ಮಾಲೂರು ಕೃಷ್ಣಯ್ಯ ಶೆಟ್ಟರಿಗೆ ಲಡ್ಡುಕೊಟ್ಟ ಕಾಂಗ್ರೆಸ್!

ಮಂಗಳವಾರ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರನ್ನು ನಾವು ಪಕ್ಷಕ್ಕೆ ಸೇರಿಸಿಕೊಂಡಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ. ಈ ಕುರಿತು ಉತ್ತರಿಸುವಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿದೆ.
ಕೆಪಿಸಿಸಿಯ ತೀರ್ಮಾನದಿಂದಾಗಿ ಕೃಷ್ಣಯ್ಯ ಶೆಟ್ಟಿ ಯಾವ ಪಕ್ಷದಲ್ಲಿದ್ದಾರೆ ಎಂಬ ಗೊಂದಲ ಉಂಟಾಗಿದೆ. ವಿಧಾನಸಭೆ ಚುನಾವಣೆಗೆ ಮಾಲೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೆಟ್ಟರು, ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು.
ನಂತರ ಮೇ 13ರಂದು ಕೋಲಾರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ಸ್ವತಃ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದರು. ಆದರೆ, ಕೆಪಿಸಿಸಿ ಶೆಟ್ಟರ ಪಕ್ಷ ಸೇರ್ಪಡೆಯನ್ನು ತಳ್ಳಿ ಹಾಕಿದೆ. (ಕೈ ಹಿಡಿದ ಕೃಷ್ಣಯ್ಯ ಶೆಟ್ಟಿ)
ಶೆಟ್ಟರ ಪಕ್ಷ ಸೇರ್ಪಡೆ ಗೊಂದಲಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕಾರಣ ಎಂದು ಸ್ಪಷ್ಟನೆ ನೀಡುವಂತೆ ಕೋರಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಇದರಿಂದಾಗಿ ಕೃಷ್ಣಯ್ಯ ಶೆಟ್ಟಿ ಸ್ಥಿತಿ ಅತಂತ್ರವಾಗಿದೆ. ಶೆಟ್ಟರ ಮುಂದಿನ ರಾಜಕೀಯ ನಡೆ ಏನೆಂದು ಕಾದು ನೋಡಬೇಕಾಗಿದೆ.
ಬಿಜೆಪಿಗೆ ಲಡ್ಡು ಕೊಟ್ಟಿದ್ದರು : ಗಂಗಾಜಲ, ಲಡ್ಡು ಹಂಚಿಕೆ ಖ್ಯಾತಿಯ ಕೃಷ್ಣಯ್ಯ ಶೆಟ್ಟಿ ತಾವು ಚುನಾವಣೆ ಗೆಲ್ಲಬೇಕೆಂದು ತಮ್ಮ ವಿರುದ್ಧ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸದಂತೆ ಮಾಡಿ ಬಿಜೆಪಿ ಪಕ್ಷಕ್ಕೆ ಲಡ್ಡು ಕೊಟ್ಟಿದ್ದರು.(ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಿಲ್ಲ)
ಮಾಲೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತೆ ಮಾಡಿ ಪಕ್ಷಕ್ಕೆ ಭಾರೀ ಮುಜುಗರ ಉಂಟು ಮಾಡಿದ್ದರು. ಆದ್ದರಿಂದ ಅವರನ್ನು ಪಕ್ಷದಿಂದ ಬಿಜೆಪಿ ಉಚ್ಛಾಟಿಸಿತ್ತು. ಕೆಲವು ದಿನಗಳ ಕಾಲ ಸುಮ್ಮನಿದ್ದ ಶೆಟ್ಟರು, ಕಾಂಗ್ರೆಸ್ ಸೇರಿರುವುದಾಗಿ ಹೇಳಿದ್ದರು.
ಆದರೆ, ಈಗ ಕೆಪಿಸಿಸಿಯೇ ಕೃಷ್ಣಯ್ಯ ಶೆಟ್ಟಿ ಪಕ್ಷ ಸೇರ್ಪಡೆಯನ್ನು ತಳ್ಳಿಹಾಕಿದೆ. ಆದ್ದರಿಂದ ಕೃಷ್ಣಯ್ಯ ಶೆಟ್ಟಿ ಯಾವ ಪಕ್ಷ ಸೇರುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಅಂದಹಾಗೆ ಕೃಷ್ಣಯ್ಯ ಶೆಟ್ಟ್ರರು ಕಾಂಗ್ರೆಸ್ ಸೇರಿದ್ದೇನೆ ಎಂದು ಘೋಷಿಸಿದ್ದು ಏಕೆ? ಎಂಬುದು ಬಗೆಹರಿಯದ ಪ್ರಶ್ನೆಯಾಗಿದೆ. [ಕೋಲಾರದ ಗೆದ್ದ, ಸೋತ ಅಭ್ಯರ್ಥಿಗಳು]
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications