ಯಡಿಯೂರಪ್ಪ ಅಸಹಾಯಕ; ಧನಂಜಯ ಕುಮಾರ್ ವಿದೂಷಕ

ಈ ಮಧ್ಯೆ, ಧನಂಜಯ ಕುಮಾರ್ ಒಬ್ಬ ವಿದೂಷಕ. ಕೆಜೆಪಿಯಲ್ಲೇ ಅವರ ಮಾತಿಗೆ ಬೆಲೆ ಇಲ್ಲ. ಬಿಜೆಪಿ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರು ಧನಂಜಯ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಯಡಿಯೂರಪ್ಪನವರ ಶಕ್ತಿ, ಸಾಮರ್ಥ್ಯ ಏನೆಂಬುದು ಗೊತ್ತಿದೆ. ಆದರೆ ಇದೀಗ ಅವರು ಅಸಹಾಯಕರಾಗಿದ್ದಾರೆ ಎಂಬುದು ಸಾಬೀತಾಗಿದ್ದು, ಒಂಟಿಯಾಗಿ ಏನೂ ಮಾಡಲು ಸಾಧ್ಯವಿಲ್ಲ ಎಂಬುದು ಅವರಿಗೆ ಮನವರಿಕೆಯಾಗಿದೆ. ಹೀಗಾಗಿ ಸಂಜೆ ಕಳೆಯುವುದರೊಳಗೆ ಸಂತೆ ಮುಗಿಸಬೇಕೆಂಬ ಯೋಚನೆಯಲ್ಲಿ ದಿನಕ್ಕೊಂದು ಹೇಳಿಕೆ ಕೊಡಿಸಿ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸುವ ರಾಜಕೀಯ ತಂತ್ರ ಮಾಡುತ್ತಿದ್ದಾರೆ ಎಂದು ಆಯನೂರು ವ್ಯಾಖ್ಯಾನಿಸಿದ್ದಾರೆ.
ಪಕ್ಷದ ಶಿವಮೊಗ್ಗ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಜತೆ ಮೈತ್ರಿಗೆ ಕೆಜೆಪಿ ಸಿದ್ಧವಿದೆ ಎಂಬ ಧನಂಜಯ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಕೆಜೆಪಿಯಲ್ಲಿ ಧನಂಜಯಕುಮಾರ್ ಒಬ್ಬ ವಿದೂಷಕನಂತಿದ್ದು, ದಿನಕ್ಕೊಂದು ರೀತಿ ಹೇಳಿಕೆ ನೀಡುವ ಅವರ ಮಾತಿಗೆ ಆ ಪಕ್ಷದಲ್ಲೇ ಬೆಲೆ ಇಲ್ಲ ಎಂದು ಆಯನೂರು ಲೇವಡಿ ಮಾಡಿದ್ದಾರೆ.
ಅಕ್ಟೋಬರ್ನಲ್ಲಿ ಲೋಕಸಭೆ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕೆಜೆಪಿ ಆತಂಕಕ್ಕೆ ಒಳಗಾಗಿದೆ. ಈ ಪಕ್ಷಕ್ಕೆ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಯಾವುದಾದರೊಂದು ಪಕ್ಷದ ಜತೆ ಮೈತ್ರಿಗೆ ಮುಂದಾಗಿದೆ ಎಂದು ಟೀಕಿಸಿದರು.
ಬಿಜೆಪಿಯನ್ನು ಮುಗಿಸುವುದಾಗಿ ಹೇಳುತ್ತಿದ್ದ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಈಗ ನಿತ್ಯ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಸಂಘಟನೆ ಎಂಬ ಭದ್ರ ಕೋಟೆ ಇಲ್ಲದಿದ್ದರೆ ಎಂತಹ ಪರಿಸ್ಥಿತಿ ಬರುತ್ತದೆ ಎಂಬುದಕ್ಕೆ ಯಡಿಯೂರಪ್ಪ ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications