ವಯನಾಡು ಮಳೆ: ಕಬಿನಿ, ಕಾವೇರಿಗೆ ಹಿತ
ಮೈಸೂರು, ಜೂನ್ 25: ಇತ್ತ ರಾಜ್ಯದಲ್ಲಿ ನಾನಾ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಅನೇಕ ಅಣೆಗಳು ತುಂಬುತ್ತಿವೆ. ಕೇರಳದ ವಯನಾಡು ಭಾಗದಲ್ಲಿ ವಾರ್ಷಿಕ ಮಳೆ ಉತ್ತಮವಾಗಿದೆ.
ಆದರೆ ಅತ್ತ ಹಿಮಾಲಯ ಸುನಾಮಿ ಕಂಡ ಉತ್ತರಾಖಂಡ ರಾಜ್ಯದಲ್ಲಿ ಮತ್ತೆ ಮಳೆರಾಯ ತನ್ನ ಪ್ರಕೋಪ ತೋರಿದ್ದಾರೆ. ಮೇಘಸ್ಫೋಟ ಸಂಭವಿಸಿಲ್ಲವಾದರೂ ಯಾವುದೇ ಕ್ಷಣ ಆಕಾಶವೇ ಕಳಚಿ ಬೀಳುವಂತೆ ಮಳೆಯಾಗುವ ಲಕ್ಷಣಗಳು ಹೆಚ್ಚಾಗಿವೆ. ಹಾಗಾಗಿ ಪ್ರವಾಹ ಪರಿಹಾರ ಕಾರ್ಯಗಳು ಇಂದೂ ಬಹುತೇಕ ಸ್ಥಗಿತಗೊಂಡಿವೆ.

ಈ ಬಾರಿ ಮುಂಗಾರು/ಮಳೆಗಾಲದಲ್ಲಿ ಮಳೆ ಇನ್ನೂ ವಿಪರೀತವಾದರೆ ಕೇದಾರನಾಥ/ಬದರೀನಾಥ ಪುನರ್ ನಿರ್ಮಾಣ ಕಾರ್ಯಗಳು ವಿಳಂಬವಾಗುವ ಸಾಧ್ಯತೆಗಳು ಹೆಚ್ಚು. ಇದರಿಂದ ಭಕ್ತರು ಇನ್ನೂ 2-3 ವರ್ಷ ಅಲ್ಲಿಗೆ ತೀರ್ಥಯಾತ್ರೆಗೆ ತೆರಳುವುದು ಸಾಧ್ಯವಾಗುವುದಿಲ್ಲ.
ಮಡಿಕೇರಿ ವರದಿ: ಇನ್ನು ಕರ್ನಾಟಕದಲ್ಲಿ ಕೊಡಗು, ಮಂಗಳೂರು, ಉಡುಪಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಮಣ್ಯ ಬಳಿಯಿರುವ ಕುಮಾರಧಾರ ನದಿ ಕಳೆದ ವರ್ಷದಂತೆ ತುಂಬಿಹರಿಯುತ್ತಿದೆ.
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ರಸ್ತೆ ಮೇಲೆ ಸುಮಾರು 1 ಅಡಿ ನೀರು ತುಂಬಿಕೊಂಡಿರುವುದರಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.
ಕೊಡಗುವಿನಲ್ಲಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಪಾತ್ರಕ್ಕೆ ನೀರು ಹರಿದುಬರುತ್ತಿದೆ. ಕೇರಳದ ವಯನಾಡು ಭಾಗದಲ್ಲಿಯೂ ಮೂರ್ನಾಲ್ಕು ದಿನಗಳಿಂದ ವಾರ್ಷಿಕ ಮಳೆ ಉತ್ತಮಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವು ಅಧಿಕವಾಗುತ್ತಿದೆ.
ಕಬಿನಿ ತುಂಬುತ್ತಿದ್ದಂತೆ ಭಾಗಮಂಡದಲ್ಲೂ ಮಳೆಯಾಗುತ್ತಿರುವುದರಿಂದ ಒಟ್ಟಾರೆಯಾಗಿ ಕಾವೇರಿ ನದಿ ತುಳುಕುವಂತಾಗಿದೆ. ಇದರಿಂದ ಕೆಆರ್ ಎಸ್ ಅಣೆಕಟ್ಟೆಯಲ್ಲಿ ಇಂದು 79.90 ಅಡಿ ನೀರು ನಿಂತಿದೆ.
ಒಟ್ಟಾರೆ ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಕೃಷಿಗಾಗಿ ರೈತರು ಮತ್ತು ಕುಡಿಯುವ ನೀರಿಗಾಗಿ ನಗರವಾಸಿಗಳು ಕಳೆದ ವರ್ಷ ನೀರಿಗಾಗಿ ನಡೆದ ಆಹಾಕಾರವನ್ನು ನೆನಪಿಸಿಕೊಂಡು ಸಮಾಧಾನದ ನಿಟ್ಟುಸಿರುಬಿಡುವಂತಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications