ಕನ್ನಡ ನಾಡಿನ ಸೂಪರ್ ಫಾಸ್ಟ್ ಸುದ್ದಿಸಂಚಯ

ಮೃತರನ್ನು ತಿಮ್ಮಪ್ಪ(40) ಮತ್ತು ವೆಂಕಟೇಶ್ ಎಂದು ಗುರುತಿಸಲಾಗಿದೆ. ನಾಗರಾಜ್ ಎಂಬುವರಿಗೆ ಸೇರಿದ ಅಂಗಡಿ ಮಳಿಗೆಯ ಪಾಯ ತೆಗೆಯುತ್ತಿದ್ದ ವೇಳೆ, ನೆಲ ಮಾರ್ಗದಲ್ಲಿ ಅಳವಡಿಸಲಾದ ವಿದ್ಯುತ್ ತಂತಿ ತಿಮ್ಮಪ್ಪ ಅವರಿಗೆ ತಗಲಿದೆ. ಇವರನ್ನು ರಕ್ಷಿಸಲು ಬಂದ ವೆಂಕಟೇಶ್ಗೂ ಸಹ ಮೃತಪಟ್ಟಿದ್ದಾರೆ.
ಮಗಳನ್ನೇ ನಾಲೆಗೆ ಎಸೆದ ತಂದೆ : ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಮಗಳನ್ನು ನಾಲೆಗೆ ಎಸೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ತಂದೆ ಸುರೇಶ್ ಪುತ್ರಿ ಸಹನಾ(4)ಳನ್ನು ತುಂಬಿ ಹರಿಯುವ ನಾಲೆಗೆ ಎಸೆದಿದ್ದಾನೆ. ಬದನವಾಳು ಪೊಲೀಸರು ಸುರೇಶ್ ನನ್ನು ಬಂಧಿಸಿದ್ದಾರೆ.
ಬರದ ನಾಡಿನಲ್ಲಿ ನೀರಿನ ಬುಗ್ಗೆ : ಬರದ ನಾಡು ಎಂಬ ಹಣೆಪಟ್ಟಿ ಹೊತ್ತ ಬಾಗೇಪಲ್ಲಿ ತಾಲೂಕಿನಲ್ಲಿ ನೀರಿನ ಚಿಲುಮೆ ದೊರಕಿದ್ದು ಜನರಿಗೆ ಕೊಂಚ ಸಮಾಧಾನ ತಂದಿದೆ. ತಾಲೂಕಿನ ಗುಳೂರು ಆಂಜನೇಯ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ರಾತ್ರಿ ನೀರಿನ ಚಿಲುಮೆ ಕಾಣಿಸಿಕೊಂಡಿದೆ. ಜನರು ಇದನ್ನು ಆಂಜನೇಯ ದೇವರ ಪವಾಡ ಎಂದು ನಂಬಿದ್ದಾರೆ. ನೀರು ಕುಡಿಯಲು ಯೋಗ್ಯವಾಗಿದ್ದು, ಗ್ರಾಮದ ಜನರಿಗೆ ಚಿಲುಮೆಯಿಂದಾಗಿ ಕುಡಿಯುವ ನೀರಿನ ಆಸರೆ ದೊರಕಿದಂತಾಗಿದೆ.
ಎಚ್ಡಿಕೆಗೆ ಸಿದ್ದು ತಿರುಗೇಟು : ನಾನು ಜಾತಿ ರಾಜಕೀಯ ಮಾಡುತ್ತಿಲ್ಲ. ಜಾತಿ ರಾಜಕೀಯ ಯಾರು ಮಾಡುತ್ತಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿರುವ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೋಮವಾರ ತಿರುಗೇಟು ನೀಡಿದ್ದಾರೆ.
ಒಕ್ಕಲಿಗರಿಂದಲೇ ಸಿದ್ದರಾಮಯ್ಯ ಬೆಳೆದದ್ದು ಎಂಬ ಕುಮಾರಸ್ವಾಮಿ ಹೇಳಿಕೆಗೆ ಇಂದು ಪ್ರತಿಕ್ರಿಸಿದ ಸಿಎಂ, ರಾಜಕಾರಣದಲ್ಲಿ ಒಂದೇ ಜಾತಿಯಿಂದ ಯಾರೂ ಬೆಳೆಯಲು ಸಾಧ್ಯವಿಲ್ಲ. ಅವರು(ಕುಮಾರಸ್ವಾಮಿ) ಬೆಳೆದದ್ದು ಯಾರಿಂದ ಎಂದು ಪ್ರಶ್ನಿಸಿದರು. (ಒಕ್ಕಲಿಗರನ್ನು ನಿರ್ಲಕ್ಷಿಸಬೇಡಿ ಸಿಎಂಗೆ ಎಚ್ಡಿಕೆ ಎಚ್ಚರಿಕೆ)
ಭೂಮಿ ಕೊಡಿ ಮುನಿಯಪ್ಪ : ರಾಜ್ಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖನೆಗೆ 1200 ಎಕರೆ ಭೂಮಿಯನ್ನು ಸರ್ಕಾರ ನೀಡಬೇಕೆಂದು ಕೇಂದ್ರ ಸಣ್ಣ ಕೈಗಾರಿಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಸೋಮವಾರ ಸಿಎಂ ಭೇಟಿ ಮಾಡಿದ ಅವರು, ಹಿಂದಿನ ಸರ್ಕಾರ ಭೂಮಿ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದರು.
ಬಂಗಾರಪೇಟೆ ಜೋಡಿ ಕೊಲೆ ರಹಸ್ಯ ಬಯಲು: ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ನಡೆದಿದ್ದ ಕೊಲೆಯ ರಹಸ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ. ಗಂಜಾ ಸೇವನೆ ಮಾಡುತ್ತಿದ್ದ ಮಹಮ್ಮದ್(22) ಎಂಬ ಯುವಕ ಈ ಜೋಡಿ ಕೊಲೆಯನ್ನು ಮಾಡಿದ್ದ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಜಿಎಫ್ ನಿವಾಸಿಯಾದ ಈತ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಗಂಜಾ ಕೊಳ್ಳಲು ಹಣ ಬೇಕಾಗಿದ್ದರಿಂದ ಈತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.(ಕೋಲಾರ : ಮೂರು ಗಂಟೆಯಲ್ಲಿ ಮೂವರ ಕೊಲೆ!)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications