ಯಡಿಯೂರಪ್ಪ ಮರುಸೇರ್ಪಡೆಗೆ ಬಿಜೆಪಿ ತಣ್ಣೀರು

ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಯಾವುದೇ ಅನ್ಯ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆಯೇ ಇಲ್ಲ ಎಂದು ಬಿಜೆಪಿ ಹೇಳಿದ್ದು, ಕೆಜೆಪಿಯೊಡನೆಯ ಮೈತ್ರಿಯನ್ನು ತಿರಸ್ಕರಿಸಿದೆ. ಈ ನಿರ್ಧಾರದಿಂದಾಗಿ ಬಿಜೆಪಿ ಮತ್ತು ಕೆಜೆಪಿಯಲ್ಲಿನ ಹಲವಾರು ನಾಯಕರ ಆಸೆ ನಿರಾಸೆಯಾಗಿದೆ.
ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಘುನಾಥ ರಾವ್ ಮಲ್ಕಾಪುರೆ ಅವರು, "ವಿಲೀನದ ಕುರಿತು ಧನಂಜಯ್ ಕುಮಾರ್ ಅವರು ಹೇಳಿಕೆ ನೀಡಿದ ನಂತರ ಮತ್ತು ಹೇಳಿಕೆ ನೀಡುವ ಮುನ್ನ ಬಿಜೆಪಿಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚಿಂತನೆಯನ್ನೂ ನಡೆಸಿಲ್ಲ" ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿದರೆ ಬಿಜೆಪಿ ಮತ್ತು ಕೆಜೆಪಿ ಒಂದಾಗಲಿವೆ ಎಂದು ಧನಂಜಯ್ ಕುಮಾರ್ ಅವರು ಹೇಳಿಕೆ ನೀಡಿ ಅಚ್ಚರಿ ಉಂಟುಮಾಡಿದ್ದರು. ಅಲ್ಲದೆ, ನಾಗಪುರದಲ್ಲಿ ಕೆಜೆಪಿ ಮತ್ತು ಬಿಜೆಪಿ ವಿಲೀನಕ್ಕೆ ವೇದಿಕೆ ಸಿದ್ಧವಾಗಿದೆ ಎಂಬ ಮಾತು ಕೂಡ ಕೇಳಿಬಂದಿತ್ತು. ಜೊತೆಗೆ, ಯಡಿಯೂರಪ್ಪ ಮತ್ತೆ ಬಿಜೆಪಿಗೆ ಬಂದರೆ ಸುಸ್ವಾಗತ ಎಂದು ಹಲವಾರು ಬಿಜೆಪಿಗರು ತಳಿರುತೋರಣ ಕಟ್ಟಲು ಕೂಡ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದ ಗೌಡ ಅವರು ಯಡಿಯೂರಪ್ಪ ಬಿಜೆಪಿ ಪಕ್ಷದೊಳಗೆ ಬರಲು ಹಸಿರು ನಿಶಾನೆ ತೋರಿದ್ದರು. ಉಮೇಶ್ ಕತ್ತಿ, ಗೋ ಮಧುಸೂಧನರಂಥವರು ತೆರೆಮರೆಯಲ್ಲಿಯೇ ಪ್ರಯತ್ನ ನಡೆಸಿದ್ದರು. ಮುಂದಿನ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲು ಯಡಿಯೂರಪ್ಪನವರ ನಾಯಕತ್ವದ ಅಗತ್ಯವಿದೆ ಎಂಬ ಮಾತು ಕೂಡ ಕೇಳಿಬಂದಿತ್ತು.
ಈಗ ಆ ಎಲ್ಲ ಪ್ರಯತ್ನಗಳು ಮಣ್ಣುಪಾಲಾಗುವ ಸೂಚನೆಗಳು ಕಂಡುಬಂದಿವೆ. ಬಿಜೆಪಿ ಹೈಕಮಾಂಡ್ ಬಿಜೆಪಿ ಮತ್ತು ಕೆಜೆಪಿ ಮೈತ್ರಿಕೂಟಕ್ಕೆ ಅಂತಹ ಉತ್ಸಾಹ ತೋರುತ್ತಿಲ್ಲ. ಈ ಕುರಿತಂತೆ ಯಾವುದೇ ನಾಯಕರು ಬಹಿರಂಗ ಹೇಳಿಕೆ ನೀಡಬಾರದೆಂದು ತಾಕೀತು ಮಾಡಲಾಗಿದೆ. ಯಾರಾದರೂ ಹೇಳಿಕೆ ನೀಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾದ್ಯಕ್ಷ ಪ್ರಹ್ಲಾದ್ ಜೋಶಿ ಅವರು ಎಚ್ಚರಿಕೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications