ಕೊಲ್ಲಾಪುರದಲ್ಲಿ ಸರಣಿ ಹಂತಕ, ಹತ್ತು ಕೊಲೆ

ಭಾನುವಾರ ರಾತ್ರಿಯೂ ಕೊಲ್ಲಾಪುರ ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಕೂಲಿ ಕಾರ್ಮಿಕನ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. 10 ಕೊಲೆಗಳನ್ನು ಒಂದೇ ರೀತಿ ಮಾಡಿರುವ ಸರಣಿ ಹಂತಕನನ್ನು ಹಿಡಿಯುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ.
ಕಳೆದ ನಾಲ್ಕು ತಿಂಗಳಲ್ಲಿ ನಗರದಲ್ಲಿ ಹತ್ತು ಕೊಲೆಯಾಗಿದ್ದು, ಎಲ್ಲಾ ಕೊಲೆಗಳನ್ನು ಒಂದೇ ರೀತಿ ಮಾಡಲಾಗಿದೆ. ಕೊಲೆಯಾದ ಎಲ್ಲರೂ ಕಾರ್ಮಿಕರಾಗಿದ್ದಾರೆ. ಇದು ಒಬ್ಬ ಅಥವ ಒಂದೇ ಗುಂಪಿನ ಕೃತ್ಯ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಹತ್ತು ಕೊಲೆಗಳು ನಡೆದ ಸ್ಥಳದಲ್ಲಿ ಯಾವುದೇ ಸುಳಿವು ಪೊಲೀಸರಿಗೆ ದೊರಕಿಲ್ಲ. ಆದ್ದರಿಂದ ಕೊಲೆಗಾರರನ್ನು ಹಿಡಿಯುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಆರ್ಥಿಕ ದುಃಸ್ಥಿತಿಯಿಂದ ಮಾನಸಿಕ ಸ್ಥಿರತೆ ಕಳೆದುಕೊಂಡಿರುವ ವ್ಯಕ್ತಿ ಸರಣಿ ಹತ್ಯೆ ಮಾಡುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೂಲಿ ಕಾರ್ಮಿಕರೇ ಟಾರ್ಗೆಟ್ : ನಗರದಲ್ಲಿ ಕೊಲೆಯಾದ ಹತ್ತುಮಂದಿಯೂ ಕೂಲಿ ಕಾರ್ಮಿಕರಾಗಿದ್ದು, ಅವರನ್ನು ಕೊಲ್ಲುವ ಹಂತಕರು, ಹಣ ದೋಚಿ, ಪರಾರಿಯಾಗಿದ್ದಾನೆ. ಹತ್ತುಮಂದಿಯ ಶವಗಳನ್ನು ಹುಡುಕಿಕೊಂಡು ವಾರಸುದಾರರು ಬಂದಿಲ್ಲ. ಆದ್ದರಿಂದ ತನಿಖೆಗೆ ಹಿನ್ನಡೆ ಉಂಟಾಗುತ್ತಿದೆ.
ಸರಣಿ ಹಂತಕನಿಂದಾಗಿ ಕೊಲ್ಲಾಪುರ ಜನರು ಆತಂಕಗೊಂಡಿದ್ದು, ರಾತ್ರಿ 9 ಗಂಟೆ ನಂತರ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಹಂತಕನನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಆರ್.ಆರ್.ಪಾಟೀಲ್ ಭರವಸೆ ನೀಡಿದ್ದಾರೆ.
ಸರಣಿ ಕೊಲೆಗಳಿಂದ ಜನರು ಆತಂಕಗೊಂಡಿದ್ದಾರೆ. ಹಂತಕರನ್ನು ಬಂಧಿಸುವಂತೆ ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳು ಕೊಲ್ಲಾಪುರದಲ್ಲಿ ಪ್ರತಿಭಟನೆಯನ್ನು ನಡೆಸಿವೆ. ಪೊಲೀಸರು ಶೀಘ್ರವಾಗಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications