ಲೈಂಗಿಕ ಶಿಕ್ಷಣ: ಪೈ ಸಲಹೆಗೆ ಒಕ್ಕೂಟ ವಿರೋಧ

ಈ ಹಿಂದಿನ ಬಿಜೆಪಿ ಸರ್ಕಾರ 6ನೇ ತರಗತಿಯಿಂದ ಲೈಂಗಿಕ ಶಿಕ್ಷಣದ ಬೋಧನೆ ಆರಂಭಿಸುವ ಯೋಜನೆ ಹಮ್ಮಿಕೊಂಡಾಗ ಸಮಾಜದ ವಿವಿಧ ಸ್ತರಗಳ ಗಣ್ಯರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಲೈಂಗಿಕ ಶಿಕ್ಷಣದ ಬೋಧನೆಯ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚಿಸಲಾಗಿದ್ದು, ಲೈಂಗಿಕ ಶಿಕ್ಷಣ ಬೋಧನೆ ಅವಶ್ಯಕತೆ ಇಲ್ಲ ಎಂದು ಸಮಿತಿ ವರದಿಯನ್ನು ನೀಡಿತ್ತು.
ಮಕ್ಕಳಿಗೆ ಲೈಂಗಿಕತೆಯ ಕುರಿತು ತಿಳುವಳಿಕೆಯನ್ನು ಯಾರು, ಯಾವ ಹಂತದಲ್ಲಿ ನೀಡಬೇಕೆಂಬುದರ ಕುರಿತು ಶಿಕ್ಷಣ ತಜ್ಞರು, ಪೋಷಕರು ಹಾಗೂ ಸಾಮಾಜಿಕ ಕ್ಷೇತ್ರಗಳ ಪರಿಣಿತರ ಅಭಿಪ್ರಾಯವನ್ನು ಪರಿಗಣಿಸಬೇಕಾದ ಅವಶ್ಯಕತೆಯನ್ನು ಸ್ಪಷ್ಟ ಪಡಿಸಲಾಗಿತ್ತು. ಆದರೆ, ಈ ಪ್ರಜಾತಾಂತ್ರಿಕ ರೂಢಿಯನ್ನು ಕಡೆಗಣಿಸಿ ಲೈಂಗಿಕ ಶಿಕ್ಷಣವನ್ನು ಜಾರಿಗೊಳಿಸಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
ಅಮೆರಿಕ, ಯುರೋಪುಗಳಲ್ಲಿ ಲೈಂಗಿಕ ಶಿಕ್ಷಣ ಜಾರಿಗೊಳಿಸಿದ ನಂತರ ಅದು ಉದ್ದೇಶಿತ ಗುರಿಯನ್ನು ಸಾಧಿಸುವಲ್ಲಿ ವಿಫಲವಾದದ್ದು, ಅಪಾಯಕಾರಿ ಪರಿಣಾಮ ಉಂಟುಮಾಡಿತು. ಆ ದೇಶಗಳಲ್ಲಿ ಶಾಲೆಗಳಲ್ಲೇ ಗರ್ಭ ನಿರೋಧಕಗಳನ್ನು ಹಂಚಬೇಕಾದ ಆತಂಕಕಾರಿ ಪರಿಸ್ಥಿತಿ ಉಂಟಾಗಿದೆ.
ವಾಸ್ತವ ವಿಚಾರ ಹೀಗಿರುವಾಗ ಹೆಚ್ಚುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ತಡೆತಟ್ಟಲು ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆ ಎನ್ನುವುದು ಎಳ್ಳಷ್ಟೂ ಹುರುಳಿಲ್ಲದ ವಿಚಾರ. ಅಶ್ಲೀಲತೆಯ ಪ್ರಚಾರ ತಡೆಗಟ್ಟಿ, ಉನ್ನತ ನೀತಿ-ಮೌಲ್ಯಗಳನ್ನು ಬೆಳೆಸುವುದ ರಿಂದ ಅತ್ಯಾಚಾರದಂತಹ ಅಮಾವೀಯ ಕೃತ್ಯಗಳಿಗೆ ಕೊನೆಹಾಕಬಹುದು ಎಂದು ಉಭಯ ಸಂಘಟನೆಗಳ ಅಭಿಪ್ರಾಯ ವ್ಯಕ್ತಪಡಿಸಿವೆ.
ಯಾವುದೇ ಸಮಾಲೋಚನೆಯಿಲ್ಲದೆ, ಏಕಪಕ್ಷೀಯವಾಗಿ ಜಾರಿಗೊಳಿಸಲು ಹೊರಟಿರುವ ಲೈಂಗಿಕ ಶಿಕ್ಷಣದ ನೀತಿಯನ್ನು ಕೈಬಿಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಸರ್ಕಾರದ ಮಾನಸಿಕ ಆರೋಗ್ಯ ಪಡೆಯ ಅಧ್ಯಕ್ಷ ಡಾ.ಅಶೋಕ್ ಪೈ ಅವರು 9, 10, 11 ನೇ ತರಗತಿಯ ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣದ ಅಗತ್ಯವಿದೆ. ಅವರಿಗೆ ಪಾಠ ಮಾಡುವ ಬೋಧಕರಿಗೆ ಸೂಕ್ತ ತರಬೇತಿ ನೀಡಲಾಗುವುದು. ಸೆಕ್ಸ್ ಎಜುಕೇಷನ್ ಬಗ್ಗೆ ಪಠ್ಯ ತಯಾರಾಗುತ್ತಿದೆ ಎಂದು ಡಾ. ಅಶೋಕ್ ಪೈ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ಲೈಂಗಿಕ ಶಿಕ್ಷಣ ಜಾರಿಗೆ ತರಲು ಇಚ್ಛಿಸಿದೆ. ಈ ನಡುವೆ ಪ್ರತಿಭಟನೆ, ಪರ-ವಿರೋಧ ಚರ್ಚೆಗಳು ಸಾಕಷ್ಟು ಬಿಸಿಯೇರಿಸುತ್ತಿವೆ.
-
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications