ಜಿನ್ನಾ ಮನೆಗೆ ಬಾಂಬಿಟ್ಟು, ಧ್ವಂಸಗೊಳಿಸಿದ ಉಗ್ರರು

ನೈಋತ್ಯ ಬಲೂಚಿಸ್ತಾನದ ಜೈರತ್ ನಗರದಲ್ಲಿರುವ ಮನೆಯಲ್ಲಿ ಜಿನ್ನಾ ತಮ್ಮ ಕೊನೆ ದಿನಗಳನ್ನು ಕಳೆದಿದ್ದರು. ಶನಿವಾರ ನಡೆದ ಬಾಂಬ್ ದಾಳಿಯಿಂದಾಗಿ ಮನೆಯ ಸುತ್ತಲೂ, ಮರದಿಂದ ನಿರ್ಮಿಸಿದ್ದ ಅಲಂಕಾರಿಕ ಗೋಡೆಯು ಸುಟ್ಟು ಭಸ್ಮವಾಗಿದೆ.
ಕ್ವಾಯಿದ್ ಎ ಅಜಾಂ ಎಂದು ಖ್ಯಾವಾಗಿರುವ ಈ ಕಟ್ಟಡದ ಸಮೀಪ ಉಗ್ರರು, ನಾಲ್ಕು ಬಾಂಬುಗಳನ್ನು ಹುದುಸಿಟ್ಟಿದ್ದರು. ಶನಿವಾರ ಅವುಗಳು ಸ್ಪೋಟಗೊಂಡಿವೆ. ಬಾಂಬ್ ಸ್ಪೋಟದ ನಂತರ ಕಟ್ಟಡದ ರಕ್ಷಣೆಗೆ ನಿಂತಿದ್ದ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ, ಇಬ್ಬರು ಮೃತಪಟ್ಟಿದ್ದಾರೆ.
ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಫೋಟಗೊಂಡಿರದ ಆರು ಬಾಂಬುಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಪ್ರತಿಯೊಂದರಲ್ಲೂ ಮೂರು ಕೆ.ಜಿ ಸ್ಫೋಟಕಗಳನ್ನು ತುಂಬಿಸಿದ್ದ ಉಗ್ರರು, ಭಾರೀ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಬಾಂಬ್ ಸ್ಪೋಟಗೊಂಡ ನಂತರ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸುವುದು ವಿಫಲವಾದ್ದರಿಂದ, ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಯಿತು. ನಾಲ್ಕು ಗಂಟೆಗಳ ಕಾಲ ನಿರಂತರವಾಗಿ ಹೊತ್ತಿ ಉರಿದ ಬೆಂಕಿಗೆ, ಜಿನ್ನಾ ಅವರ ನಿವಾಸ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
1892ರಲ್ಲಿ ಈ ಬೇಸಿಗೆ ಕಟ್ಟಡವನ್ನು ಕಟ್ಟಲಾಗಿತ್ತು. ಜಿನ್ನಾ ಅವರು ತಮ್ಮ ಅಂತಿಮ ದಿನಗಳನ್ನು ಈ ಮನೆಯಲ್ಲಿ ಕಳೆದಿದ್ದರು. ನಂತರ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಗಿತ್ತು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications