ಎನ್ಡಿಎ ಜತೆಗಿನ ಮೈತ್ರಿ ಕಳೆದುಕೊಂಡ ಜೆಡಿಯು
ಪಾಟ್ನ, ಜೂ.16 : ಎನ್ಡಿಎ ಜೊತೆಗಿನ ಹದಿನೇಳು ವರ್ಷಗಳ ಮೈತ್ರಿಯನ್ನು ಜೆಡಿಯು ಅಧಿಕೃತವಾಗಿ ಕಡಿದುಕೊಂಡಿದೆ. ಬಿಹಾರದಲ್ಲಿಯೂ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿರುವ ಸಿಎಂ ನಿತೀಶ್ ಕುಮಾರ್, ವಿಶ್ವಾಸ ಮತ ಯಾಚಿಸಲು ಮುಂದಾಗಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ರಾಜ್ಯಪಾಲ ಡಿ.ವೈ.ಪಾಟೀಲ್ ಅವರನ್ನು ಭೇಟಿ ಮಾಡಿ, ವಿಶ್ವಾಸಮತ ಯಾಚನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ರಾಜ್ಯಪಾಲರ ಅನುಮತಿಯಂತೆ, ಜೂನ್ 19ರಂದು ವಿಶೇಷ ಅಧಿವೇಶನ ನಡೆಸಿ, ವಿಶ್ವಾಸಮತ ಯಾಚಿಸಲಾಗುವುದು ಎಂದರು.
ನಂತರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಯು ಅಧ್ಯಕ್ಷ ಶರದ್ ಯಾದವ್ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಎನ್ಡಿಎ ಜೊತೆಗಿನ ಹದಿನೇಳು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಕಡಿಕೊಳ್ಳಲಿದ್ದೇವೆ ಎಂದು ಹೇಳಿದರು.

ಶರದ್ ಯಾದವ್ ಮಾತನಾಡಿ, ವಾಜಪೇಯಿ ಮತ್ತು ಅಡ್ವಾಣಿ ಎನ್ಡಿಎ ಮೈತ್ರಿಕೂಟ ರಚಿಸಿದ್ದರು. ಇತ್ತೀಚಿನ ಕೆಲವು ವಿದ್ಯಮಾನಗಳಿಂದ ಬೇಸರವಾಗಿದೆ. ಎರಡೂ ಪಕ್ಷಗಳ ತತ್ವ ಮತ್ತು ಗುರಿಗಳು ಬೇರೆ-ಬೇರೆಯಾಗಿರುವುದರಿಂದ ಬಿಜೆಪಿ ಮತ್ತು ಎನ್ಡಿಎ ಜತೆಗಿನ ಮೈತ್ರಿ ಕಡಿದುಕೊಳ್ಳಲಾಗುವುದು ಎಂದರು.
ಬಿಹಾರದಲ್ಲೂ ಬಿಜೆಪಿ ಜೊತೆಗೆ ಜೆಡಿಯು ಉತ್ತಮ ಮೈತ್ರಿ ಹೊಂದಿತ್ತು. ಆದರೆ, ಎರಡು ಪಕ್ಷಗಳ ದಾರಿ ಬೇರೆ ಬೇರೆ ಆಗಿರುವುದರಿಂದ ವಿಂಗಡನೆ ಅನಿವಾರ್ಯವಾಗಿತ್ತು ಎಂದು ಸಿಎಂ ನಿತೀಶ್ ಕುಮಾರ್ ಹೇಳಿದರು.
ಬಿಹಾರ ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಅದಕ್ಕೆ ಬೇರೆ ರಾಜ್ಯದ ಉದಾಹರಣೆ ಬೇಕಾಗಿಲ್ಲ ಎಂದು ಗುಜರಾತ್ ಸಿಎಂ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಎನ್ಡಿಎ ಸಂಚಾಲಕ ಹುದ್ದೆಗೆ ತಕ್ಷಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.
ಜೂನ್ 19ರಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಜೆಡಿಯು ಬಹುಮತ ಸಾಬೀತು ಪಡಿಸಲಿದೆ ಎಂದು ನಿತೀಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಹುದ್ದೆ ನೀಡಿದ್ದರಿಂದ ಜೆಡಿಯು ಎನ್ಡಿಎ ಮೈತ್ರಿಕೂಟ ತೊರೆಯುವ ಬಗ್ಗೆ ಸುಳಿವು ನೀಡಿತ್ತು.
ಇಂದು ಅಧಿಕೃತವಾಗಿ ಜೆಡಿಯು ಎನ್ಡಿಎ ಮೈತ್ರಿಕೂಟ ತೊರೆದಿದ್ದು, ಇದರಿಂದ ಮುಂದಿನ ಲೋಕಸಭೆ ಚುನಾವಣೆ ಗೆಲ್ಲುವ ಉತ್ಸಾಹದಲ್ಲಿರುವ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದೆ. ಬಿಜೆಪಿಯ ಮುಂದಿನ ನಡೆ ಏನು ಎಂದು ಕಾದು ನೋಡಬೇಕು.
ಬಿಹಾರ ವಿಧಾನಸಭೆ ಬಲಾಬಲ
ಒಟ್ಟು ಸ್ಥಾನಗಳು - 243
ಬಹುಮತಗಳಿಸಲು - 122
ಜೆಡಿಯು - 118
ಬಿಜೆಪಿ - 91
ಆರ್ ಜೆಡಿ - 22
ಎಲ್ ಜೆಪಿ - 3
ಕಾಂಗ್ರೆಸ್ - 4
ಇತರರು - 8
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications