ಮಣಿಪಾಲ್ ರೇಪ್: ಇಬ್ಬರು ವಶಕ್ಕೆ, ಒಬ್ಬ ಪರಾರಿ

ಬೆಳಗಿನ ವರದಿ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ ಎಂದು ಉಡುಪಿಯ ಕೆಎಂಸಿ ಆಸ್ಪತ್ರೆ ವರದಿ ಸಲ್ಲಿಸಿದೆ. ಇದೀಗ ಮಾಹೆ ಕಾಲೇಜು ಆಡಳಿತ ಮಂಡಳಿಯೂ ಎಚ್ಚೆತ್ತಿದ್ದು ಪ್ರಕರಣದ ಗಂಭೀರತೆಯನ್ನು ಅರಿತು ಆರೋಪಿಗಳ ಪತ್ತೆ ಕೋರಿ ತನ್ನ ವತಿಯಿಂದಲೂ 3 ಲಕ್ಷ ರೂ ಬಹುಮಾನ ಪ್ರಕಟಿಸಿದೆ.
ಪೊಲೀಸ್ ಇಲಾಖೆಯೂ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ 2 ಲಕ್ಷ ರೂ ಬಹುಮಾನ ನೀಡುವುದಾಗಿ ಈಗಾಗಲೇ ಘೋಷಿಸಿದೆ. ಆದರೆ ಆರೋಪಿಗಳ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ.
ಈ ಮಧ್ಯೆ ಪ್ರಕರಣ ನಡೆದು ಒಂದು ವಾರ ಆಗುತ್ತಿದ್ದರೂ (ಜೂನ್ 20) ಇನ್ನೂ ಆರೋಪಿಗಳ ಪತ್ತೆಯಾಗಿಲ್ಲ. ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿಬೇಕು. ಇದಕ್ಕೆ 24 ಗಂಟೆಗಳ ಗುಡವು ಅಂದರೆ ಗುರುವಾರದ ಒಳಗಾಗಿ ಕಾಮುಕರನ್ನು ಬಂಧಿಸಬೇಕು ಎಂದು ಭಜರಂಗ ದಳ ಮತ್ತು ವಿಎಚ್ ಪಿ ಸಂಘಟನೆಗಳು ಆಗ್ರಹಿಸಿವೆ.
ಮಾದಕದ್ರವ್ಯಗಳ ಬಳಕೆ, ಪಬ್ ಬಾರ್ ಸಂಸ್ಕೃತಿ ದೇವನಗರಿಯಲ್ಲಿ ವ್ಯಾಪಕವಾಗಿ ನಡೆಯುತ್ತಿದೆ. ಇದರಿಂದ ನಗರದ ವಾತಾವರಣ ಹಾಳಾಗಿದೆ ಎಂದು ಕಿಡಿಕಾರಿರುವ ಈ ಸಂಘಟನೆಗಳು ಪೊಲೀಸರು ಎಚ್ಚೆತ್ತುಕೊಳ್ಳದಿದ್ದರೆ ನಾವೇ ಆರೋಪಿಗಳ ಪತ್ತೆಗೆ ಮುಂದಾಗಿ ನೈತಿಕ ಪೊಲೀಸ್ ಕಾರ್ಯದಲ್ಲಿ ತೊಡಗುತ್ತೇವೆ ಎಂದೂ ಎಚ್ಚರಿಸಿವೆ.
ಮಂಗಳೂರು ಪಬ್ ದಾಳಿ ನಡೆದಾಗ 'ಘಟರ್ಜಿಸಿದ್ದ' so-called ಬುದ್ಧಿಜೀವಿಗಳು ಈಗೆಲ್ಲಿ ಹೋದರು? ರಾಷ್ಟ್ರೀಯ ಟಿವಿ ಚಾನೆಲುಗಳಲ್ಲಿ ಮಣಿಪಾಲ್ ಘಟನೆ ಬಗ್ಗೆ ಚಿಕ್ಕ ಸುದ್ದಿಯೂ ಇಲ್ಲ. ಅವರೆಲ್ಲಾ ಈಗೇಕೆ ಮೌನವಾಗಿದ್ದಾರೆ ಎಂದು ಭಜರಂಗ ದಳ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು.
ಅತ್ಯಾವಾರ ನಡೆದ ಸ್ಥಳದ ಬಗ್ಗೆ ಖಚಿತ ಮಾಹಿತಿಯಿದೆ. ಆದರೆ ಇದನ್ನು ಬಾಧಿತ ವಿದ್ಯಾರ್ಥಿನಿ ದೃಢಪಡಿಸಬೇಕು. ವಿದ್ಯಾರ್ಥಿನಿ ಮತ್ತು ಆಕೆಯ ಮನೆಯವರು ತನಿಖೆಗೆ ಹೆಚ್ಚಿನ ಸಹಕಾರ ನೀಡುತ್ತಿಲ್ಲ. ಕುಂದಾಪುರದ ಡಿವೈ ಎಸ್ಪಿ ಯಶೋದಾ ಅವರೊಬ್ಬರೇ ಈಗ ನಮ್ಮ ಮತ್ತು ಬಾಧಿತ ವಿದ್ಯಾರ್ಥಿನಿಯ ನಡುವೆ ಕೊಂಡಿಯಾಗಿದ್ದಾರೆ. ವಿದ್ಯಾರ್ಥಿನಿ ಕುಟುಂಬಸ್ಥರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೇವೆ. ಆದರೂ ಅವರು ಹೆಚ್ಚಿನ ಮಾಹಿತಿ ನೀಡಲು ಮುಂದಾಗಬೇಕು ಎಂದು ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ತನಿಖೆಯಲ್ಲಿ ಯುವತಿಯ ಸಹಕಾರ, ಹೇಳಿಕೆ ಮುಖ್ಯವಾದದ್ದು. ಒತ್ತಾಯಪೂರ್ವಕವಾಗಿ ಹೇಳಿಕೆ ಪಡೆಯೋದಿಲ್ಲ. ಸಂತ್ರಸ್ತ ಯುವತಿಯ ಹೇಳಿಕೆ ಇಲ್ಲದೆ ತನಿಖೆಗೆ ಹಿನ್ನಡೆಯಾಗುತ್ತಿದೆ. ಇದೇ ರೀತಿಯಾದರೆ ಆರೋಪಿಗಳ ಪತ್ತೆ ಕಾರ್ಯ ವಿಳಂಬವಾಗಬಹುದು. ಆದರೆ ಆರೋಪಿಗಳ ಬಂಧನ ಮಾಡುವುದಂತೂ ಖಚಿತ. ಇದಕ್ಕಾಗಿ ಏನೆಲ್ಲ ಸಾಕ್ಷ್ಯಾಧಾರಗಳು ಬೇಕೋ ಅದನ್ನೆಲ್ಲ ವಿವಿಧ ಆಯಾಮಗಳ ಮೂಲಕ ಸಂಗ್ರಹ ಮಾಡಲಾಗುತ್ತಿದೆ ಎಂದು ಐಜಿಪಿ ವಿವರಿಸಿದರು.
ನೋವು ತೋಡಿಕೊಂಡ ಲೇಖಕಿ ವೈದೇಹಿ:
ಅತ್ಯಾಚಾರ ಆರೋಪಿಯನ್ನು ಪತ್ತೆ ಮಾಡದಿರುವುದು ನೋವು ತಂದಿದೆ. ಬಾಧಿತ ಯುವತಿಯನ್ನು ನಿಮ್ಮ ಮನೆಯ ಮಗಳೆಂದು ಪರಿಗಣಿಸಿ ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಲೇಖಕಿ ವೈದೇಹಿ ಬುಧವಾರ ಕೋರಿದ್ದರು.
ಮಣಿಪಾಲ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಸಿ ಆರೋಪಿಗಳನ್ನು ಪತ್ತೆ ಹಚ್ಚದಿರುವ ಬಗ್ಗೆ ಉಡುಪಿ ಜಿಲ್ಲಾ ಲೇಖಕಿಯರ ಬಳಗದ ವತಿಯಿಂದ ಬುಧವಾರ ಎಸ್ಪಿಗೆ ಮನವಿ ಅರ್ಪಿಸಿದ ಸಂದರ್ಭ ಅವರು ಮಾತನಾಡಿದರು.
ಲೇಖಕಿಯರ ಸಂಘದ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಶಾರದಾ ಭಟ್, ಕಾತ್ಯಾಯಿನಿ ಕುಂಜಿಬೆಟ್ಟು, ಸುಶೀಲಾ ಆರ್. ರಾವ್, ತಾರಾ ಭಟ್, ಇಂದಿರಾ ಹಾಲಂಬಿ, ಪ್ರಫುಲ್ಲಾ ಜಿ. ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications