ನನ್ನ ಓಲೈಕೆಗೆ ಯಾರೂ ಪ್ರಯತ್ನಿಸಬೇಡಿ: ದಿಗ್ವಿಜಯ್ ಕಿವಿಮಾತು

ನನ್ನ ಓಲೈಕೆಗೆ ಯಾರೂ ಪ್ರಯತ್ನಿಸಬೇಡಿ: ನನ್ನ ಓಲೈಕೆಗೆ ಯಾರೂ ಪ್ರಯತ್ನಿಸಬೇಡಿ. ಅಂತಹ ವಶೀಕರಣಕ್ಕೆಲ್ಲ ನಾನು ಒಳಗಾಗುವುದಿಲ್ಲ ಎಂದು ಮುಖಂಡರಿಗೆ ಕಿವಿಮಾತು ಹೇಳಿದ ದಿಗ್ವಿಜಯ್ ಅವರು ಪ್ರತಿ ಜಿಲ್ಲೆಯಲ್ಲಿ ಸಮನ್ವಯ ಸಮಿತಿ ರಚಿಸಿ. ಬೇರುಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಿ ಎಂದು ತಾಕೀತು ಮಾಡಿದ್ದಾರೆ.
ಈ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳು ಹಾಗೂ ಬ್ಲಾಕ್ ಘಟಕಗಳ ಅಧ್ಯಕ್ಷರು ಸೇರಿ ಒಟ್ಟು 1200 ಮಂದಿ ಆಹ್ವಾನಿತರು ಪಾಲ್ಗೊಂಡಿದ್ದಾರೆ. ಸರ್ವ ಸದಸ್ಯರ ಸಭೆ ನಂತರ ಮಧ್ಯಾಹ್ನ ಪದಾಧಿಕಾರಿಗಳ ಸಭೆ ನಡೆಯಲಿದೆ. ಲೋಕಸಭಾ ಚುನಾವಣೆಯ ಸಿದ್ಧತೆ ಚರ್ಚೆಯ ಜತೆಗೆ ರಾಜ್ಯದಲ್ಲಿ ತಮಗೆ ಇನ್ನೂ ಅಧಿಕಾರ ಪ್ರಾಪ್ತಿಯಾಗದಿರುವ ಬಗ್ಗೆ ಅವಕಾಶ ವಂಚಿತ ಕಾಂಗ್ರೆಸ್ ನಾಯಕರು ದಿಗ್ವಿಜಯ್ ಸಿಂಗ್ ಅವರೆದುರು ತಮ್ಮ ಅಳಲನ್ನು ತೋಡಿಕೊಳ್ಳುವ ಸಾಧ್ಯತೆಗಳಿವೆ.
ಹೀಗಾಗಿ ಈ ಎರಡು ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಮೂಲ ಕಾಂಗ್ರೆಸ್ಸಿಗರ ನಿರ್ಲಕ್ಷ್ಯ, ನಿಗಮ-ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಆರಂಭವಾಗದಿರುವುದು, ಸರ್ಕಾರ ಹಾಗೂ ಪಕ್ಷದ ನಡುವಿನ ಸಮನ್ವಯದ ಕೊರತೆ, ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಚಿವರ ಧೋರಣೆ, ಹಿರಿಯ ಶಾಸಕರ ಮಾತುಗಳಿಗೆ ಬೆಲೆ ನೀಡದ ಕಿರಿಯ ಸಚಿವರ ನಡವಳಿಕೆ ಮೊದಲಾದ ವಿಷಯಗಳು ರಾಜ್ಯ ಉಸ್ತುವಾರಿ ದಿಗ್ವಿಜಯ್ ಅವರ ಮುಂದೆ ಪ್ರಸ್ತಾಪವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸದಸ್ಯರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡಿಸ್, ರೆಹಮಾನ್ ಖಾನ್, ವೀರಪ್ಪ ಮೊಯ್ಲಿ ಪಾಲ್ಗೊಳ್ಳುವರು. ಪೂರ್ವನಿಗದಿತ ಕಾರ್ಯಕ್ರಮದಿಂದಾಗಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಅವರು ಸಭೆಗೆ ಹಾಜರಾಗಿಲ್ಲ.
ಸಿಎಂ ಸಿದ್ದು -ಡಿಕೆಶಿ ಭೇಟಿ:
ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಸಚಿವ ಸ್ಥಾನ ವಂಚಿತ ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡುವ ಮುಂಚೆ ಉಭಯ ನಾಯಕರು ಏಕಾಂತದಲ್ಲಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡಲಾರೆ:
ಮತ್ತೊಂದು ಬೆಳವಣಿಗೆಯಲ್ಲಿ ತಾವು ಎಂದೂ ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ. ನನಗೆ ಯೋಗ್ಯತೆ ಇದ್ದರೆ ನನ್ನ ಮನೆ ಬಾಗಿಲಿಗೆ ಸಚಿವ ಸ್ಥಾನ ಹುಡುಕಿಕೊಂಡು ಬರುತ್ತದೆ. ನಾನಾಗಿ ಹೋಗಿ ಕೇಳಿಕೊಳ್ಳಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಶಾಸಕ ಕೆಆರ್ ರಮೇಶ್ ಕುಮಾರ್ ಅವರು ಕೋಲಾರದಲ್ಲಿ ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications