ಮೋದಿ ಮಧ್ಯಸ್ಥಿಕೆ ವಹಿಸಿದರೆ ಮಾತ್ರ ಬಿಜೆಪಿಗೆ ವಾಪಸ್

yeddyurappa-to-returns-only-if-modi-mediates-dhananjay
ಬೆಂಗಳೂರು, ಜೂನ್ 19: ಕೆಜೆಪಿ ಮತ್ತು ಬಿಜೆಪಿ ಒಂದಾಗುವ ಕಾಲ ಸನ್ನಿಹಿತವಾಗಿದೆ. ಟಿವಿ9ಗೆ ಇದೀಗತಾನೆ ನೀಡಿದ ಸಂದರ್ಶನದಲ್ಲಿ ಧನಂಜಯ ಕುಮಾರ್ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿದರೆ ಮಾತ್ರ ಕೆಜೆಪಿ ನಾಯಕ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸಾಗುವುದಕ್ಕೆ ಸಿದ್ಧ ಎಂದು ಕೆಜೆಪಿ ವಕ್ತಾರ ವಿ ಧನಂಜಯ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಮೂಲ ತತ್ವಗಳಿಗೆ ನಾವೆಂದೂ ವಿರೋಧ ಹೊಂದಿದವರಲ್ಲ. ಈಗ ಕೆಜೆಪಿ ಸಿದ್ಧಾಂತಕ್ಕೆ ಧಕ್ಕೆ ಬಾರದಂತೆ ಪೂರಕ ವಾತಾವರಣ ನಿರ್ಮಾಣವಾದರೆ ಬಿಜೆಪಿ ಜತೆ ಮರುಸೇರ್ಪಡೆಗೆ ನಾವು ಸಿದ್ಧ ಎಂದು ಅವರು ಟಿವಿ9ಗೆ ತಿಳಿಸಿದ್ದಾರೆ.

ಕೆಜೆಪಿಯ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಂಡೇ ಬಿಜೆಪಿ ಜತೆ ಕೈಜೋಡಿಸುತ್ತೇವೆ. ಬಿಜೆಪಿ ಜತೆ ಸಂಪೂರ್ಣ ವಿಲೀನ ಆಗಲು ಬಯಸುವುದಿಲ್ಲ. ಪ್ರತ್ಯೇಕವಾಗಿದ್ದುಕೊಂಡೇ ನಮ್ಮ ಅಸ್ತಿತ್ವ ಉಳಿಸಿಕೊಳ್ಳುತ್ತೇವೆ ಎಂದು ಧನಂಜಯ ಕುಮಾರ್ ಹೇಳಿದ್ದಾರೆ.

'ಮೋದಿ ಅವರು ಮಧ್ಯಸ್ಥಿಕೆಗೆ ಮುಂದೆ ಬಂದರೆ ಕೆಜೆಪಿ ಹೊಂದಾಣಿಕೆಗೆ ಸಿದ್ಧ. ಆದರೆ ಇದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆಗೆ ಮಾತ್ರ ಸೀಮಿತ. ಇದು ಯಡಿಯೂರಪ್ಪನವರ ನಿಲುವೂ ಆಗಿದೆ' ಎಂದು ಧನಂಜಯ್ ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪಗೆ ಸ್ವಾಗತ- ಬಿಜೆಪಿ: ಯಾವುದೇ ಷರತ್ತುಗಳು ಹಾಕದೆ ಮುಕ್ತವಾಗಿ ಬಿಜೆಪಿಗೆ ಮರಳುವುದಾದರೆ ಯಡಿಯೂರಪ್ಪಗೆ ಸ್ವಾಗತವಿದೆ. ಯಡಿಯೂರಪ್ಪ ಬಂದರೆ ನಮಗೆ ಆನೆ ಬಲ ಬಂದಂತೆ. ಇದು ನನ್ನದಷ್ಟೇ ಅಲ್ಲ. ಬಿಜೆಪಿ ನಾಯಕರೂ ಯಡಿಯೂರಪ್ಪ ವಿಷಯದಲ್ಲಿ ಇದೇ ನಿಲುವನ್ನು ಹೊಂದಿದ್ದಾರೆ' ಎಂದು ಡಿಬಿ ಚಂದ್ರೇಗೌಡ ಅವರು ಟಿವಿ9ಗೆ ತಿಳಿಸಿದ್ದಾರೆ.

ಗೋ. ಮಧುಸೂಧನ್ ಅವರೂ ಯಡಿಯೂರಪ್ಪ ನೇತೃತ್ವದ ಕೆಜೆಪಿ ವಾಪಸಾತಿಗೆ ಸ್ವಾಗತ ಕೋರಿದ್ದಾರೆ. 'ಯಡಿಯೂರಪ್ಪ ಅವರು ಬಿಜೆಪಿಗೆ ಮರಳಬೇಕು ಎಂಬುದೇ ನಮ್ಮ ಆಶಯ. ಅವರು ಬಿಜೆಪಿ ಬಿಟ್ಟ ಮೊದಲ ದಿನದಿಂದಲೇ ನನಗೆ ಯಡಿಯೂರಪ್ಪ ವಾಪಸಾಗುವ ಬಗ್ಗೆ ವಿಶ್ವಾಸವಿತ್ತು' ಎಂದು ಮಧುಸೂಧನ್ ಪ್ರತಿಕ್ರಿಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+