ಹಾರಂಗಿ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಸಂತಸ!
ಕೊಡಗು, ಜು.1 : ವರುಣ ದೇವನ ಕೃಪೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೊಡಗು ಜಿಲ್ಲೆಯ ಹಾರಂಗಿ ಡ್ಯಾಂ ಭರ್ತಿಯಾಗಿದೆ. ಭಾನುವಾರ ರಾತ್ರಿಯ ವೇಳೆಗೆ ಜಲಾಶಯದ ನೀರಿನ ಮಟ್ಟ 2856.73 ಅಡಿಗಳಿಗೆ ತಲುಪಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿ. ಆದರೆ, ಭದ್ರತಾದೃಷ್ಠಿಯಿಂದ 2 ಅಡಿ ಬಾಕಿ ಇರುವಾಗಲೇ ಹೆಚ್ಚುವರಿ ನೀರನ್ನು ಹೊರಬಿಡಲಾಗುವುದು ಎಂದು ಜಲಾಶಯದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪಾಲನೇತ್ರಯ್ಯ ಹೇಳಿದ್ದಾರೆ.
ಸೋಮವಾರದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುವುದು. ಆದ್ದರಿಂದ ಜಲಾಶಯದ ಕೆಲಭಾಗದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಲಾಶಯಕ್ಕೆ 6507 ಕ್ಯುಸೆಕ್ ಒಳಹರಿವು ಹರಿದು ಬರುತ್ತಿದೆ ಎಂದು ಪಾಲನೇತ್ರಯ್ಯ ಹೇಳಿದ್ದಾರೆ.

ಸಿಎಂಗೂ ಮೊದಲು ಬಾಗಿನ : ಕಬಿನಿ ಜಲಾಶಯವೂ ಅವಧಿಗೂ ಮೊದಲೇ ಭರ್ತಿಯಾಗಿದ್ದು, ಮುಖ್ಯ ಮಂತ್ರಿಗಳಿಗಿಂತ ಮೊದಲು, ರೈತ ಮುಖಂಡರು ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ. ಭಾನುವಾರ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಬಾಗಿನ ಅರ್ಪಿಸಿದರು.
ಕಬಿನಿ ಜಲಾಶಯದ ಗರಿಷ್ಠ ಮಟ್ಟ 84 ಅಡಿ. ಭಾನುವಾರ ಜಲಾಶಯದಲ್ಲಿ 79.50 ಅಡಿಗಳಷ್ಟು ನೀರು ಸಂಗ್ರಹಣೆಯಾಗಿತ್ತು. 6,300 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಜಲಾಶಯದ ಹೊರ ಹರಿವನ್ನು ಸ್ಥಗಿತಗೊಳಿಸಲಾಗಿದೆ.
ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಕಂದಾಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮುಂತಾದವರು, ಜು.6ರಂದು ಬಾಗಿನ ಅರ್ಪಿಸಲಿದ್ದಾರೆ.
ರಾಜ್ಯದ ಇತರ ಜಲಾಶಯಗಳ ನೀರಿನ ಮಟ್ಟ
ಜಲಾಶಯ ಗರಿಷ್ಠ ಮಟ್ಟ ಇಂದಿನ ಮಟ್ಟ
ಕೆಆರ್ಎಸ್ 124.80 ಅಡಿ 90.90 ಅಡಿ
ಆಲಮಟ್ಟಿ 519.60 ಮೀ 511.05 ಮೀ
ಕಬಿನಿ 84 ಅಡಿ 79.50 ಅಡಿ
ಲಿಂಗನಮಕ್ಕಿ 1819 ಅಡಿ 1767.00 ಅಡಿ
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications