾನದ ಗುಹೆಯೊಂದರಲ್ಲಿ ಅಡಗಿದ್ದ ನವಾಬ್ ಅಕ್ಬರ್ ಬುಗ್ತಿಯನ್ನು ಹೊರಗೆಳೆದು ಕೊಲ್ಲುವಂತೆ ಪರ್ವೇಜ್ ಮುಷರಫ್ ಆದೇಶಿಸಿದ್ದರು.
ಬಲೂಚಿಸ್ತಾನದ ಸ್ವಾಯುತ್ತತೆ, ನೈಸರ್ಗಿಕ ಸಂಪತ್ತಿನ ರಕ್ಷಣೆಗಾಗಿ ಅಕ್ಬರ್ ಬುಗ್ತಿ ಹೋರಾಟ ನಡೆಸಿದ್ದರು. ಸಶಸ್ತ್ರ ಪಡೆಯನ್ನು ಬೆಳೆಸಿದ್ದಲ್ಲದೆ ನೈಸರ್ಗಿಕ ಸಂಪತ್ತು ಹಂಚಿಕೆಯಲ್ಲಿ ಹೆಚ್ಚಿನ ಪಾಲು ಸಿಗಬೇಕು ಎಂದು ಪಾಕಿಸ್ತಾನವನ್ನು ಆಗ್ರಹಿಸಿದ್ದರು. ಇದರಿಂದ ಕೆರಳಿದ ಅಂದಿನ ಅಧ್ಯಕ್ಷ ಹಾಗೂ ಮಿಲಿಟರಿ ಪಡೆ ಮುಖ್ಯಸ್ಥ ಮುಷರಫ್ ಅವರು ಬುಗ್ತಿಯನ್ನು ಹತ್ಯೆಗೈಯಲು ಮುಂದಾಗಿದ್ದರು.
ಮಾಜಿ ಅಧ್ಯಕ್ಷ ಮುಷರಫ್ ಅವರ ಮೇಲೆ ಒಟ್ಟು ಎರಡು ಕೊಲೆ ಪ್ರಕರಣಗಳಿವೆ. ಅಕ್ಬರ್ ಬುಗ್ತಿ ಕೊಲೆ ಪ್ರಕರಣದಲ್ಲಿ ಈಗ ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾರೆ. ಇನ್ನೊಂದು ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರನ್ನು ಹತ್ಯೆಗೈದ ಆರೋಪ ಕೂಡಾ ಹೊತ್ತಿದ್ದಾರೆ.
ಬುಗ್ತಿ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗುತ್ತಿದ್ದಂತೆ ಮುಷರಫ್ ಅವರು ಸೌದಿ ಅರೇಬಿಯಾದಲ್ಲಿರುವ ತಮ್ಮ ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ ಅವರನ್ನು ನೋಡಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಮುಷರಫ್ ಮನವಿ ತಿರಸ್ಕರಿಸಿದ ನ್ಯಾಯಾಲಯ ಮಾಜಿ ಅಧ್ಯಕ್ಷ ಮುಷರಫ್ ಗೆ ನ್ಯಾಯಾಂಗ ಬಂಧನ ಶಿಕ್ಷೆ ವಿಧಿಸಿದೆ. (ಐಎಎನ್ಎಸ್)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications