ಡಿಸಿಎಂ ಹುದ್ದೆ ಇಲ್ಲ, ದಿಗ್ವಿಜಯ ಸಿಂಗ್ ಘೋಷಣೆ!

ಬೆಂಗಳೂರಿನಲ್ಲಿ ಪಕ್ಷದ ಶಾಸಕರ ಜೊತೆಗಿನ ಉಪಹಾರಕೂಟದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿಗ್ವಿಜಯ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರಿಗೆ ಡಿಸಿಎಂ ಪದವಿ ನೀಡುವ ಯಾವುದೇ ಪ್ರಸ್ತಾಪವಿಲ್ಲ ಎಂದರು.
ಮಂಗಳವಾರ ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಪರಮೇಶ್ವರ್ ಅವರ ಶ್ರಮ ಮುಖ್ಯವಾದುದು. ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ದಿಗ್ವಿಜಯ ಸಿಂಗ್ ಅವರಿಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಟಿಯಾಗಲಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿತ್ತು. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ದಿಗ್ವಿಜಯ ಸಿಂಗ್, ಮುಂದಿನ ಲೋಕಸಭೆ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಹೇಳಿದ್ದಾರೆ.
ಪಕ್ಷ ಪರಮೇಶ್ವರ್ ಅವರಿಗೆ ಬೇರೆ ಹುದ್ದೆ ನೀಡುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತಂದ ಪರಮೇಶ್ವರ್ ಶ್ರಮವನ್ನು ಪಕ್ಷ ಮರೆತಿಲ್ಲ. ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತದೆ ಎಂದು ಸಿಂಗ್ ತಿಳಿಸಿದರು.
25 ಸ್ಥಾನ ಗೆಲ್ಲಬೇಕು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ರಾಜ್ಯದಲ್ಲಿ 25 ಸ್ಥಾನಗಳನ್ನು ಗೆಲ್ಲುವುದು ಗುರಿಯಾಗಿದೆ. ಎಲ್ಲಾ ನಾಯಕರು ಒಗ್ಗಟ್ಟಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಚುನಾವಣೆಯ ಗೆಲುವಿಗೆ ಶ್ರಮಿಸಬೇಕು ಎಂದು ಸಿಂಗ್ ಕರೆ ನೀಡಿದರು.
ಎಐಸಿಸಿಯಿಂದ ಪ್ರತಿ ಲೋಕಸಭೆ ಕ್ಷೇತ್ರಕ್ಕೆ ನೇಮಿಸಿರುವ ವೀಕ್ಷಕರು ಮುಂದಿನ ವಾರದಿಂದ ಕ್ಷೇತ್ರಗಳಿಗೆ ತೆರಳಿ ಜನರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿದೆ ಎಂದು ಸಿಂಗ್ ಹೇಳಿದರು.
ನಿಷ್ಠಾವಂತರಿಗೆ ನಿಗಮ-ಮಂಡಳಿ : ಬಜೆಟ್ ಅಧಿವೇಶನ ಮುಗಿದ ಬಳಿಕ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವಂತೆ ಸಿಂಗ್ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. (ಕಾಂಗ್ರೆಸ್ ನಾಯಕರಿಗೆ ಸಿಂಗ್ ನೀತಿ ಪಾಠ)
ಎರಡು ಹುದ್ದೆಯೂ ಇಲ್ಲ : ಪದಾಧಿಕಾರಿ ಹುದ್ದೆಯೊಂದಿಗೆ ಸಚಿವರಾದವರು ಪಕ್ಷದ ಜವಾಬ್ದಾರಿಯಿಂದ ತಕ್ಷಣ ಬಿಡುಗಡೆ ಹೊಂದಿ ಇತರರಿಗೆ ಅವಕಾಶ ಮಾಡಿಕೊಡಬೇಕು. ಸತತ 3 ಸಭೆಗೆ ಗೈರು ಹಾಜರಾದ ಪದಾಧಿಕಾರಿಗಳನ್ನು ವಜಾ ಮಾಡಬೇಕು ಎಂದು ಸಿಂಗ್ ಎಚ್ಚರಿಕೆ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications