ಕೋಲಾರದಲ್ಲಿ ಆನೆ ದಾಳಿಗೆ ವಿಜಯವಾಣಿ ಪತ್ರಕರ್ತ ಬಲಿ

ಕಾಡಾನೆಗಳು ಎಬ್ಬಿಸುತ್ತಿರುವ ಹಾವಳಿಯ ವರದಿಗೆಂದು ತೆರಳಿದ್ದ ವಿಜಯವಾಣಿ ದಿನಪತ್ರಿಕೆಯ ವರದಿಗಾರ ಮಂಜುನಾಥ್ ಎಂಬುವವರನ್ನು ರೊಚ್ಚಿಗೆದ್ದಿದ್ದ ಕಾಡಾನೆಗಳು ತುಳಿದು ಕೊಂದುಹಾಕಿವೆ. ಮಂಜುನಾಥ್ ಅವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ.
ಹತ್ತು ದೊಡ್ಡ ಆನೆಗಳು ಮತ್ತು ನಾಲ್ಕು ಮರಿಆನೆಗಳಿದ್ದ ಹಿಂಡು ಇಂಜನಹಳ್ಳಿಯಲ್ಲಿರುವ 25 ಎಕರೆ ನೀಲಗಿರಿ ತೋಪಿಗೆ ನುಗ್ಗಿದ್ದವು. ಅಕ್ಕಪಕ್ಕದಲ್ಲಿ ದೊಡ್ಡಮೆಣಸಿನಕಾಯಿ ಸೇರಿದಂತೆ ಹಲವಾರು ಬೆಳೆಗಳನ್ನು ಬೆಳೆಯುತ್ತಿದ್ದ ರೈತರು ಆನೆಗಳನ್ನು ಓಡಿಸಲು ಯತ್ನಿಸಿದ್ದಾರೆ.
ಗಲಾಟೆ ಮಾಡಿಕೊಂಡು ಆನೆಗಳನ್ನು ಓಡಿಸುತ್ತಿದ್ದಾಗ, ಅತ್ತಿಂದಿತ್ತ ಓಡಾಡುತ್ತಿದ್ದ ಆನೆಗಳು ಗೊಂದಲಕ್ಕೀಡಾಗಿ ಅಲ್ಲಿದ್ದವರ ಮೇಲೆ ದಾಳಿ ಮಾಡಿವೆ. ಮಂಜುನಾಥ್ ಅವರು ಫೋಟೋ ಕ್ಲಿಕ್ಕಿಸಿದಾಗ ಅದರಿಂದ ವಿಚಲಿತವಾದ ಆನೆಗಳು ಮಂಜುನಾಥ್ ಅವರನ್ನು ಅಟ್ಟಿಸಿಕೊಂಡು ಹೋಗಿ ಹೊಸಕಿಹಾಕಿವೆ.
ಆನೆ ನಾಡಿಗೆ ನುಗ್ಗಿ ಬೆಳೆಗಳನ್ನು ಹಾಳು ಮಾಡುತ್ತಿರುವುದಕ್ಕೆ ಮತ್ತು ಮಂಜುನಾಥ ಅವರ ಸಾವಿಗೆ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ಹೊಣೆಗಾರರನ್ನಾಗಿ ಮಾಡುತ್ತಿದ್ದಾರೆ. ಮಾಲೂರಿನಲ್ಲಿಯೂ ಇವೇ ಆನೆಗಳು ಶನಿವಾರ ನುಗ್ಗಿ ಮೂವರನ್ನು ಕೊಂದು ಹಾಕಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಇಂಜನಹಳ್ಳಿಯಲ್ಲಿ ಇಷ್ಟೆಲ್ಲ ರಂಪಾಟ ನಡೆಯುತ್ತಿದ್ದಾಗ ಆನೆಗಳನ್ನು ಅರಣ್ಯದತ್ತ ಓಡಿಸಲು ಅರಣ್ಯ ಇಲಾಖೆಯವರು ಕ್ರಮ ತೆಗೆದುಕೊಳ್ಳದೆ, ಜೀಪಿನಲ್ಲಿ ಕುಳಿತು ಏನಾಗುತ್ತದೋ ಎಂಬುದನ್ನು ವೀಕ್ಷಿಸುತ್ತಿದ್ದರು ಅವರು ದೂರಿದ್ದಾರೆ. ಇದರ ಬಗ್ಗೆ ವಿಚಾರಿಸಿದಾಗ, ಆನೆಗಳು ತಾವಾಗಿಯೇ ಕಾಡಿಗೆ ಓಡಿಹೋಗುತ್ತವೆ, ಗ್ರಾಮಸ್ಥರು ಅವನ್ನು ಗೊಂದಲಕ್ಕೀಡು ಮಾಡಬಾರದು ಎಂದು ಹೇಳಿದ್ದಾರೆ ಎನ್ನುತ್ತಾರೆ ಅರಣ್ಯ ಅಧಿಕಾರಿಗಳು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications