ಎನ್ಡಿಎ ಜತೆಗಿನ ಮೈತ್ರಿ ಕಳೆದುಕೊಂಡ ಜೆಡಿಯು
ಪಾಟ್ನ, ಜೂ.16 : ಎನ್ಡಿಎ ಜೊತೆಗಿನ ಹದಿನೇಳು ವರ್ಷಗಳ ಮೈತ್ರಿಯನ್ನು ಜೆಡಿಯು ಅಧಿಕೃತವಾಗಿ ಕಡಿದುಕೊಂಡಿದೆ. ಬಿಹಾರದಲ್ಲಿಯೂ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿರುವ ಸಿಎಂ ನಿತೀಶ್ ಕುಮಾರ್, ವಿಶ್ವಾಸ ಮತ ಯಾಚಿಸಲು ಮುಂದಾಗಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ರಾಜ್ಯಪಾಲ ಡಿ.ವೈ.ಪಾಟೀಲ್ ಅವರನ್ನು ಭೇಟಿ ಮಾಡಿ, ವಿಶ್ವಾಸಮತ ಯಾಚನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ರಾಜ್ಯಪಾಲರ ಅನುಮತಿಯಂತೆ, ಜೂನ್ 19ರಂದು ವಿಶೇಷ ಅಧಿವೇಶನ ನಡೆಸಿ, ವಿಶ್ವಾಸಮತ ಯಾಚಿಸಲಾಗುವುದು ಎಂದರು.
ನಂತರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಯು ಅಧ್ಯಕ್ಷ ಶರದ್ ಯಾದವ್ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಎನ್ಡಿಎ ಜೊತೆಗಿನ ಹದಿನೇಳು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಕಡಿಕೊಳ್ಳಲಿದ್ದೇವೆ ಎಂದು ಹೇಳಿದರು.

ಶರದ್ ಯಾದವ್ ಮಾತನಾಡಿ, ವಾಜಪೇಯಿ ಮತ್ತು ಅಡ್ವಾಣಿ ಎನ್ಡಿಎ ಮೈತ್ರಿಕೂಟ ರಚಿಸಿದ್ದರು. ಇತ್ತೀಚಿನ ಕೆಲವು ವಿದ್ಯಮಾನಗಳಿಂದ ಬೇಸರವಾಗಿದೆ. ಎರಡೂ ಪಕ್ಷಗಳ ತತ್ವ ಮತ್ತು ಗುರಿಗಳು ಬೇರೆ-ಬೇರೆಯಾಗಿರುವುದರಿಂದ ಬಿಜೆಪಿ ಮತ್ತು ಎನ್ಡಿಎ ಜತೆಗಿನ ಮೈತ್ರಿ ಕಡಿದುಕೊಳ್ಳಲಾಗುವುದು ಎಂದರು.
ಬಿಹಾರದಲ್ಲೂ ಬಿಜೆಪಿ ಜೊತೆಗೆ ಜೆಡಿಯು ಉತ್ತಮ ಮೈತ್ರಿ ಹೊಂದಿತ್ತು. ಆದರೆ, ಎರಡು ಪಕ್ಷಗಳ ದಾರಿ ಬೇರೆ ಬೇರೆ ಆಗಿರುವುದರಿಂದ ವಿಂಗಡನೆ ಅನಿವಾರ್ಯವಾಗಿತ್ತು ಎಂದು ಸಿಎಂ ನಿತೀಶ್ ಕುಮಾರ್ ಹೇಳಿದರು.
ಬಿಹಾರ ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಅದಕ್ಕೆ ಬೇರೆ ರಾಜ್ಯದ ಉದಾಹರಣೆ ಬೇಕಾಗಿಲ್ಲ ಎಂದು ಗುಜರಾತ್ ಸಿಎಂ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಎನ್ಡಿಎ ಸಂಚಾಲಕ ಹುದ್ದೆಗೆ ತಕ್ಷಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.
ಜೂನ್ 19ರಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಜೆಡಿಯು ಬಹುಮತ ಸಾಬೀತು ಪಡಿಸಲಿದೆ ಎಂದು ನಿತೀಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಹುದ್ದೆ ನೀಡಿದ್ದರಿಂದ ಜೆಡಿಯು ಎನ್ಡಿಎ ಮೈತ್ರಿಕೂಟ ತೊರೆಯುವ ಬಗ್ಗೆ ಸುಳಿವು ನೀಡಿತ್ತು.
ಇಂದು ಅಧಿಕೃತವಾಗಿ ಜೆಡಿಯು ಎನ್ಡಿಎ ಮೈತ್ರಿಕೂಟ ತೊರೆದಿದ್ದು, ಇದರಿಂದ ಮುಂದಿನ ಲೋಕಸಭೆ ಚುನಾವಣೆ ಗೆಲ್ಲುವ ಉತ್ಸಾಹದಲ್ಲಿರುವ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದೆ. ಬಿಜೆಪಿಯ ಮುಂದಿನ ನಡೆ ಏನು ಎಂದು ಕಾದು ನೋಡಬೇಕು.
ಬಿಹಾರ ವಿಧಾನಸಭೆ ಬಲಾಬಲ
ಒಟ್ಟು ಸ್ಥಾನಗಳು - 243
ಬಹುಮತಗಳಿಸಲು - 122
ಜೆಡಿಯು - 118
ಬಿಜೆಪಿ - 91
ಆರ್ ಜೆಡಿ - 22
ಎಲ್ ಜೆಪಿ - 3
ಕಾಂಗ್ರೆಸ್ - 4
ಇತರರು - 8
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications