ಜಲಾಶಯಗಳ ಶುಕ್ರವಾರದ ನೀರಿನ ಮಟ್ಟ!
ಬೆಂಗಳೂರು, ಜೂ.28 : ರಾಜ್ಯದಲ್ಲಿ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದೆ. ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತದಲ್ಲಿವೆ. ಶುಕ್ರವಾರವೂ ಮಳೆಯ ಅರ್ಭಟ ಸ್ಪಲ್ಟ ಮಟ್ಟಿಗೆ ತಗ್ಗಿದೆ.
ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳಿಂದ ಸುರಿದ ಮಳೆ ಗುರುವಾರ ಕಡಿಮೆಯಾಗಿತ್ತು. ಇದರಿಂದ ಜನಜೀವನ ಯಥಾಸ್ಥಿತಿಗೆ ಮರಳುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲೂ ಗುರುವಾರ ಮಳೆ ಕೊಂಚ ಬಿಡುವು ತೆಗೆದುಕೊಂಡಿದೆ.
ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಹಾರಂಗಿ ಜಲಾಶಯ ಭರ್ತಿಗೆ 10 ಅಡಿ ನೀರು ಬೇಕಾಗಿದೆ. ಕೆಆರ್ಎಸ್ ಜಲಾಶಯಕ್ಕೆ ಎರಡು ದಿನದಲ್ಲಿ ಆರು ಅಡಿ ನೀರು ಹರಿದು ಬಂದಿದೆ.
ಹಾರಂಗಿ ಜಲಾಶಯ : ಹಾರಂಗಿ ಜಲಾಶಯದ ಒಳಹರಿವು 13,831 ಕ್ಯುಸೆಕ್ ಆಗಿದ್ದು, ಜಲಾಶಯದಲ್ಲಿ 2,849 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಭರ್ತಿಗೆ 10 ಅಡಿ ನೀರು ಬೇಕಾಗಿದೆ.

ಕಬಿನಿಯೂ ಭರ್ತಿ : ಕಳೆದ ನಾಲ್ಕು ದಿನಗಳಿಂದ ಕಬಿನಿ ಜಲಾಶಯಕ್ಕೆ 35,000 ಕ್ಯುಸೆಕ್ ಒಳಹರಿವು ಹರಿದು ಬರುತ್ತಿದ್ದು, ಜಲಾಶಯದಲ್ಲಿ 2,280 ಅಡಿ ನೀರು ಸಂಗ್ರಹಣೆಯಾಗಿದೆ. ಕಬಿನಿ ಜಲಾಶಯದ ಗರಿಷ್ಠ ಮಟ್ಟ 2,284 ಅಡಿಗಳಾಗಿದ್ದು, ಭರ್ತಿಗೆ ಕೇವಲ ನಾಲ್ಕ ಅಡಿ ನೀರಿನ ಅಗತ್ಯವಿದೆ.
ನಿಧಾನವಾಗಿ ಭರ್ತಿಯಾಗುತ್ತಿದೆ ಕೆಆರ್ಎಸ್ : ಕಾವೇರಿ ಪಾತ್ರದ ಪ್ರಮುಖ ಜಲಾಶಯ ಕೆಆರ್ಎಸ್ ನಿಧಾನವಾಗಿ ತುಂಬುತ್ತಿದೆ. ಗುರುವಾರ ಡ್ಯಾಂನಲ್ಲಿ 85.90 ಅಡಿ ನೀರು ಸಂಗ್ರಹವಾಗಿತ್ತು. 21,147 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದೆ.
ಲಿಂಗನಮಕ್ಕಿಯೂ ಎಷ್ಟು ನೀರಿದೆ : ಮಲೆನಾಡಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಗೆ ಲಿಂಗನಮಕ್ಕಿ ಜಲಾಶಯಕ್ಕೆ ಎರಡು ದಿನದಲ್ಲಿ ನಾಲ್ಕು ಅಡಿ ನೀರು ಹರಿದು ಬಂದಿದೆ. ಡ್ಯಾಂನಲ್ಲಿ 1,765.70 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 1,819 ಅಡಿ.
ಜಲಾಶಯದ ಸ್ಥಿತಿಗತಿ
ಜಲಾಶಯ ಇಂದಿನ ಮಟ್ಟ ಪೂರ್ಣಮಟ್ಟ
ತುಂಗಭದ್ರಾ 1592.25 ಅಡಿ 1633 ಅಡಿ
ಆಲಮಟ್ಟಿ 510 ಮೀ 519.60 ಮೀ
ಹೇಮಾವತಿ 2,883 ಅಡಿ 2,992 ಅಡಿ
ಭದ್ರಾ 132.50 ಅಡಿ 186.00 ಅಡಿ
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications