ಆಟೋ ಚಾಲಕರಿಂದ ವಿದೇಶಿ ಮಹಿಳೆಯರಿಗೆ ಕಿರುಕುಳ

ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಲಾ ಎಂಬ ಯುವತಿ ಚರ್ಚ್ ನಿಂದ ಮನೆಗೆ ಹೋಗಲು ಆಟೋ ಏರಿದ್ದಾಳೆ. ಮೀಟರ್ ಮೇಲೆ 10 ರೂ. ಹೆಚ್ಚು ಕೊಡಬೇಕು ಎಂಬ ಷರತ್ತಿನ ಮೇಲೆ ಆಟೋ ಹತ್ತಿಸಿಕೊಂಡ ಚಾಲಕ, ದಾರಿಯಲ್ಲಿ ಆಕೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಮೈ ಮುಟ್ಟಲು ಪ್ರಯತ್ನಿಸಿದ್ದಾನೆ ಎಂದು ಯುವತಿ ಬನ್ನೇರುಘಟ್ಟ ಠಾಣೆಗೆ ದೂರು ನೀಡಿದ್ದಾಳೆ.
ಚಾಲಕ ನನ್ನ ಮೈಮುಟ್ಟಲು ಪ್ರಯತ್ನಿಸಿದ. ನನ್ನ ಮೈಬಣ್ಣವನ್ನು ವರ್ಣಿಸಿ ಕಿರುಕುಳ ನೀಡಿದ. ಕನ್ನಡಿ ಮೂಲಕ ನನಗೆ ಫ್ಲೈಯಿಂಗ್ ಕಿಸ್ ಕೊಟ್ಟು ನನಗೆ ಕಿರುಕುಳ ನೀಡಿದ ಎಂದು ಕಾರ್ಲಾ ಎಂಬ ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ. ಆಟೋ ನಂಬರ್ ಪಡೆದಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
ಮತ್ತೊಂದು ಪ್ರಕರಣ : ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಚಾಲಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಹೆಬಾ ಮತ್ತು ಮ್ಯಾರೋ ಎಂಬ ಇಬ್ಬರು ವಿದೇಶಿ ಯುವತಿಯರು ದೂರು ನೀಡಿದ್ದಾರೆ. ಆಟೋ ಚಾಲಕ ನಮಗೆ ಉಗಿದು ಹೋಗಿದ್ದಾನೆ ಎಂಬುದು ಯುವತಿಯರ ದೂರು.
ಈ ಇಬ್ಬರು ಯುವತಿಯರು ಸೋಮವಾರ ಬ್ರಿಗೇಡ್ ರಸ್ತೆಯಿಂದ ಕೋರಮಂಗಲಕ್ಕೆ ಹೋಗಲು ಆಟೋ ಹತ್ತಿದ್ದಾರೆ. ಮೀಟರ್ ಮೇಲೆ 100 ರೂ. ಜಾಸ್ತಿ ಕೇಳಿದ ಚಾಲಕ ಇವರನ್ನು ಕರೆದುಕೊಂಡು ಹೊರಟಿದ್ದಾನೆ. ಆಟೋವನ್ನು ವೇಗವಾಗಿ ಓಡಿಸಿ ನಮ್ಮನ್ನು ಗಾಬರಿಗೊಳಿಸಿದ್ದಾನೆ. ನಾವು ವಿಳಾಸ ಕೇಳಲು ನಿಲ್ಲಿಸಲು ಹೇಳಿದರೂ ನಿಲ್ಲಿಸದೆ ಕಿರುಕುಳ ನೀಡಿದ್ದಾನೆ ಎಂದು ಯುವತಿಯರು ಆರೋಪಿಸುತ್ತಾರೆ.
ಆಟೋ ವೇಗವಾಗಿ ಹೋಗುವುದು ಕಂಡು ಕೂಗಿಕೊಂಡ ಯುವತಿಯರನ್ನು ಆಟೋದಿಂದ ಇಳಿಸಿದ ಚಾಲಕ ಹೇಳಿದ ದರಕ್ಕಿಂತ 100 ರೂ. ಜಾಸ್ತಿ ಹೇಳಿದ್ದಾನೆ. ಇವರು ಕೊಡಲು ನಿರಾಕರಿಸಿದಾಗ ಅವರಿಗೆ ಉಗಿದಿದ್ದಾನೆ ಎಂದು ಯವತಿಯರು ಪೊಲೀಸರ ಬಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications