ಹಾರಂಗಿ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಸಂತಸ!
ಕೊಡಗು, ಜು.1 : ವರುಣ ದೇವನ ಕೃಪೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೊಡಗು ಜಿಲ್ಲೆಯ ಹಾರಂಗಿ ಡ್ಯಾಂ ಭರ್ತಿಯಾಗಿದೆ. ಭಾನುವಾರ ರಾತ್ರಿಯ ವೇಳೆಗೆ ಜಲಾಶಯದ ನೀರಿನ ಮಟ್ಟ 2856.73 ಅಡಿಗಳಿಗೆ ತಲುಪಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿ. ಆದರೆ, ಭದ್ರತಾದೃಷ್ಠಿಯಿಂದ 2 ಅಡಿ ಬಾಕಿ ಇರುವಾಗಲೇ ಹೆಚ್ಚುವರಿ ನೀರನ್ನು ಹೊರಬಿಡಲಾಗುವುದು ಎಂದು ಜಲಾಶಯದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪಾಲನೇತ್ರಯ್ಯ ಹೇಳಿದ್ದಾರೆ.
ಸೋಮವಾರದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುವುದು. ಆದ್ದರಿಂದ ಜಲಾಶಯದ ಕೆಲಭಾಗದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಲಾಶಯಕ್ಕೆ 6507 ಕ್ಯುಸೆಕ್ ಒಳಹರಿವು ಹರಿದು ಬರುತ್ತಿದೆ ಎಂದು ಪಾಲನೇತ್ರಯ್ಯ ಹೇಳಿದ್ದಾರೆ.

ಸಿಎಂಗೂ ಮೊದಲು ಬಾಗಿನ : ಕಬಿನಿ ಜಲಾಶಯವೂ ಅವಧಿಗೂ ಮೊದಲೇ ಭರ್ತಿಯಾಗಿದ್ದು, ಮುಖ್ಯ ಮಂತ್ರಿಗಳಿಗಿಂತ ಮೊದಲು, ರೈತ ಮುಖಂಡರು ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ. ಭಾನುವಾರ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಬಾಗಿನ ಅರ್ಪಿಸಿದರು.
ಕಬಿನಿ ಜಲಾಶಯದ ಗರಿಷ್ಠ ಮಟ್ಟ 84 ಅಡಿ. ಭಾನುವಾರ ಜಲಾಶಯದಲ್ಲಿ 79.50 ಅಡಿಗಳಷ್ಟು ನೀರು ಸಂಗ್ರಹಣೆಯಾಗಿತ್ತು. 6,300 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಜಲಾಶಯದ ಹೊರ ಹರಿವನ್ನು ಸ್ಥಗಿತಗೊಳಿಸಲಾಗಿದೆ.
ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಕಂದಾಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮುಂತಾದವರು, ಜು.6ರಂದು ಬಾಗಿನ ಅರ್ಪಿಸಲಿದ್ದಾರೆ.
ರಾಜ್ಯದ ಇತರ ಜಲಾಶಯಗಳ ನೀರಿನ ಮಟ್ಟ
ಜಲಾಶಯ ಗರಿಷ್ಠ ಮಟ್ಟ ಇಂದಿನ ಮಟ್ಟ
ಕೆಆರ್ಎಸ್ 124.80 ಅಡಿ 90.90 ಅಡಿ
ಆಲಮಟ್ಟಿ 519.60 ಮೀ 511.05 ಮೀ
ಕಬಿನಿ 84 ಅಡಿ 79.50 ಅಡಿ
ಲಿಂಗನಮಕ್ಕಿ 1819 ಅಡಿ 1767.00 ಅಡಿ
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral











Click it and Unblock the Notifications