ಮುಚ್ಚುವ ಭೀತಿಯಲ್ಲಿ ಚೆನ್ನೈ ಐಟಿ ಕಾರಿಡಾರ್
ಚೆನ್ನೈ, ಜು.4: ಬೆಂಗಳೂರು, ಹೈದರಾಬಾದ್ ನಡುವೆ ಚೆನ್ನೈ ಹಾಗೂ ಹೀಗೂ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ಈ ನಡುವೆ ಮೂಲ ಸೌಕರ್ಯ ಸಮಸ್ಯೆ ಉಲ್ಬಣವಾಗಿದ್ದು, ಮಹಾಬಲಿಪುರಂ ರಸ್ತೆಯಲ್ಲಿರುವ ಐಟಿ ಕಾರಿಡಾರ್ ಬಂದ್ ಆಗುವ ಭೀತಿಯಲ್ಲಿದೆ.
ಕಳೆದ ವಾರದಿಂದ ಹೀಗೊಂದು ಭೀತಿ ಇಲ್ಲಿನ ಟೆಕ್ಕಿಗಳಿಗೆ ಶುರುವಾಗಿದೆ. ಎಲ್ಲರಿಗೂ ತಿಳಿದಿರುವಂತೆ ಚೆನ್ನೈನಲ್ಲಿ ನೀರಿನ ಸಮಸ್ಯೆ ಇದ್ದೇ ಇದೆ. ಆದರೆ, ಹಣ ಚೆಲ್ಲಿ ನೀರು ತುಂಬಿಸಿಕೊಳ್ಳುತ್ತಿದ್ದ ಇಲ್ಲಿನ ಐಟಿ ಕಂಪನಿಗಳು ಯುಎಸ್, ಯುರೋಪಿನ ಫಾರ್ಚ್ಯೂನ್ 500 ಕಂಪನಿಗಳಿಗೆ ಬಿಲಿಯನ್ ಡಾಲರ್ ಗಳನ್ನು ಉತ್ಪಾದಿಸುತ್ತಿತ್ತು. ಆದರೆ, ಕಳೆದ ವಾರ ಬಹುತೇಕ ಎಲ್ಲಾ ಕಂಪನಿಗಳು ಜಲ ಸಮಸ್ಯೆಯಿಂದ ತತ್ತರಿಸಿವೆ.
ಸಮಸ್ಯೆಗೆ ಪರಿಹಾರ ಸ್ಥಳೀಯ ಮುನ್ಸಿಪಾಲಿಟಿ ಕೈಲಿ ಆಗುವುದಿಲ್ಲ ಎಂಬುದನ್ನು ಅರಿತ ಟೆಕ್ಕಿಗಳ ಸಮೂಹ ಈಗ ತಮಿಳುನಾಡು ಸರ್ಕಾರದ ಮೊರೆ ಹೋಗಲು ನಿರ್ಧರಿಸಿದೆ. ಇಲ್ಲಿನ OMR ಕಾರಿಡಾರ್ ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಕಾಗ್ನಿಜೆಂಟ್ ಹಾಗೂ ಇನ್ಫೋಸಿಸ್ ಸೇರಿದಂತೆ ಹಲವು ಕಂಪನಿಗಳು ಜಲ ಸಮಸ್ಯೆಗೆ ಸಿಲುಕಿವೆ. ನಗರಪಾಲಿಕೆ ನೀರು ಸರಬರಾಜು ಕೈ ಕೊಟ್ಟು ಎಷ್ಟು ದಿನಗಳಾಗಿದ್ದು, ಟ್ಯಾಂಕರ್ ಗಳಿಂದ ಶುದ್ಧ ನೀರು ಖರೀದಿಗೆ ಮುಂದಾಗಿದ್ದಾರೆ.
ಆದರೆ, ವಾಟರ್ ಟ್ಯಾಂಕರ್ ಸೇವೆ ನೀಡುವ ಸಂಸ್ಥೆಗಳು 52 ಗಂಟೆಗಳ ಮುಷ್ಕರ ಹೂಡಿದ್ದು, ಐಟಿ ಕಾರಿಡಾರ್ ಗೆ ಕೊಂಚ ಜಾರಾಗಿ ತಟ್ಟಿದೆ. ಐಟಿ ಕಂಪನಿಗಳಿಗೆ ಜಲ ಸಮಸ್ಯೆ ಕಂಪನಿ ಮುಚ್ಚುವಷ್ಟು ತೊಂದರೆ ಕೊಡುತ್ತಿದೆಯೆ? ಸರ್ಕಾರದ ಗಮನಕ್ಕೆ ಇನ್ನೂ ಬಂದಿಲ್ಲವೇಕೆ? ಈ ಬಗ್ಗೆ ದೊಡ್ಡ ದೊಡ್ಡ ಕಂಪನಿಗಳು ಏನು ಹೇಳುತ್ತಿವೆ? ಮುಂದೆ ಓದಿ...

ಚೆನ್ನೈನಲ್ಲಿ ನೀರಿಗೆ ಬರ
ನಾಸ್ಕಾಮ್ ವರದಿಯಂತೆ ತಮಿಳುನಾಡಿನ 3/4 ಭಾಗದಷ್ಟು ಸಾಫ್ಟ್ ವೇರ್ ರಫ್ತು 50,000 ಕೋಟಿ ರು.ಗೂ ಅಧಿಕ ಮೊತ್ತ OMR ಐಟಿ ಕಾರಿಡಾರ್ ನಿಂದಲೇ ಉತ್ಪತ್ತಿಯಾಗುತ್ತದೆ. ಟಿಸಿಎಸ್ ನಂಥ ದೊಡ್ಡ ಸಂಸ್ಥೆ ಮೂಲ ಸ್ಥಾನ ಇಲ್ಲಿದ್ದು ಕರ್ನಾಟಕದ ಸಾಫ್ಟ್ ವೇರ್ ರಫ್ತು ಪ್ರಮಾಣಕ್ಕೆ ಪೈಪೋಟಿ ನೀಡಲು ಯತ್ನ ನಡೆದಿದೆ.
ನೀರಿನ ಸಮಸ್ಯೆ ಹೀಗೆ ದಿನಕ್ಕೆ 100 ಕೋಟಿ ರು.ಗೂ ಅಧಿಕ ಮೊತ್ತವನ್ನು ಸಾಫ್ಟ್ ವೇರ್ ಕಂಪನಿಗಳು ಕಳೆದುಕೊಳ್ಳುತ್ತವೆ. ದೊಡ್ಡ ಕಂಪನಿಗಳನ್ನು ನಂಬಿಕೊಂಡಿರುವ ಇನ್ನಿತರ ಹೋಟೆಲ್, ಸಾರಿಗೆ, ಮೂಲ ಸೌಕರ್ಯ ಇನ್ನಿತರ ಸಣ್ಣ ಉದ್ಯಮಗಳಿಗೂ ಭಾರಿ ನಷ್ಟವಾಗಲಿದೆ.

ಎಚ್ಚರಿಕೆ ಕಡೆಗಣಿಸಿದ ಕಂಪನಿಗಳು
2011 ರಲ್ಲಿ Federation of Indian Chambers of Commerce and Industry ಸಮೀಕ್ಷೆ ನಡೆಸಿ ನೀರಿನ ಸಮಸ್ಯೆ ಉಲ್ಬಣವಾಗುವ ಸೂಚನೆ ನೀಡಿದ್ದರು. ಶೇ 60 ರಷ್ಟು ಕಂಪನಿಗಳು ಜಲಸಮಸ್ಯೆಯಿಂದ ನಷ್ಟವಾಗುತ್ತಿದೆ ಎಂದಿದ್ದವು.
ಪರಿಸ್ಥಿತಿ ಹೀಗೆ ಮುಂದುವರೆದರೆ 2021ರ ಹೊತ್ತಿಗೆ ಶೇ 80ರಷ್ಟು ಕಂಪನಿಗಳು ಸಂಪೂರ್ಣ ಮುಚ್ಚಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, 2013ರಲ್ಲೇ ಸಮಸ್ಯೆ ಬೃಹದಾಕಾರವಾಗಿ ಬೆಳೆದು ನಿಂತಿದೆ. ಪ್ರಮುಖ ಕಂಪನಿಗಳಾದ ಇನ್ಪೋಸಿಸ್, ಟಿಸಿಎಸ್ ಹಾಗೂ ಕಾಗ್ನಿಜೆಂಟ್ ಈ ಎಚ್ಚರಿಕೆ ಬಗ್ಗೆ ಹೆಚ್ಚಿನ ನಿಗಾವಹಿಸಿರಲಿಲ್ಲ. ಸರ್ಕಾರದ ಕೆಲಸ ಎಂದು ಸುಮ್ಮನಾಗಿದ್ದು ಮುಳುವಾಗುತ್ತಿದೆ.

ನಿಲೇಕಣಿ ಹೇಳಿಕೆ
ಮಹಾಬಲಿಪುರಂ ರಸ್ತೆ ಕಾರಿಡಾರ್ ನ ಕೈಗಾರಿಕಾ ಪ್ರದೇಶದಲ್ಲಿ ಸಮಸ್ಯೆ ಉಂಟಾಗಿರುವುದು ವಾಟರ್ ಟ್ಯಾಂಕರ್ ಸರಬರಾಜು ಸಂಸ್ಥೆ ಮುಷ್ಕರ ಮಾತ್ರವಲ್ಲ. ಸಮಸ್ಯೆ ಮೊದಲಿನಿಂದಲೂ ಇದ್ದೇ ಇದೆ.
ಇದು ಎಲ್ಲೆಡೆ ಸಮಸ್ಯೆ ಸರ್ಕಾರಕ್ಕಿಂತ ಸರ್ಕಾರೇತರ ಸಮಸ್ಯೆಗಳ ನೆರವಿನಿಂದ ಆದಷ್ಟು ಪರಿಹಾರ ಕಾಯಲು ಯತ್ನಿಸಲಾಗಿದೆ. ಆದರೆ, ಚೆನ್ನೈನಲ್ಲಿ ಅಂತರ್ಜಲ ಮಟ್ಟವೂ ಕುಸಿಯುತ್ತಿರುವುದು ಸಮಸ್ಯೆ ಉಲ್ಬಣಿಸಿದೆ ಎಂದು ಅರ್ಘ್ಯಂ ಎನ್ ಜಿಒನ ಮುಖ್ಯಸ್ಥೆ ಇನ್ಫೋಸಿಸ್ ಸಂಸ್ಥೆ ಷೇರುದಾರರಾಗಿರುವ ರೋಹಿಣಿ ನಿಲೇಕಣಿ ಹೇಳಿದ್ದಾರೆ.
ಮಳೆ ನೀರು ಕೊಯ್ಲು, ಜಲ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಲು ಅನೇಕ ಸಂಸ್ಥೆಗಳು ತಯಾರಿಲ್ಲ. ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂಬ ಪರಿಸ್ಥಿತಿಯಲ್ಲೇ ಕಾಲ ದೂಡಲಾಗುತ್ತಿದೆ.

ಪರಿಹಾರವೇ ಇಲ್ಲವೇ
ಟ್ಯಾಂಕರ್ ಗಳ ಮೂಲಕ ನೀರು ಬಳಕೆ ಬಿಟ್ಟರೆ ಬೇರೆ ಉಪಾಯ ಕಾಣುತ್ತಿಲ್ಲ.ಈ ಕೈಗಾರಿಕಾ ಪ್ರದೇಶದಲ್ಲಿ ಬೋರ್ ವೆಲ್ ಕೊರೆಯುವಂತಿಲ್ಲ. ನೀರಿನ ಶುದ್ಧೀಕರಣ ಘಟಕವೂ ನಿರ್ಮಾಣವಾಗಿಲ್ಲ.
ಸುಮಾರು 12,000 ಲೀಟರ್ ನಷ್ಟು ನೀರಿಗೆ 250-400 ರು ಕೊಟ್ಟು ಪಡೆದುಕೊಳ್ಳಲಾಗುತ್ತಿದೆ. ಐಟಿ ಕಾರಿಡಾರ್ ನಿಂದ ಹೆಚ್ಚಿನ ಲಾಭ ಬರುತ್ತಿದ್ದಂತೆ ಸುತ್ತ ಮುತ್ತಲ ಗ್ರಾಮಗಳಿಗೆ ನೀರು ಸರಬರಾಜು ಬಂದ್ ಆಗಿದೆ. ಗ್ರಾಮಸ್ಥರು ಹೆಚ್ಚಿನ ಬೆಲೆ ತೆರಲಾರದೆ ನೀರಿಲ್ಲದೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಒಂದಿಷ್ಟು ಅಂಕಿ ಅಂಶ
* ಬಾಟಲಿ ಹಾಗೂ ಪೊಚ್ ಗಳಲ್ಲಿ ಸುಮಾರು 1 ಕೋಟಿ ಲೀಟರ್ ಚೆನ್ನೈಗೆ ಸರಬರಾಜಾಗುತ್ತಿದೆ.
* ಬೇಸಿಗೆಯಲ್ಲಿ ಪ್ರತಿನಿತ್ಯ ಚೆನ್ನೈ ನಿವಾಸಿಗಳು 12 ಲಕ್ಷ ಲೀಟರ್ ನೀರು ಹೀರುತ್ತಾರೆ. ಬೇರೆ ಸಮಯದಲ್ಲಿ 6-8 ಲಕ್ಷ ಲೀ/ ಪ್ರತಿ ದಿನ
* ಚೆನ್ನೈನಲ್ಲಿ ಪ್ಯಾಕೇಜ್ ನೀರು ಸಂಸ್ಥೆಗಳ ಸಂಖ್ಯೆ ಸುಮಾರು 309 ನಷ್ಟಿದೆ.
* ಶುಕ್ರ, ಡಯಟ್ ಆಕ್ವಾ, ಸಬೋಲ್ಸ್, ಟ್ರಿನಿಟಾ, ಗಂಗಾರ್, ಸ್ನೋ ಬರ್ಡ್, ಅಕ್ವಾ ಶಕ್ತಿ, ನೀಲಾ, ಶ್ರೀಬಾಲಾಜಿ ಮುಂತಾದ ಸಂಸ್ಥೆಗಳ ಸರಬರಾಜು ವ್ಯತ್ಯಯವಾದರೆ ಕಂಪನಿಗಳು ತತ್ತರಿಸುವುದು ಮಾಮೂಲಿಯಾಗಿದೆ
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications