ಪುರಿ ಜಗನ್ನಾಥ ದೇವಾಲಯದಿಂದ ಎಫ್ಎಂ ಕೇಂದ್ರ!

ಬುಧವಾರ ನಡೆದ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ ಸ್ವಂತ ಎಫ್ಎಂ ಕೇಂದ್ರ ಸ್ಥಾಪಿಸುವ ಕುರಿತು ಚರ್ಚೆ ನಡೆದಿದೆ. ಆದರೆ, ಅಂತಿಮ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಸರ್ಕಾರದ ಅನುಮತಿ ಬಳಿಕ, ಆಡಳಿತ ಮಂಡಳಿ ಎಫ್ಎಂ ಕೇಂದ್ರ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.
ಜನರಿಗೆ ಪೂರಿ ಜನನ್ನಾಥ ದೇವಾಲಯದ ಮಹಿಮೆಯನ್ನು ಸಾರಿ ಭಕ್ತರನ್ನು ಆಕರ್ಷಿಸುವ ಉದ್ದೇಶದಿಂದ ಸ್ವಂತ ಎಫ್ಎಂ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಕೇಂದ್ರ ಸ್ಥಾಪಿಸಲು ಸುಮಾರು 5 ಕೋಟಿ ರೂ.ಗಳ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಎಂಟು ಗಂಟೆ ಸೇವೆ : ದೇವಾಲಯದ ಸ್ವಂತ ಎಫ್ಎಂ ರೆಡಿಯೋ ದಿನಕ್ಕೆ ಎಂಟುಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಬೆಳಗ್ಗೆ ಮತ್ತು ಸಂಜೆ ನಾಲ್ಕಗಂಟೆಗಳ ಕಾಲ ಎಫ್ಎಂ ಪ್ರಸಾರ ಜನರಿಗೆ ಲಭ್ಯವಾಗಲಿದೆ. ದೇಶದ ಸುಪ್ರಸಿದ್ಧ ಗಾಯಕರು ಹಾಡಿದ ಭಜನೆಗಳು ರೆಡಿಯೋನಲ್ಲಿ ಪ್ರಸಾರವಾಗಲಿದೆ.
ಭಜನೆಗಳು ಜಗನ್ನಾಥ, ಬಲಭದ್ರ ಮತ್ತು ಸುಮಿತ್ರಾ ದೇವರ ಮೇಲಿನವಾಗಿರುತ್ತವೆ. ರಾಜ್ಯದ ಪ್ರಸಿದ್ಧ ಸಂಗೀತಗಾರರಿಂದ ಈಗಾಗಲೇ ಭಜನೆಗಳನ್ನು ಹಾಡಿಸಿ, ಸಂಗ್ರಹಿಸುವ ಕಾರ್ಯ ಪ್ರಾರಂಭವಾಗಲಿದೆ. ಎಎಫ್ಎಂ ರೆಡಿಯೋ ಅಧಿಕೃತವಾಗಿ ಎಂದು ಉದ್ಘಾಟನೆಯಾಗಲಿದೆ ಎಂದು ಸದ್ಯದಲ್ಲೇ ತಿಳಿಯಲಿದೆ.
ಜುಲೈತಿಂಗಳಿನಲ್ಲಿ ದೇವಾಲಯದ ರಥಯಾತ್ರೆ, ವಾರ್ಷಿಕ ಉತ್ಸವಗಳು ನಡೆಯುವುದರಿಂದ ನಂತರ ಎಫ್ಎಂ ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಮತ್ತು ಒಡಿಸ್ಸಾ ರಾಜ್ಯ ಸರ್ಕಾರ ಎಫ್ಎಂ ಕೇಂದ್ರಕ್ಕೆ ಇನ್ನೂ ಅನುಮತಿ ನೀಡಿಲ್ಲ.
ಸಾಮಾಜಿಕ ಜಾಲಗಳಲ್ಲೂ ಜಗನ್ನಾಥ : ಎಫ್ಎಂ ರೆಡಿಯೋ ಕೇಂದ್ರದ ಹೊರತಾಗಿ ದೇವಾಲಯದ ಟ್ವೀಟರ್ ಮತ್ತು ಫೇಸ್ ಬುಕ್ ಖಾತೆಗಳನ್ನು ತೆರೆದು, ದೇವಾಲಯದ ಕಾರ್ಯಕ್ರಮಗಳ ಮಾಹಿತಿಯನ್ನು ಜನರಿಗೆ ತ್ವರಿತವಾಗಿ ತಲುಪಿಸಲು ಮುಂದಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications