ಜಗನ್ನಾಥ ರಥ ಯಾತ್ರೆ ಫೇಸ್ ಬುಕ್ಕಲ್ಲಿ ಲೈವ್
ಅಹಮದಾಬಾದ್, ಜು.8: ಭಾರತದ ಸುಪ್ರಸಿದ್ಧ ಯಾತ್ರೆಗಳಲ್ಲಿ ಒಂದಾದ ಜಗನ್ನಾಥ ಯಾತ್ರೆಗೆ ಹೋಗಲಾಗದ ಭಕ್ತಾದಿಗಳು ಚಿಂತಿಸಬೇಕಾಗಿಲ್ಲ. ಇನ್ಮುಂದೆ ಜಗನ್ನಾಥ ಸ್ವಾಮಿ ರಥಯಾತ್ರೆಯನ್ನು ಸಾಮಾಜಿಕ ಜಾಲ ತಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲು ದೇಗುಲದ ಆಡಳಿತ ಮಂಡಳಿ ಯೋಜನೆ ಹಾಕಿಕೊಂಡಿದೆ.
ಜು.10 ರಂದು ಸುಮಾರು 400 ವರ್ಷಗಳಷ್ಟು ಇತಿಹಾಸವುಳ್ಳ ಮೋದಿ ನಾಡಿನ ಜಗನ್ನಾಥ ದೇಗುಲದಲ್ಲಿ 136ನೇ ರಥ ಯಾತ್ರೆ ಮಹೋತ್ಸವ ನಡೆಯಲಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಈಗಾಗಲೇ ಜಗನ್ನಾಥ ರಥಯಾತ್ರೆಯ ಬಗ್ಗೆ ಭಕ್ತರು ಹೆಚ್ಚಿನ ಮಾಹಿತಿ ಪಡೆಯಲು ಆರಂಭಿಸಿದ್ದಾರೆ.
ಜಗನ್ನಾಥ ದೇಗುಲದ ಟ್ರಸ್ಟ್ ವೆಬ್ ತಾಣದಿಂದ ಫೇಸ್ ಬುಕ್ ಪುಟಕ್ಕೆ ಲಿಂಕ್ ಇದೆ ನೀವು ಭೇಟಿ ನೀಡಿ.. ಆನ್ ಲೈನ್ ನಲ್ಲೂ ಪೂಜೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.

ಭರ್ಜರಿ ತಯಾರಿ: ಸುಮಾರು 18ಕ್ಕೂ ಅಧಿಕ ಅಲಂಕೃತ ಗಜಪಡೆ, 101 ರಥಗಳು, 38ಕ್ಕೂ ಅಧಿಕ ಅಖಾಡಗಳು ಸ್ತಬ್ದ ಚಿತ್ರಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿವೆ. ಭಾರತೀಯ ಸಂಸ್ಕೃತಿ ಅನಾವರಣಗೊಳಿಸಲು ಕಲಾವಿದರು ಸಜ್ಜಾಗಿದ್ದಾರೆ.
ರೂಢಿಯಂತೆ ಸಂಪ್ರದಾಯ ಗಜಪಡೆ ಮೊದಲಿಗೆ ಜಗನ್ನಾಥ ದೇವರ ದರ್ಶನ ಪಡೆಯಲಿದೆ. ಮೆರವಣಿಗೆಯ ಮುಂದಿನ ಸಾಲಿನಲ್ಲಿ ಗಜಪಡೆ ಸಾಗಲಿದೆ, ನಂತರ ವಿವಿಧ ಧಾರ್ಮಿಕ, ಸಾಂಸ್ಕೃತಿಕ ತಂಡಗಳು ಸೇರ್ಪಡೆಗೊಳ್ಳಲಿದೆ.
ಮೋದಿ ಪೂಜೆ: ಜಗನ್ನಾಥ ದೇವರ ರಥಗಳನ್ನು ಸಾಂಕೇತಿಕವಾಗಿ ಸ್ವಚ್ಛಗೊಳಿಸುವ ಮೂಲಕ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಜಗನ್ನಾಥ, ಬಲರಾಮ ಹಾಗೂ ತಂಗಿ ಸುಭದ್ರಾ ದೇವರ ಉತ್ಸವ ಮೂರ್ತಿಗಳ ಜೊತೆಗೆ ಮೆರವಣಿಗೆ ಸಾಗಲಿದೆ.
ಸುಮಾರು 14 ಕಿ.ಮೀ ದೂರದ ಮೆರವಣಿಗೆ ಕಾಲುಪುರ್, ಪ್ರೇಮ ದರ್ವಾಜಾ, ದೆಹಲಿ ಚಕ್ಲಾ, ದರಿಯಾಪುರ ಹಾಗೂ ಶಹಾಪುರ ಪ್ರದೇಶಗಳಲ್ಲಿ ಸಾಗಲಿದೆ. 400 ವರ್ಷಗಳ ಇತಿಹಾಸವುಳ್ಳ ಜಮಲಾಪುರದ ಜಗನ್ನಾಥ ಯಾತ್ರೆಗೆ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ ಎಂದು ದೇಗುಲದ ಟ್ರಸ್ಟಿ ಮಹೇಂದ್ರ ಝಾ ಹೇಳಿದ್ದಾರೆ.
ಈ ರಥಯಾತ್ರೆ ಕೋಮು ಸಾಮರಸ್ಯದ ಪ್ರತೀಕವಾಗಿದೆ. ಬಡವ ಬಲ್ಲಿದ, ದೀನ ದಲಿತ ಹೀಗೆ ಎಲ್ಲಾ ವರ್ಗದ ಜನರು ಈ ರಥ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 25,000 ಹೆಸರುಕಾಳು, 400 ಕೆಜಿ ಮಾವು, 200 ಕೆಜಿ ದಾಳಿಂಬೆ ಹಾಗೂ 200 ಕೆಜಿ ನೇರಳೆ ಹಣ್ಣನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತದೆ. ಸುಮಾರು 10,000ಕ್ಕೂ ಅಧಿಕ ಪೊಲೀಸ್ ಪಡೆ ರಥಯಾತ್ರೆಗೆ ಭದ್ರತೆ ಒದಗಿಸಲು ಕಾದಿದೆ. ಎಲ್ಲೆಡೆಯಿಂದ ಭಕ್ತ ಸಮೂಹ ಮೋದಿ ನಾಡಿನತ್ತ ಸಾಗುತ್ತಿದೆ.
ಪಿಟಿಐ
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications