ಯಡಿಯೂರಪ್ಪ ಬಿಜೆಪಿಗೆ ವಾಪಸ್: ಇಂದು ಅಧಿಕೃತ ಚಾಲನೆ

ಬಿಜೆಪಿ ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಹಿರಿಯ ನಾಯಕರು ಸಮಾಲೋಚನೆ ನಡೆಸಲಿದ್ದಾರೆ. ಇದು ರಾಜ್ಯಮಟ್ಟದ ಚರ್ಚೆಯಾಗಿದ್ದು, ಯಡಿಯೂರಪ್ಪ ವಾಪಸಾತಿಗೆ ಒಮ್ಮತ ದೊರೆತ ದೊರೆತ ನಂತರ ಜೋಶಿ ಅವರು ಅದನ್ನು ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಒಪ್ಪಿಸಲಿದ್ದಾರೆ.
ಇಂಟರೆಸ್ಟಿಂಗ್ ಅಂದರೆ ಯಡಿಯೂರಪ್ಪ ಅವರಿಂದ ದೂರವಾದ ಬಳಿಕ ಅನಂತ ಕುಮಾರ್ ಅವರ ಪಾಳಯದಲ್ಲಿ ಗಾಢವಾಗಿ ಕಾಣಿಸಿಕೊಂಡಿದ್ದ ಸದಾನಂದರು ಈಗ ಯಡಿಯೂರಪ್ಪ ಅವರ ತೆಕ್ಕೆಗೆ ವಾಪಸಾಗಿದ್ದಾರೆ. ಅನಂತ ಕುಮಾರಗಿಂತ ಯಡಿಯೂರಪ್ಪ ಅವರೇ ಬೆಟರ್ರು ಎಂಬುದು ಸದಾನಂದರಿಗೆ ಅನುಭವಕ್ಕೆ ಬಂದಿದೆ. ಹಾಗಾಗಿ ಅವರೇ ಈಗ ಯಡಿಯೂರಪ್ಪ ಬಿಜೆಪಿ ವಾಪಸಾತಿ ಸಂಧಾನ ತಂಡದ ನೇತೃತ್ವ ವಹಿಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಶಾಸಕರಾದ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಕೆಜಿ ಬೋಪಯ್ಯ, ಗೋ ಮಧುಸೂಧನ್, ಮುರುಗೇಶ್ ನಿರಾಣಿ, ಅರವಿಂದ ಲಿಂಬಾವಳಿ ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರಬೇಕು ಎಂಬುದು ನಮ್ಮೆಲ್ಲರ ಆಶಯ. ಜೋಶಿ ಜತೆ ಪ್ರಾಥಮಿಕ ಚರ್ಚೆ ನಂತರ ಈ ಪ್ರಕ್ರಿಯೆಗೆ ಸ್ಪಷ್ಟ ರೂಪ ಬರಲಿದೆ ಎಂದು ಉಮೇಶ್ ಕತ್ತಿ ಆಶಿಸಿದ್ದಾರೆ.
ಬಿಎಸ್ವೈ ತಿರಸ್ಕರಿಸಿಲ್ಲ: ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಬಿಜೆಪಿ ಮುಖಂಡರು ಈಗಾಗಲೇ ಅವರಿಗೆ ಸಂದೇಶ ರವಾನಿಸಿದ್ದಾರೆ. ಇದಕ್ಕೆ ಅವರು ಸ್ಪಷ್ಟ ಒಪ್ಪಿಗೆ ಸೂಚಿಸದೇ ಇದ್ದರೂ ಬಿಜೆಪಿಗೆ ಸೇರುವುದೇ ಇಲ್ಲ ಎಂದು ನಿರಾಕರಿಸಿಯೂ ಇಲ್ಲ. ಹೀಗಾಗಿ ಬಿಜೆಪಿ ಮುಖಂಡರು ತಮ್ಮ ಪ್ರಯತ್ನ ತೀವ್ರಗೊಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications