ಕೋಲಾರ : ಮೂರು ಗಂಟೆಯಲ್ಲಿ ಮೂವರ ಕೊಲೆ!

ಮಂಗಳವಾರ ಬೆಳಗ್ಗೆ 10.30 ರ ಸುಮಾರಿಗೆ ಕೋಲಾರದ ಜಮಾಲ್ ನಗರದಲ್ಲಿ ಅಜ್ಮಲ್ (36) ಅವರನ್ನು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹಳೆಯ ದ್ವೇಷವೇ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಬಂಗಾರಪೇಟೆ ತಾಲೂಕಿನಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಅಜ್ಮಲ್, ಅವರನ್ನು ರಾತ್ರಿ ಅಲ್ಲಿಯೇ ಕೊಲೆ ಮಾಡಿ. ಕೋಲಾರದ ಮನೆಯ ಬಳಿ ತಂದು ಹಾಕಿದ್ದಾರೆ ಎಂದು ಅಜ್ಮಲ್ ತಂದೆ ಹೇಳಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬಸ್ ನಿಲ್ದಾಣದಲ್ಲಿ ಎರಡು ಕೊಲೆ : ಬೆಳಗ್ಗೆ 7 ಗಂಟೆಗೆ ಬಂಗಾರ ಪೇಟೆ ಬಸ್ ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳನ್ನು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ಪ್ರತಿದಿನ ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದರು.
ತಲೆಯ ಮೇಲೆ ಕಲ್ಲು ಎತ್ತಿಹಾಕಿರುವುದರಿಂದ ಮೃತ ಒಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮತ್ತೊಬ್ಬ ವ್ಯಕ್ತಿಯನ್ನು ಬೂದಿಕೋಟೆ ನಿವಾಸಿ ಸತೀಶ್ (25)ಎಂದು ಗುರುತಿಸಲಾಗಿದೆ. ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಾಲ್ಕು ದಿನದಲ್ಲಿ ಮೂರು ಕೊಲೆ : ಬಸ್ ನಿಲ್ದಾಣದ ಸಮೀಪ ಶುಕ್ರವಾರ ವ್ಯಕ್ತಿಯೊಬ್ಬರನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಮಂಗಳವಾರ ನಡೆದ ಕೊಲೆಗೂ ಹಿಂದಿನ ಕೊಲೆಗೂ ಸಾಮ್ಯತೆ ಕಂಡು ಬಂದಿದ್ದು, ಒಂದೇ ಗುಂಪು ಈ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸರಿಗೆ ಸವಾಲು : ಬಂಗಾಪೇಟೆ ಪಟ್ಟಣದಲ್ಲಿ ಒಂದೇ ವಾರದ ಅಂತರದಲ್ಲಿ ಮೂರು ಕೊಲೆಗಳು ನಡೆದಿದೆ. ಆರೋಪಿಗಳನ್ನು ಹಿಡಿಯುವುದು ಪೊಲೀಸರಿಗೆ ಸವಾಲಾಗಿದೆ. ಬಂಗಾರಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸರು ವಿಶೇಷ ತಂಡ ರಚಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications