ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮದುವೆಗೆ ಒಪ್ಪದ ಪ್ರಿಯಕರ, ಪ್ರಿಯತಮೆ ಸಾವು

|
Google Oneindia Kannada News

suicide
ಮೈಸೂರು, ಜೂ.27 : ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದರಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಯನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಚೈತ್ರಾ ಸಾಹೇಬ್ ಎಂದು ಗುರುತಿಸಲಾಗಿದೆ.

ಗುರುವಾರ ಬೆಳಗ್ಗೆ ಚೈತ್ರಾ ಸಾಹೇಬ್(28) ಜಯನಗರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೈತ್ರಾ ಎರಡು ವರ್ಷದಿಂದ ಪ್ರೇಮ್ ಮ್ಯಾಕ್ಸ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು.

ಚೈತ್ರಾ ಮತ್ತು ಪ್ರೇಮ್ ಸಿಯೋರೋ ಲಿಯೋರಾ ಕಂಪನಿ ಉದ್ಯೋಗಿಗಳಾಗಿದ್ದರು. ಇವರು ಪರಿಚಯ ಪ್ರೇಮಕ್ಕೆ ತಿರುಗಿತ್ತು. ಚೈತ್ರಾ ಮನೆಯಲ್ಲಿ ಪೋಷಕರು ಇವರ ವಿವಾಹಕ್ಕೆ ಅನುಮತಿ ನೀಡಿದ್ದರು. ಪ್ರಿಯಕರನ ಬಳಿ ಚೈತ್ರಾ ಎರಡು ದಿನಗಳ ಹಿಂದೆ ಮದುವೆಯ ಬಗ್ಗೆ ಪ್ರಸ್ತಾಪಿಸಿದ್ದಾಳೆ.

ಆದರೆ, ಆತ ನಿರಾಕರಿಸಿದ್ದಾನೆ. ಅಲ್ಲದೇ ನಮ್ಮ ಮನೆಯಲ್ಲಿ ಈ ವಿವಾಹಕ್ಕೆ ಒಪ್ಪಿಗೆ ನೀಡುವುದಿಲ್ಲ. ನನ್ನನ್ನು ಮರೆತು ಬಿಡು ಎಂದು ಚೈತ್ರಾಗೆ ಹೇಳಿದ್ದಾನೆ. ಇದರಿಂದ ಮನನೊಂದು ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಆಶೋಕಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ನಂತರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಚೈತ್ರಾ ಸಾವಿಗೂ ಮುನ್ನ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಪ್ರಿಯಕರ ತನಗೆ ವಂಚನೆ ಮಾಡಿರುವುದಾಗಿ ಆಕೆ ಆರೋಪಿಸಿದ್ದಾಳೆ. ಆದ್ದರಿಂದ ಪ್ರಿಯಕರ ಪ್ರೇಮ್ ರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.

English summary
A 28-year-old girl Chaitra Saheb has committed suicide by hanging at her residence in Jayanagar in Mysore on 27th June, 2013, as her lover had refused to marry her. Chaitra was in love with Prem. Ashokpuram police have registered unnatural death case and are conducting investigation. So, far no one has been arrested.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X