ಸಿಮ್ ಕಾರ್ಡ್ ಬೇಕಾದ್ರೆ ಬೆರಳಚ್ಚು ಕೊಡ್ಬೇಕಾ?
ನವದೆಹಲಿ, ಜು.3: ಕಾಲೇಜು ಐಡಿ ಕಾರ್ಡ್, ಅಡ್ರೆಸ್ ಫ್ರೂಫ್ ಕೊಟ್ಟು ಮೊಬೈಲ್ ಸಿಮ್ ಕಾರ್ಡ್ ಕೊಳ್ಳುತ್ತಿದ್ದ ಕಾಲ ಈಗಿಲ್ಲ. ಮೊಬೈಲ್ ಸಿಮ್ ಕಾರ್ಡ್ ಕೊಳ್ಳಬೇಕಾದರೆ ಸಾಕಷ್ಟು ಸಾಹಸ ಪಡಬೇಕಾಗುತ್ತದೆ.
ಇನ್ಮುಂದೆ, ಮೊಬೈಲ್ ಗೆ ಸಿಮ್ ಕಾರ್ಡ್ ಕೊಳ್ಳಬೇಕಾದರೆ ಬೆರಳಚ್ಚು (ಫಿಂಗರ್ ಪ್ರಿಂಟ್ಸ್) ನೀಡಬೇಕಾಗಬಹುದು. ಕೇಂದ್ರ ಗೃಹ ಇಲಾಖೆ ಈ ಸಂಬಂಧ ದೂರ ಸಂಪರ್ಕ ಇಲಾಖೆಗೆ ಪತ್ರ ಬರೆದಿದ್ದು, ಸಿಮ್ ಕಾರ್ಡ್ ಕೊಳ್ಳುವವರಿಗೆ ಕಡ್ಡಾಯವಾಗಿ ಬೆರಳಚ್ಚು ಪಡೆಯಲು ನಿಯಮ ರೂಪಿಸುವಂತೆ ಸೂಚನೆ ನೀಡಿದೆ.
ಆಧಾರ್ ಕಾರ್ಡ್ ಸೇರಿದಂತೆ ಯಾವುದಾದರೊಂದು ಗುರುತಿನ ಚೀಟಿ ನೀಡಿ ಸಿಮ್ ಕಾರ್ಡ್ ಕೊಳ್ಳುವ ನಿಯಮ ರೂಪಿಸಿದ ನಂತರ ಫಿಂಗರ್ ಪ್ರಿಂಟ್ಸ್ ನಿಯಮಕ್ಕೆ ಗೃಹ ಸಚಿವಾಲಯ ಮುಂದಾಗಿದೆ. ಆಧಾರ್ ಕಾರ್ಡ್ ಚೀಟಿ ಉಪಯೋಗಕ್ಕಿಂತ ಹೆಚ್ಚಾಗಿ ದುರುಪಯೋಗವಾಗುತ್ತಿದ್ದೇ ಹೆಚ್ಚು ಎಂಬುದು ಸೇವಾದಾರ ಸಂಸ್ಥೆಗಳ ದೂರು.

ನಕಲಿ ಗುರುತಿನ ಚೀಟಿ ನೀಡಿ ಸಿಮ್ ಕಾರ್ಡ್ ಕೊಳ್ಳುತ್ತಿದ್ದವರ ಸಂಖ್ಯೆಯೇ ಹೆಚ್ಚಾಗುತ್ತಿತ್ತು. ಹೀಗಾಗಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಗೃಹ ಇಲಾಖೆ ಸಿಮ್ ಕಾರ್ಡ್ ಕೊಳ್ಳುವ ಗ್ರಾಹಕರು ಕಡ್ಡಾಯವಾಗಿ ಬೆರಳಚ್ಚು ನೀಡಲು ನಿಯಮವನ್ನು ರೂಪಿಸಿದೆ.
ಉಗ್ರರ ಭೀತಿ: ಗೃಹ ಇಲಾಖೆಯು ಈಗಾಗಲೇ ದೂರ ಸಂಪರ್ಕ ಮತ್ತು ಖಾಸಗಿ ಷೇರುದಾರರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಇದು ಕಾನೂನು ರೂಪದಲ್ಲಿ ಜಾರಿಗೆ ಬರಲಿದೆ ಎಂದು ಅಧಿಕಾರಿಯೊಬ್ಬರು ಬಹಿರಂಗ ಪಡಿಸಿದ್ದಾರೆ.
ಇತ್ತೀಚೆಗೆ ದೇಶದಲ್ಲಿ ಸಂಭವಿಸಿದ ಭಯೋತ್ಪಾದಕ ಘಟನೆಗಳಲ್ಲಿ ಅನೇಕ ಉಗ್ರರು ಬೇರೊಬ್ಬರ ಹೆಸರಿನಲ್ಲಿ ಸಿಮ್ ಕಾರ್ಡ್ ಕಳುಹಿಸಿ ದೇಶ-ವಿದೇಶಗಳಿಗೆ ಕರೆ ಮಾಡಿದ್ದಾರೆ.
ಮುಂಬೈ ಮೇಲೆ ನಡೆದ ದಾಳಿ, ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ಇತರೆ ಭಾಗಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಉಗ್ರರು ಬೇರೆ ಬೇರೆ ಹೆಸರಿನಲ್ಲಿ ಸಿಮ್ ಕಾರ್ಡ್ ಗಳನ್ನು ಖರೀದಿಸಿ ಬಳಸಿಕೊಂಡಿದ್ದರು.
ಇದು ತನಿಖಾಧಿಕಾರಿಗಳಿಗೆ ನಿಜವಾದ ಅಪರಾಧಿಗಳನ್ನು ಹಿಡಿಯಲು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಇನ್ನು ಮುಂದೆ ಸಿಮ್ ಕಾರ್ಡ್ ಕೊಳ್ಳುವವರು ಕಡ್ಡಾಯವಾಗಿ ಬೆರಳಚ್ಚು ನೀಡಬೇಕಾಗುತ್ತದೆ.
ಪದೇ ಪದೇ ಸಿಮ್ ಬದಲಾಯಿಸುವುದು, ಅನಗತ್ಯ ಸಿಮ್ ಖರೀದಿ, ನಕಲಿ ದಾಖಲೆ ಒದಗಿಸಿದ ಗ್ರಾಹಕರ ಪಟ್ಟಿಯನ್ನು ಸಂಗಹಿಸಿ ನ್ಯಾಷನಲ್ ಇಂಟಲೆಜನ್ಸ್ ಗ್ರಿಡ್(NATGRID) ಗೆ ಸೇರಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ಬಯೋಮೆಟ್ರಿಕ್ ದಾಖಲೆಗಳನ್ನು ಸೇರಿಸಲು ಗೃಹ ಇಲಾಖೆ ಯೋಜಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications