ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ

ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್ಎಸ್, ಲಿಂಗನಮಕ್ಕಿ, ಆಲಮಟ್ಟಿ, ತುಂಗಭದ್ರಾ, ಹಾರಂಗಿ, ಕಬಿನಿ ಮುಂತಾದವುಗಳು ನಿಧಾನವಾಗಿ ಭರ್ತಿಯಾಗುತ್ತಿವೆ. ವರುಣದೇವ ಜುಲೈತಿಂಗಳಿನಲ್ಲಿಯೂ ಹೀಗೆ ಮಳೆ ಸುರಿಸಿದರೆ, ರಾಜ್ಯ ನೀರಿನ ಕೊರತೆ ಎದುರಿಸಬೇಕಾಗಿಲ್ಲ.
ಲಿಂಗನಮಕ್ಕಿ ಜಲಾಶಯ ತುಂಬಿದರೆ ರಾಜ್ಯದ ವಿದ್ಯುತ್ ಕೊರತೆ ಸ್ವಲ್ಪ ಮಟ್ಟಿಗೆ ಬಗೆಹರಿಯಲಿದೆ. ಕೆಆರ್ಎಸ್, ಕಬಿನಿ, ಹಾರಂಗಿ ಭರ್ತಿಯಾದರೆ, ಬೆಂಗಳೂರು ಮತ್ತು ಮೈಸೂರು ನಗರಗಳಗಳಿಗೆ ನೀರಿನ ಕೊರತೆ ಉಂಟಾಗುವುದಿಲ್ಲ.
ಹೆಚ್ಚು ಮಳೆ : ಹವಾಮಾನ ಇಲಾಖೆಯ ಅಂಕಿ ಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೂ.21ರವರೆಗೆ ರಾಜ್ಯದಲ್ಲಿ 125.1 ಮಿ.ಮೀ ಮಳೆ ಬೀಳಬೇಕಿತ್ತು. ಆದರೆ ಈ ಬಾರಿ,160.3 ಮಿ.ಮೀ ನಷ್ಟು ಮಳೆ ಬಿದ್ದಿದೆ.
ಆದ್ದರಿಂದ ರಾಜ್ಯದ ಜಲಾಶಯಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಕಬಿನಿ ಜಲಾಶಯ ಭರ್ತಿಯಾಗಲು ಕೇವಲ 7 ಅಡಿ ನೀರು ಬೇಕಾಗಿದೆ. ಸೋಮವಾರ ಸಂಜೆ ಜಲಾಶಯದ ನೀರಿನ ಮಟ್ಟ 2277 ಅಡಿ ಇತ್ತು. ಕಬಿನಿ ಜಲಾಶಯದಲ್ಲಿ 2284 ಅಡಿ ನೀರು ಸಂಗ್ರಹಿಸಬಹುದಾಗಿದೆ.
ಮೈಸೂರು ಮತ್ತು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್ಎಎಸ್ ನಲ್ಲಿ 79.90 ಅಡಿ ನೀರು ಭರ್ತಿಯಾಗಿದೆ. ಕೆಆರ್ಎಸ್ ಭರ್ತಿಆಗಲು 124.80 ಅಡಿ ನೀರಿನ ಅವಶ್ಯಕತೆ ಇದೆ.
ರಾಜ್ಯಕ್ಕೆ ವಿದ್ಯುತ್ ನೀಡುವ ಲಿಂಗನಮಕ್ಕಿ ಜಲಾಶಯದಲ್ಲಿ 1760 ಅಡಿ ನೀರು ಸೋಮವಾರ ದಾಖಲಾಗಿತ್ತು. ಜಲಾಶಯದ ಒಟ್ಟು ಗಾತ್ರ 1819 ಅಡಿಗಳಾಗಿದೆ. ರಾಜ್ಯದ ಇತರ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸೋಮವಾರ ಸಂಜೆ ದಾಖಲಾದಂತೆ ಹೀಗಿದೆ.
ಜಲಾಶಯ ಇಂದಿನ ಮಟ್ಟ ಗರಿಷ್ಟ ಮಟ್ಟ
ಆಲಮಟ್ಟಿ 510.5 519.60 ಮೀ
ಭದ್ರಾ 125.30 186 ಅಡಿ
ತುಂಗಭದ್ರಾ 1590.27 1633 ಅಡಿ
ಹಾರಂಗಿ 2831.45 2,859 ಅಡಿ
ಕೆಆರ್ಎಸ್ 79.90 124.80 ಅಡಿ
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications