ಮಂಡ್ಯ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಫ್ಲೈಓವರ್

ಮಂಡ್ಯದಲ್ಲಿ ಈ ಯೋಜನೆ ಕುರಿತು ಮಾಹಿತಿ ನೀಡಿದ ವಸತಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್, ಮಂಡ್ಯ ನಗರದಲ್ಲಿ ಬೆಂಗಳೂರು-ಮೈಸೂರು ವಾಹನಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದನ್ನು ಕಡಿಮೆ ಮಾಡಲು ಫ್ಲೈ ಓವರ್ ನಿರ್ಮಿಸಲು ಚಿಂತಿಸಲಾಗಿದೆ ಎಂದರು.
ಉಮ್ಮಡಹಳ್ಳಿ ಗೇಟ್ ನಿಂದ ಸಿದ್ದಯ್ಯನ ಕೊಪ್ಪಲುವರೆಗೆ ಏಳು ಕಿ.ಮೀ. ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸಲು ಜಿಲ್ಲಾಡಳಿತ ಯೋಜನೆ ಸಿದ್ಧಗೊಳಿಸಿದೆ. ಶೀಘ್ರದಲ್ಲೇ ಇದರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಅಂಬರೀಶ್ ತಿಳಿಸಿದರು.
ಈ ಯೋಜನೆಗೆ 317 ಕೋಟಿ ಅನುದಾನ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಕುರಿತು ಮಾತುಕತೆ ನಡೆಸಿದ್ದು, ಬಜೆಟ್ ನಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅಂಬರೀಶ್ ತಿಳಿಸಿದರು.
ಯೋಜನೆ ಬೇರೆ ಇತ್ತು : ಮಂಡ್ಯ ನಗರದ ಸುತ್ತಲೂ ರಿಂಗ್ ರೋಡ್ ನಿರ್ಮಿಸುವ ಆಲೋಚನೆ ಇತ್ತು. ಆದರೆ, ನಗರದ ಸುತ್ತಲೂ ಕೃಷಿಯೋಗ್ಯ ಭೂಮಿ ಇದ್ದು, ರಿಂಗ್ ರೋಡ್ ನಿರ್ಮಿಸಲು ರೈತರ ಜಮೀನು ವಶಪಡಿಸಿಕೊಳ್ಳಬೇಕಾಗುತ್ತದೆ. ಆದ್ದರಿಂದ ಫ್ಲೈ ಓವರ್ ನಿರ್ಮಾಣ ಯೋಜನೆ ರೂಪಿಸಲಾಗಿದೆ ಎಂದರು.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಮಂಡ್ಯವನ್ನು ವಾಹನಗಳು ಕ್ರಮಿಸಲು ಒಂದು ಗಂಟೆಗೂ ಹೆಚ್ಚುಕಾಲ ಬೇಕಾಗುತ್ತದೆ. ಆದ್ದರಿಂದ ಫ್ಲೈ ಓವರ್ ನಿರ್ಮಾಣ ಅಗತ್ಯವಾಗಿದೆ ಎಂದು ಅಂಬರೀಶ್ ವಿಶ್ಲೇಷಿಸಿದರು. (ಆರು ಪಥವಾಗಲಿದೆ ಬೆಂಗಳೂರು-ಮೈಸೂರು ಹೆದ್ದಾರಿ?)
ಮತ್ತಷ್ಟು ಫ್ಲೈ ಓವರ್ : ಬೆಂಗಳೂರು ಮತ್ತು ಮೈಸೂರು ಹೆದ್ದಾರಿ ಸಾಗುವ ರಾಮನಗರ, ಚನ್ನಪಟ್ಟಣದಲ್ಲೂ ಫ್ಲೈ ಓವರ್ ನಿರ್ಮಿಸಲು ಯೋಜನೆ ತಯಾರಿಸಲಾಗುತ್ತಿದೆ. ಆದರೆ, ಮಂಡ್ಯ ಜಿಲ್ಲೆಯ ಫ್ಲೈ ಓವರ್ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications