ಕಾರು ಡಿಕ್ಕಿ ಒಂದೇ ಕುಟುಂಬದ ಮೂವರ ಸಾವು

ಜೈನ್ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ದಕ್ಷಿಣಮೂರ್ತಿ (45), ಇವರ ಪತ್ನಿ ನಾಗವೇಣಿ (35) ಹಾಗೂ ಮಗಳು ಐಶ್ವರ್ಯಾ (14) ಮೃತ ದುರ್ದೈವಿಗಳು.
ಭಾನುವಾರ ತಡರಾತ್ರಿ ಮೂವರು ಪದ್ಮನಾಭನಗರದಿಂದ ಯಲಚೇನಹಳ್ಳಿಯ ತಮ್ಮ ನಿವಾಸಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಸಾರಕ್ಕಿ ಜಂಕ್ಷನ್ನ ಇಲಿಯಾಸ್ ನಗರದ ಬಳಿ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಘಟನೆ ಏನು : ಭಾನುವಾರ ರಜೆ ಇದ್ದ ಕಾರಣ ಬೆಳಗ್ಗೆ ನಾಗವೇಣಿ ಅವರು, ತಮ್ಮ ತವರು ಮನೆ ಪದ್ಮನಾಭನಗರಕ್ಕೆ ಪತಿ ದಕ್ಷಿಣಮೂರ್ತಿ ಮತ್ತು ಮಗಳು ಐಶ್ವರ್ಯಾ ಜತೆ ಬಂದಿದ್ದರು.
ಸೋಮವಾರ ಬೆಳಗ್ಗೆ ಐಶ್ವರ್ಯಾ ಶಾಲೆಗೆ ಹೋಗಬೇಕಾದ್ದರಿಂದ ದಂಪತಿಗಳು ಭಾನುವಾರ ರಾತ್ರಿ ಊಟ ಮುಗಿಸಿ ಯಲಚೇನಹಳ್ಳಿಯಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಆಗ ಒನ್ವೇನಲ್ಲಿ ಬಂದ ಝೆನ್ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರಕಿದ್ದು, ಚಾಲಕ ಪಾನಮತ್ತನಾಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಮಾರಸ್ವಾಮಿ ಲೇಔಟ್ ಪೊಲೀಸರು ಕಾರು ಚಾಲಕನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ರಸ್ತೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications