ಬೆಂಗಳೂರು ರಕ್ತ ಪ್ರಮಾದಕ್ಕೆ ಯುವತಿ ಬಲಿ!

ರಕ್ತಹೀನತೆಯಿಂದ ಬಳಲುತ್ತಿದ್ದ ರಾಜೇಶ್ವರಿ (25) ಅವರಿಗೆ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರು 'ಒ' ಪಾಸಿಟಿವ್ ಗುಂಪಿನ ರಕ್ತದ ಬದಲಿಗೆ 'ಬಿ' ಪಾಸಿಟಿವ್ ನೀಡಿದ್ದಾರೆ. ಪರಿಣಾಮವಾಗಿ, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವತಿ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ.
ನಾಲ್ಕು ವರ್ಷಗಳಿಂದ ರಕ್ತಹೀನತೆಯಿಂದ ಬಳಲುತ್ತಿದ್ದ ರಾಜೇಶ್ವರಿ ಅವರಿಗೆ ನಿಯಮಿತವಾಗಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿಯೇ ರಕ್ತಕೊಡಿಸಲಾಗುತ್ತಿತ್ತು. ಜೂ. 29ರಂದು ರಾಜೇಶ್ವರಿ ತೀವ್ರವಾಗಿ ಅಸ್ವಸ್ಥವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಯಿತು.
ಪರೀಕ್ಷೆ ನಡೆಸಿ, ವೈದ್ಯರು ರಕ್ತ ನೀಡಿದ್ದರು. ಆದರೆ, ಬೇರೆ ಗುಂಪಿನ ರಕ್ತವಾದ್ದರಿಂದ ರಾಜೇಶ್ವರಿ ಅವರ ಆರೋಗ್ಯದಲ್ಲಿ ಹದಗೆಟ್ಟಿದೆ. ಯುವತಿಯು ಸ್ಥಿತಿಕಂಡ ವೈದ್ಯರು ತಮ್ಮ ತಪ್ಪು ಮುಚ್ಚಿಹಾಕಲು ಯತ್ನಿಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ರಾಜೇಶ್ವರಿ ಅವರನ್ನು ದಾಖಲು ಮಾಡುವಂತೆ ಶಿಫಾರಸು ಮಾಡಿದ್ದಾರೆ. ಆದರೆ, ಸೆಂಟ್ ಜಾನ್ಸ್ ನಲ್ಲಿ ಐಸಿಯು ಭರ್ತಿಯಾಗಿದ್ದರಿಂದ ಅವರು ದಾಖಲು ಮಾಡಿಕೊಂಡಿಲ್ಲ.
ನಂತರ ರಾಜೇಶ್ವರಿ ಅವರನ್ನು ಪೋಷಕರು ಮೆಜೆಸ್ಟಿಕ್ ಬಳಿಯ ಶ್ರೀನಿವಾಸ ಆಸ್ಪತ್ರೆಗೆ ಕರೆತಂದಿದ್ದಾರೆ. ಅಲ್ಲಿಂದ ನಂತರ, ವಿಕ್ಟೋರಿಯಾ ಆಸ್ಪತ್ರೆಯ ನೆಪ್ರೊ ನ್ಯೂರಾಲಜಿಗೆ ವಿಭಾಗಕ್ಕೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾಜೇಶ್ವರಿ ಮೃತಪಟ್ಟಿದ್ದಾರೆ.
ಕೆಲಸ ಹುಡುಕುತ್ತಿದ್ದರು : ನಾಗಮಂಗಲ ಸಮೀಪದ ಭೀಮನಹಳ್ಳಿಯ ಗೋವಿಂದಪ್ಪ ಮತ್ತು ಸುಭದ್ರಮ್ಮ ಅವರ ಪುತ್ರಿ ರಾಜೇಶ್ವರಿ ಸಹೋದರಿಯೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಮಲ್ಲೇಶ್ವರಂ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದ ಅವರು ಉದ್ಯೋಗದ ಹುಡುಕಾಟದಲ್ಲಿದ್ದರು.
ಘಟನೆಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ, ರಾಜೇಶ್ವರಿ ಕುಟುಂಬದವರು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಿಂದೆಯೂ ನಡೆದಿತ್ತು : ಹಿಂದೆಯೂ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ರೋಗಿಯ ರಕ್ತದ ಗುಂಪಿನ ಬದಲಿಗೆ ಬೇರೆ ಗುಂಪಿನ ರಕ್ತ ನೀಡಿದ್ದರಿಂದ ಲಕ್ಷ್ಮೀ ಎಂಬುವವರು ಮೃತಪಟ್ಟಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಲೋಕಯುಕ್ತರ ಭೇಟಿ ಫಲ ನೀಡಿಲ್ಲ : ಕೆ.ಸಿ.ಜನರಲ್ ಆಸ್ಪತ್ರಗೆ ಕೆಲವು ದಿನಗಳ ಹಿಂದೆ ಲೋಕಾಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವೈದ್ಯರ ನಿರ್ಲಕ್ಷ್ಯ ಗಮನಿಸಿದರೆ, ಲೋಕಾಯುಕ್ತರ ಭೇಟಿ ಫಲ ನೀಡಿದಂತೆ ಕಾಣುತ್ತಿಲ್ಲ ಅಲ್ಲವೇ?
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications