ಮಣಿಪಾಲ್ ರೇಪ್: ಹೇಳಿಕೆಗೆ ಸಿದ್ಧವೆಂದ ವಿದ್ಯಾರ್ಥಿನಿ

ಐಜಿಪಿ (ಪಶ್ಚಿಮ ವಲಯ) ಪ್ರತಾಪ್ ರೆಡ್ಡಿ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದು ವಿದ್ಯಾರ್ಥಿನಿಯ ಕೋರಿಕೆಯಂತೆ ಗೌಪ್ಯತೆ ಕಾಪಾಡಲಾಗುವುದು. ಹಾಗಾಗಿ ಆಕೆ ಹೇಳಿಕೆ ನೀಡುತ್ತಿದ್ದಂತೆ ಆರೋಪಪಟ್ಟಿಯನ್ನು ಅಂತಿಮಗೊಳಿಸಿ, ನ್ಯಾಯಾಲಯಕ್ಕೆ ಶೀಘ್ರವೇ ಸಲ್ಲಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ಸದಾನಂದ ತಿಪ್ಪಣ್ಣನವರ್ ತನಿಖಾಧಿಕಾರಿಯಾಗಿದ್ದು, ಪ್ರಕರಣದಲ್ಲಿ ನಾವೆಲ್ಲರೂ ಅವರಿಗೆ ನೆರವಾಗುವುದಾಗಿಯೂ ಐಜಿಪಿ ಪ್ರತಾಪ್ ತಿಳಿಸಿದ್ದಾರೆ.
ಇನ್ನೂ ಇಬ್ಬರ ಬಂಧನ:
ಕೆಎಂಸಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿರುವ ಮಣಿಪಾಲ ಪೊಲೀಸರು ಪ್ರಕರಣದ ಸಂಬಂಧ ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.
ಬಾಲಚಂದ್ರ ಮತ್ತು ಹರೀಂದ್ರ ಇಂದು ಬಂಧನಕ್ಕೊಳಗಾದ ಇನ್ನಿಬ್ಬರು. ಬಾಲಚಂದ್ರ, ಪ್ರಮುಖ ಆರೋಪಿ ಯೋಗೀಶನ ಸೋದರನಾಗಿದ್ದರೆ ಹರೀಂದ್ರ, ಮತ್ತೊಬ್ಬ ಪ್ರಮುಖ ಆರೋಪಿ ಹರಿಪ್ರಸಾದನ ಸೋದರ. ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸಾಕ್ಷ್ಯ ನಾಶ ಮಾಡುತ್ತಾರೆ ಎಂಬ ಕಾರಣದಿಂದಾಗಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಣಿಪಾಲ ಪೊಲೀಸರು ಇಬ್ಬರನ್ನೂ ಈಗ ವಿಚಾರಣೆ ನಡೆಸುತ್ತಿದ್ದಾರೆ. ಅಪರಾಧ ಕೃತ್ಯಕ್ಕೆ ಬಳಸಲಾದ ಆಟೋ ರಿಕ್ಷಾದಲ್ಲಿ ಸಾಕ್ಷ್ಯ ನಾಶ ಪಡಿಸುವ ಮೂಲಕ ಪ್ರಧಾನ ಆರೋಪಿಗಳಿಗೆ ನೆರವಾಗುತ್ತಿದ್ದೆವು ಎಂದು ಬಂಧಿತರಿಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಐಜಿಪಿ ಪ್ರತಾಪ್ ಹೇಳಿದ್ದಾರೆ. ಮಂಗಳೂರು ಮತ್ತು ಬೆಂಗಳೂರಿನಿಂದ ವಿಧಿವಿಜ್ಞಾನ ತಜ್ಞರು ಬಂದಿದ್ದು ಪ್ರಕರಣದ ತನಿಖೆಯನ್ನು ನೆರವಾಗಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications