ಮಣಿಪಾಲ್ ರೇಪ್: ಆರೋಪಿ ರೇಖಾ ಚಿತ್ರ ಬಿಡುಗಡೆ

ಈ ಮಧ್ಯೆ, ಘಟನೆಯನ್ನು ಖಂಡಿಸಿ ಎಬಿವಿಪಿ ಕರೆ ನೀಡಿದ್ದ ಬಂದ್ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಉಡುಪಿ ನಗರದಲ್ಲಿಂದು ಭಾರಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಘಟನೆಯ ಸಂಬಂದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ನಾಲ್ವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ರಾಜ್ಯ ಗೃಹ ಸಚಿವ ಕೆಜೆ ಜಾರ್ಜ್ ಅವರನ್ನು ಹೊರತುಪಡಿಸಿ, ಸ್ಥಳೀಯ ಪೊಲೀಸ್ ಅಧೀಕಾರಿಗಳೂ ಸೇರಿದಂತೆ ಬೇರೆ ಯಾರಿಗೂ ಬಾಧಿತ ಯುವತಿಯನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ. ಯುವತಿಯ ಕುಟುಂಬಸ್ಥರು ಈ ನಿರ್ಬಂಧ ಹಾಕಿದ್ದಾರೆ.
ಗುರುವಾರ ರಾತ್ರಿ ತಿರುವನಂತಪುರ ಮೂಲದ 4ನೇ ವರ್ಷದ ಎಂಬಿಬಿಸ್ ವಿದ್ಯಾರ್ಥಿನಿಯನ್ನು ಆಟೋ ರಿಕ್ಷಾದಲ್ಲಿ ಅಪಹರಿಸಿದ ಮೂವರು ದುಷ್ಕರ್ಮಿಗಳು ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದರು. ಸುಮಾರು 3 ಗಂಟೆ ಕಾಲ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದರು.
ಯುವತಿಯನ್ನು ನೋಡಿಕೊಳ್ಳುತ್ತಿರುವ ಮಹಿಳಾ ಪೊಲೀಸರು ಯುವತಿ ನೀಡಿದ ಮಾಹಿತಿಯನ್ನಾಧರಿಸಿ ಒಬ್ಬ ಆರೋಪಿಯ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.
ಮೇಲಿನ ರೇಖಾಚಿತ್ರದಲ್ಲಿರುವ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಸಾರ್ವಜನಿಕರು ಕೂಡಲೇ ಈ ಕೆಳಗಿನ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವುದು.
Sadananda Tippannanavar, Manipal police inspector - 94808 05448
Udupi Special Cell - 97425 12100
0820 - 2521257












Click it and Unblock the Notifications