ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ
ಸೋಮವಾರ ಅಂಬಿಕಾ (26) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿರುವ ಪೊಲೀಸರು, ಅಂಬಿಕಾ ಪತಿ ಆನಂದ್ ಅವರನ್ನು ಬಂಧಿಸಿದ್ದಾರೆ.
ಮೂರು ವರ್ಷದ ಹಿಂದೆ ಅಂಬಿಕಾ ಮತ್ತು ಆನಂದ್ ವಿವಾಹವಾಗಿದ್ದರು. ಇವರಿಗೆ ಒಂದು ವರ್ಷದ ಹೆಣ್ಣು ಮಗುವಿದೆ. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿಯ ಮನೆಯವರು ಅಂಬಿಕಾಗೆ ಹಿಂಸೆ ನೀಡಲು ಪ್ರಾರಂಭಿಸಿದ್ದಾರೆ.
ಇದರಿಂದ ತವರಿಗೆ ಮರಳಿದ ಅಂಬಿಕಾ ಅಲ್ಲೇ ನೆಲೆಸಿದ್ದರು. ಒಂದು ತಿಂಗಳ ಹಿಂದೆ ಪತಿ ಆನಂದ್ ನಾವು ತಪ್ಪು ಮಾಡಿದೆವು. ಅಂಬಿಕಾಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದು ತವರು ಮನೆಯಿಂದ ಕರೆದುಕೊಂಡು ಹೋಗಿದ್ದರು.
ನಂತರ ಮತ್ತೆ ವರದಕ್ಷಿಣೆಗಾಗಿ ಪೀಡಿಸಲು ಆರಂಭಿಸಿದ್ದಾರೆ. ಇದರಿಂದ ಮನನೊಂದ ಅಂಬಿಕಾ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೂರು ದಾಖಲು : ವರದಕ್ಷಿಣೆ ಆಸೆಗಾಗಿ ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು, ಅಂಬಿಕಾ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಆನಂದ್, ಆತನ ತಂದೆ ಮತ್ತು ತಾಯಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಂಬಿಕಾ ನಾದಿನಿ ಸವಿತಾ ಮತ್ತು ಮೈದುನಾ ವೇನು ವಿರುದ್ಧವೂ ದೂರು ದಾಖಲಾಗಿದ್ದು ಇವರಿಗಾಗಿ ಹೆಣ್ಣೂರು ಪೊಲೀಸರು, ಹುಟುಕಾಟ ಪ್ರಾರಂಭಿಸಿದ್ದಾರೆ.